LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೋಂ ಸ್ಟೇಗಳಲ್ಲಿ ಗ್ಯಾಸ್ ಗೀಸರ್ ಬಳಸುವಂತಿಲ್ಲ, ನೋಂದಣಿ ಕಡ್ಡಾಯ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹೋಂ-ಸ್ಟೇ ನಡೆಸುವ ಮಾಲೀಕರು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ನಿಯಮಾನುಸಾರ ಹೋಂ-ಸ್ಟೇ ನೋಂದಣಿ ಮಾಡಿಕೊಳ್ಳಲು ಸರ್ಕಾರದ ಪ್ರವಾಸೋದ್ಯಮ ನೀತಿ ಹಾಗೂ ಮಾರ್ಗಸೂಚಿಗಳಿಗೆ ಬದ್ಧರಿದ್ದಲ್ಲಿ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ನಿರಾಕ್ಷೇಪಣಾ ಪತ್ರಗಳನ್ನು ಪಡೆದುಕೊಂಡಿರುವ ಮಾಲೀಕರಿಗೆ ಪ್ರವಾಸೋದ್ಯಮ ಇಲಾಖೆಯಿಂದ 5 ವರ್ಷದ ಅವಧಿಗೆ ಪರವಾನಿಗೆಯನ್ನು ನೀಡಲಾಗಿದೆ.

ಹೋಂ-ಸ್ಟೇ ನಡೆಸುವ ಮಾಲೀಕರು ಪ್ರವಾಸಿಗರ ಮನೋರಂಜನೆಗಾಗಿ ಹೋಂ-ಸ್ಟೇಗಳಲ್ಲಿ ಈಜುಕೊಳ, ಜಿಪ್‍ಲೈನ್, ಕಾಯಾಕಿಂಗ್ ಮತ್ತು ಇತರೆ ಸಾಹಸ ಚಟುವಟಿಕೆ ಅಳವಡಿಸಿಕೊಂಡಿರುತ್ತಾರೆ. ಈ ಚಟುವಟಿಕೆಗಳನ್ನು ನಡೆಸುವ ಸಂಬಂಧ ಸರಿಯಾದ ಮಾರ್ಗಸೂಚಿ ಅನುಸರಿಸುವುದು ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು. ಇವುಗಳಿಂದ ಪ್ರವಾಸಿಗರಿಗೆ ತೊಂದರೆಗಳು ಉಂಟಾದಲ್ಲಿ ಮಾಲೀಕರೇ ನೇರ ಹೊಣೆಗಾರರಾಗಿರುತ್ತಾರೆ.

ಹೋಂ-ಸ್ಟೇಗಳಲ್ಲಿ ಗ್ಯಾಸ್ ಗೀಸರ್ ಬಳಸುವಂತಿಲ್ಲ ಎಂದು ಈಗಾಗಲೇ ತಿಳಿಸಿದರೂ ಸಹ, ಹಲವು ಹೋಂ-ಸ್ಟೇಗಳಲ್ಲಿ ಗ್ಯಾಸ್ ಗೀಸರ್ ಬಳಕೆಯಲ್ಲಿರುವುದು ಕಂಡು ಬಂದಿರುತ್ತದೆ. ಗ್ಯಾಸ್ ಗೀಸರ್ ಬಳಕೆಯಿಂದ ಅನಾಹುತಗಳು ಸಂಭವಿಸಿದಲ್ಲಿ ಹೋಂ-ಸ್ಟೇ ಮಾಲೀಕರೇ ನೇರ ಹೊಣೆಗಾರರಾಗಿರುತ್ತಾರೆ. ಇಲಾಖೆಯು ನೀಡುವ ಮಾರ್ಗಸೂಚಿ ಪಾಲಿಸುವುದರೊಂದಿಗೆ ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿರುವಂತೆ ಸಹಕರಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಶಶಿಧರ ಅವರು ತಿಳಿಸಿದ್ದಾರೆ.

ಚಿತ್ರಕೃಪೆ: ಎಐ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ