LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾನೇನಾದರೂ ಕೋಚ್ ಆಗಿದ್ದರೆ ಬೇರೆ ತಂಡದ ಆಟಗಾರನಿಗೆ ಹೊಡೆಯಲು ಹೋದ ವೈಭವ್ ಸೂರ್ಯವಂಶಿಯನ್ನು ತಂಡದಿಂದ ಆಚೆ ಹಾಕ್ತಿದ್ದೆ; ಕಿಡಿಕಾರಿದ ಹಿರಿಯ ಕ್ರಿಕೆಟಿಗ

ಜೂನ್ 15ರಂದು ಡಂಬುಲ್ಲಾ ಕ್ರೀಡಾಂಗಣದಲ್ಲಿ ನಡೆದ ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ತ್ರಿಕೋನ ಸರಣಿಯ ನಾಲ್ಕನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡು ಸೂಪರ್ ಓವರ್ ನಡೆಯಿತು. ಈ ರೋಚಕ ಪಂದ್ಯದಲ್ಲಿ ಶ್ರೀಲಂಕಾ ಎ ತಂಡ ಗೆದ್ದುಬೀಗಿತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 49.2 ಓವರ್‌ಗಳಲ್ಲಿ 265 ರನ್‌ಗಳಿಗೆ ಆಲ್‌ಔಟ್ ಆಗಿ ಭಾರತ ತಂಡಕ್ಕೆ 266 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಶ್ರೀಲಂಕಾ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿತು. ಈ ಮೂಲಕ ಪಂದ್ಯ ಡ್ರಾ ಆಯಿತು.

ಬಳಿಕ ನಡೆದ ಸೂಪರ್ ಓವರ್‌ನಲ್ಲಿ ಶ್ರೀಲಂಕಾ 16 ರನ್ ಬಾರಿಸಿ ಭಾರತಕ್ಕೆ 17 ರನ್‌ಗಳ ಸವಾಲಿನ ಗುರಿಯನ್ನು ನೀಡಿತು. ಆದರೆ ಭಾರತ ಕೇವಲ 9 ರನ್ ಕಲೆಹಾಕಿ 7 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿತು.

ಲಂಕಾ ಸೂಪರ್ ಓವರ್‌ನಲ್ಲಿ ನೀಡಿದ ಗುರಿ ಬೆನ್ನಟ್ಟಿದ ಭಾರತದ ಪರ ಸೂರ್ಯನ್ಶ್ ಶೆಡ್ಗೆ ಹಾಗೂ ವೈಭವ್ ಸೂರ್ಯವಂಶಿ ಕಣಕ್ಕಿಳಿದರು. ಮೊದಲ ಎಸೆತಕ್ಕೆ ಎರಡು ರನ್ ಬಾರಿಸಿ ಎರಡನೇ ಎಸೆತ ನುಂಗಿದ ಶೆಡ್ಗೆ ಮೂರನೇ ಎಸೆತದಲ್ಲಿ ಒಂದು ರನ್ ಗಳಿಸಿದರು. ನಂತರ ವೈಭವ್ ಸೂರ್ಯವಂಶಿ ನಾಲ್ಕನೇ ಎಸೆತದಲ್ಲಿ ಎರಡು ರನ್, ಐದನೇ ಎಸೆತದಲ್ಲಿ ಬೌಂಡರಿ ಬಾರಿಸಿ ಕೊನೆಯ ಎಸೆತದಲ್ಲಿ ರನ್ ಬಾರಿಸಲಾಗದೇ ಓವರ್ ಮುಗಿಸಿದರು.

ಹೀಗೆ ಪಂದ್ಯ ಸೋತು ಶೆಡ್ಗೆ ಹಾಗೂ ವೈಭವ್ ಪೆವಿಲಿಯನ್‌ನತ್ತ ಹೆಜ್ಜೆ ಹಾಕಲು ಮುಂದಾದಾಗ ಶ್ರೀಲಂಕಾ ಆಟಗಾರರು ಸಂಭ್ರಮಾಚರಣೆ ಮಾಡುತ್ತಿದ್ದರು. ಆ ಸಮಯದಲ್ಲಿ ಶ್ರೀಲಂಕಾದ ಆಟಗಾರ ಪ್ರಚೋದಿಸುವ ಮಾತುಗಳನ್ನಾಡಿದರು ಎಂಬ ಕಾರಣಕ್ಕೆ ವೈಭವ್ ಸೂರ್ಯವಂಶಿ ತಾಳ್ಮೆ ಕಳೆದುಕೊಂಡು ಆ ಆಟಗಾರನತ್ತ ಸಾಗಿ ಕೈನಿಂದ ತಳ್ಳಿ ಹಲ್ಲೆ ಯತ್ನ ಮಾಡಿದ್ದರು.

ಈ ಘಟನೆ ಕ್ರಿಕೆಟ್ ಲೋಕದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿತ್ತು. ವೈಭವ್ ಸೂರ್ಯವಂಶಿಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಹಲವಾರು ಮಂದಿ ಎದುರಾಳಿ ಆಟಗಾರರು ಏನೇ ಹೇಳಲಿ, ಅದಕ್ಕೆ ಕೈ ಎತ್ತುವ ಅಗತ್ಯವೇನಿದೆ, ಚಿಕ್ಕ ಹುಡುಗ ವೈಭವ್‌ಗೆ ಸರಿಯಾದ ಬುದ್ದಿವಾದದ ಅವಶ್ಯಕತೆ ಇದೆ ಎಂದಿದ್ದರು.

ಈ ಕುರಿತು ಸದ್ಯ ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಟ್ವೀಟ್ ಮಾಡಿದ್ದು, ‘ನಾನೇನಾದರೂ ಭಾರತ ಎ ತಂಡದ ಕೋಚ್ ಅಥವಾ ಮ್ಯಾನೇಜರ್ ಆಗಿದ್ದರೆ ಇಂದು ಅಫ್ಘಾನಿಸ್ತಾನದ ವಿರುದ್ಧ ನಡೆಯುತ್ತಿರುವ ಪಂದ್ಯದಿಂದ ಆತನನ್ನು ಹೊರಹಾಕುತ್ತಿದ್ದೆ. ಎದುರಾಳಿಗಳು ಏನೇ ಪ್ರಚೋದನೆ ಮಾಡಲಿ, ಮೈದಾನದಲ್ಲಿ ಕೈ ಮಾಡಲು ಮುಂದಾಗುವುದು ಸರಿಯಲ್ಲ ಎಂಬುದು ಆತನಿಗೆ ಅರ್ಥವಾಗಲಿ ಎಂಬುದು ನನ್ನ ಉದ್ದೇಶ’ ಎಂದು ಬರೆದುಕೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಗುಡ್ ನ್ಯೂಸ್: ಸತತ 2ನೇ ದಿನವೂ ಇಳಿಕೆಯಾದ ಚಿನ್ನದ ಬೆಲೆ ಇಂದಿನ ಲೇಟೆಸ್ಟ್ ದರ ವಿವರ ಇಲ್ಲಿದೆಮಗನಿಗಾಗಿ ಜಮೀನು ಮಾರಿದ ತಂದೆ, ಮುಂಜಾನೆ 3ಕ್ಕೆ ಏಳುತ್ತಿದ್ದ ತಾಯಿ: ಬಿಹಾರದ ಹಳ್ಳಿಯಿಂದ ಐಪಿಎಲ್‌ಗೆ ಬಂದ ವೈಭವ್ ಸೂರ್ಯವಂಶಿ ಯಶೋಗಾಥೆ!ಧರ್ಮಸ್ಥಳ ಕೇಸ್ : ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ ; ನಟ ‘ಪ್ರಕಾಶ್ ರಾಜ್’ ಸ್ಪೋಟಕ ಹೇಳಿಕೆಸಿಎಂ ಆದಮೇಲೂ ಡಿಕೆಶಿ ಬ್ಲೂ ಫಿಲಂ ಮಾಡಿಸುವ, ಪೋಸ್ಟರ್ ಅಂಟಿಸುವ ಚಾಳಿ ಬಿಟ್ಟಿಲ್ಲ; ಎಚ್‌ಡಿ ಕುಮಾರಸ್ವಾಮಿ ವ್ಯಂಗ್ಯBIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘ಕರ್ತವ್ಯ’ ಆ್ಯಪ್ ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಲು ಸೂಚನೆ.!ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ‘EPFO’ ಚಂದಾದಾರರಿಗೆ ಬಿಗ್ ಅಲರ್ಟ್ ; ಬಡ್ಡಿ ಜಮಾ ಬಗ್ಗೆ ಪ್ರಮುಖ ಅಪ್‌ಡೇಟ್ ಇಲ್ಲಿದೆ‘ಹಿಂದೂ ಹೃದಯ ಸಾಮ್ರಾಟ್’ ಬಾಳಾ ಠಾಕ್ರೆ ಕಟ್ಟಿದ ಶಿವಸೇನೆ ಇಂದು ಇಬ್ಭಾಗ; ಅಸ್ತಿತ್ವಕ್ಕಾಗಿ ಹೋರಾಟದಲ್ಲಿ ಉದ್ಧವ್ ಠಾಕ್ರೆ!SHOCKING : ಪ್ರೇಯಸಿಯನ್ನು ಕೊಂದು ಶವವನ್ನೇ ಅಪ್ಪಿಕೊಂಡು ಮಲಗಿದ್ದ ಪ್ರಿಯಕರ ; ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಭವಾನಿ ಕೊಲೆ ಕೇಸ್.!“ಇವರ ಬೆದರಿಕೆಗೆ ನಾವು ಹೆದರಲ್ಲ”: ಡಿಕೆಶಿ ವಿರುದ್ಧ ಕೆಂಡಾಮಂಡಲರಾದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ