LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಈಡಿಗ ಸಮುದಾಯದ ಗುರುಗಳಿಗೆ ಜೀವ ಬೆದರಿಕೆ; ಭದ್ರತೆ ಒದಗಿಸುವಂತೆ ಸಿಎಂ ಡಿಕೆಗೆ ಮನವಿ ಪತ್ರ

ಬೆಂಗಳೂರು: ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕಲಬುರ್ಗಿ ಶ್ರೀ ಶರಣಬಸವೇಶ್ವರ ಮಠ ಹಾವೇರಿ ಪೀಠಾಧಿಪತಿಗಳಾದ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಟ್ರಸ್ಟ್ ಹಾಗೂ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ಸ್ವಾಮೀಜಿಗಳು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿಗಳ ಸದಾಶಿವನಗರ ನಿವಾಸಕ್ಕೆ ಸ್ವಾಮೀಜಿಗಳು ಬುಧವಾರ ಭೇಟಿ ನೀಡಿ ಮನವಿ ಮಾಡಿದರು. ಸರ್ವಧರ್ಮ ಸಮಾಜದ ಶ್ರೀ ಸಂಗಮಾನಂದ ಸ್ವಾಮೀಜಿ, ವಿಶ್ವಕರ್ಮ ಸಮಾಜದ ಶ್ರೀ ದೊಡ್ಡೇಂದ್ರ ಸ್ವಾಮೀಜಿ, ಬಂಜಾರ ಸಮಾಜದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಕುಂಬಾರ ಸಮಾಜದ ಶ್ರೀ ಬಸವಮೂರ್ತಿ ಕುಂಬಾರ ಗುಡ್ಡಯ್ಯ ಸ್ವಾಮೀಜಿ, ಹೂಗಾರ ಸಮಾಜದ ಹಳ್ಳಿರಾಯ ನಾಟಿಕಾರ ಸ್ವಾಮೀಜಿ, ಅರೆ ಅಲೆಮಾರಿ ಸಮಾಜದ ಶ್ರೀ ಕರುಣಾಕರ ಸ್ವಾಮೀಜಿ, ಪಿಂಜಾರ ಸಮಾಜದ ಶ್ರೀ ಮರುಳಶಂಕರ ಸ್ವಾಮೀಜಿಗಳು ಮನವಿ ಸಲ್ಲಿಸಿದರು.

ಶ್ರೀ ಪ್ರಣಾವಾನಂದರಾಮ್ ಮಹಾಸ್ವಾಮಿಗಳು ಈಡಿಗ ಹಾಗೂ ಹಿಂದುಳಿದ ಸಮಾಜಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಗೋಕರ್ಣದಲ್ಲಿ ನಡೆದ ಸಮಾಜ ಸಭೆಯಲ್ಲಿ ಧ್ವನಿ ಎತ್ತಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಮುದಾಯಗಳಿಗೂ ಸಮನಾಗಿ ಅನುದಾನ ಬಿಡುಗಡೆ ಮಾಡಬೇಕಿತ್ತು ಎಂದು ಆಗ್ರಹಿಸಿದ್ದರು. ಹೀಗಾಗಿ ಸ್ವಾಮೀಜಿಗಳ ವಿರುದ್ಧ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕುರುಬ ಸಮಾಜದ ಸಂಘಟನೆಗಳು ಹಾಗೂ ಅವುಗಳ ಕೆಲವು ಮುಖಂಡರು ಶ್ರೀಗಳ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಟಿವಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಕಾಮೆಂಟ್ ಗಳಲ್ಲಿ ಇದೇ ಸಮುದಾಯಕ್ಕೆ ಸೇರಿದವರು ಶ್ರೀಗಳನ್ನು ಕೊಲ್ಲುತ್ತೇವೆ ಎಂದು ಬರೆದಿದ್ದಾರೆ. ಜಾತಿಗಳ ಮಧ್ಯೆ ಘರ್ಷಣೆ ಆಗಬಾರದು ಹಾಗೂ ಶ್ರೀಗಳಿಗೆ ತೊಂದರೆ ಆಗಬಾರದು. ಹೀಗಾಗಿ ಪ್ರಣಾವಾನಂದರಾಮ್ ಮಹಾಸ್ವಾಮಿಗಳಿಗೆ ಭದ್ರತೆ ಒದಗಿಸಬೇಕು” ಎಂದು ಮನವಿ ಮಾಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಭಾನುವಾರ ಜೆಡಿಎಸ್ ಸೇರ್ಪಡೆಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ ಸಾವಿನ ಕಾರಣ ಬಹಿರಂಗBREAKING : ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ‘PSI’ ಆತ್ಮಹತ್ಯೆ , ಕಾರಣ ನಿಗೂಢ.!ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಭಗವಾನ್ ತಿಕ್ಕಲುತನ ಪ್ರದರ್ಶಿಸಿದ್ದಾರೆ; ವಿಎಸ್ ಉಗ್ರಪ್ಪ ಕಿಡಿJOB ALERT : 14 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಈಡಿಗ ಸಮುದಾಯದ ಗುರುಗಳಿಗೆ ಜೀವ ಬೆದರಿಕೆ; ಭದ್ರತೆ ಒದಗಿಸುವಂತೆ ಸಿಎಂ ಡಿಕೆಗೆ ಮನವಿ ಪತ್ರBREAKING : ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ : ಕರ್ನಾಟಕ ವಿ.ವಿ ಪ್ರೊ. ದೇವರಾಜನ್ ತಂಗದುರೈ ಅಮಾನತು.!ಬೆಲೆ ಕುಸಿತದಿಂದ ಕಂಗೆಟ್ಟ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಬರುವಂತೆ ಕೇಂದ್ರದ ಕೃಷಿ ಸಚಿವರಿಗೆ ಎಚ್‌ಡಿಕೆ ಮನವಿಪಿಡಿಒ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆವಕೀಲೆಯಾಗಿ ಕೀರ್ತಿ ಸುರೇಶ್ ಅಬ್ಬರ: ‘ಸತ್ಯವಾನ್ ಸಾವಿತ್ರಿ’ ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್