LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಜ್ಜನ ವೈಯಕ್ತಿಕ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಪಾಲು ಕೇಳಲು ಅವಕಾಶವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಜ್ಜ ತನ್ನ ಜೀವಿತಾವಧಿಯಲ್ಲಿ ಸ್ವಂತವಾಗಿ ಸಂಪಾದಿಸಿದ ಆಸ್ತಿಯು ವಿಭಜನೆಯ ನಂತರ ತಂದೆಯ ಕೈ ಸೇರಿದರೂ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆಯೇ ಹೊರತೂ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗುವುದಿಲ್ಲ. ಈ ರೀತಿ ವಿಭಜನೆಯಾದ ಆಸ್ತಿಯಲ್ಲಿ ಪಾಲು ಕೇಳಲು ಮೊಮ್ಮಗಳಿಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಡಿ.ಕೆ. ಸಿಂಗ್ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ಈ ಆದೇಶ ನೀಡಿದೆ ಅಮೆರಿಕದಲ್ಲಿ ನೆಲೆಸಿದ ಉಷಾ ಎನ್. ಸ್ವಾಮಿ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ.

ಉಷಾ ಅವರು ಉಲ್ಲೇಖಿಸಿದ ಆಸ್ತಿಗಳನ್ನು ಆಕೆಯ ಅಜ್ಜ ಅಂದರೆ ತಂದೆಯ ತಂದೆ ಸ್ವಂತವಾಗಿ ಸಂಪಾದಿಸಿದ್ದರು ಎನ್ನುವುದು ದಾಖಲೆಗಳಿಂದ ತಿಳಿದು ಬಂದಿದೆ. ಈ ಆಸ್ತಿಯನ್ನು ಅವರ ತಾತಾ ಅವರ ಮಕ್ಕಳಿಗೆ ಕೌಟುಂಬಿಕ ಒಪ್ಪಂದದ ಮೂಲಕ ಆಸ್ತಿ ಹಂಚಿಕೆ ಮಾಡಿದ್ದಾರೆ. ಅಜ್ಜನ ಸ್ವಯಾರ್ಜಿತ ಆಸ್ತಿ ಭಾಗವಾಗಿ ತಂದೆಗೆ ಬಂದಾಗ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆ. ಆದರೆ ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ತಂದೆಗೆ ತನ್ನ ಸ್ವಯಾರ್ಜಿತ ಆಸ್ತಿಯನ್ನು ಯಾರಿಗಾದರೂ ವಿಲೇವಾರಿ ಮಾಡುವ ಸಂಪೂರ್ಣ ಹಕ್ಕು ಇರುತ್ತದೆ. ಈ ಆಸ್ತಿಗಳು ಹಿಂದೂ ಅವಿಭಕ್ತ ಕುಟುಂಬದ ಆಸ್ತಿಗಳಾಗಿದ್ದವು ಎಂಬುದನ್ನು ಸಾಬೀತುಪಡಿಸಲು ಮೇಲ್ಮನವಿದಾರರಾದ ಉಷಾ ಅವರು ಅಗತ್ಯ ಸಾಕ್ಷ್ಯಗಳನ್ನು ಒದಗಿಸಿಲ್ಲ. ತಾತನ ಸ್ವಯಂ ಸಂಪಾದಿತ ಆಸ್ತಿಗಳನ್ನು ಜಂಟಿ ಕುಟುಂಬದ ಆಸ್ತಿಗಳೆಂದು ಹೇಳಿ ತಾನು ಭಾಗ ಪಡೆಯಬಹುದು ಎಂದು ವಾದಿಸಲು ಸಾಧ್ಯವಿಲ್ಲ. ಆದ್ದರಿಂದ ಅವರಿಗೆ ಈ ಆಸ್ತಿಗಳಲ್ಲಿ ಯಾವುದೇ ಕಾನೂನಾತ್ಮಕ ಹಕ್ಕು ಇರುವುದಿಲ್ಲ ಎಂದು ನ್ಯಾಯ ಪೀಠ ತಿಳಿಸಿದೆ.

ಉಷಾ ಎನ್. ಸ್ವಾಮಿ 1979ರಲ್ಲಿ ವೈದ್ಯರಾದ ಜವರಯ್ಯ ಎನ್. ಸ್ವಾಮಿಯವರನ್ನು ಮದುವೆಯಾಗಿದ್ದು, ಪತಿಯೊಂದಿಗೆ ಅಮೆರಿಕದಲ್ಲಿ ವಾಸಿಸುತ್ತಿದ್ದರು. ಅವರ ಗಮನಕ್ಕೆ ಬಾರದೆ ಕುಟುಂಬಕ್ಕೆ ಸೇರಿದ 10 ಎಕರೆ ಜಮೀನನ್ನು ಪೋಷಕರು ಮಾರಾಟ ಮಾಡಿದ್ದಾರೆ. ತಂದೆಗೆ ಸೇರಿದ ಪಿತ್ರಾರ್ಜಿತ ಆಸ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಿ ಲಾಭ ಗಳಿಸಿದ್ದಾರೆ. ಈ ಲಾಭ ಅಂಶದ ಹಣದಲ್ಲಿ ಇತರೆ ಆಸ್ತಿಗಳನ್ನು ಗಳಿಸಿದ್ದಾರೆ. ಈ ಮೂಲ ಆಸ್ತಿಗಳು ಪೂರ್ವಜರಿಂದ ಬಂದ ಜಂಟಿ ಕುಟುಂಬದ ಆಸ್ತಿಗಳಾಗಿದ್ದು, ತಮಗೆ ಪಾಲು ಸಿಗಬೇಕು. ಈ ಎಲ್ಲಾ ಆಸ್ತಿಗಳು ಮತ್ತು ಬ್ಯಾಂಕ್ ಠೇವಣಿಯಲ್ಲಿಯೂ ತಾನು ಭಾಗ ಪಡೆಯಲು ಅಧಿಕಾರವಿದೆ. ಹೀಗಾಗಿ ಆಸ್ತಿಯಲ್ಲಿ ತನಗೆ ಭಾಗ ನೀಡಲು ನಿರ್ದೇಶನ ನೀಡಬೇಕು ಎಂದು ಅಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ