LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಯಾಂಡಲ್’ವುಡ್ ನಟಿ ‘ಶರ್ಮಿಳಾ ಮಾಂಡ್ರೆ’ ಮದುವೆ ಫಿಕ್ಸ್.! ವರ ಯಾರು ಗೊತ್ತೇ..?

ಬೆಂಗಳೂರು :   ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶರ್ಮಿಳಾ ಮಾಂಡ್ರೆ ಅವರು ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ. ಅವರು ತಮಿಳಿನ ಖ್ಯಾತ ನಿರ್ಮಾಪಕ ಸುಧನ್ ಸುಂಧರಮ್ ಅವರೊಂದಿಗೆ ವಿವಾಹವಾಗಲಿದ್ದಾರೆ.

ಈ ಜೋಡಿಯ ನಿಶ್ಚಿತಾರ್ಥವು ಜೂನ್ 25ರಂದು ನಡೆಯಲಿದೆ. ನಿಶ್ಚಿತಾರ್ಥದ ನಂತರ, ಇದೇ ವರ್ಷದೊಳಗೆ ಮದುವೆ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಎರಡೂ ಕುಟುಂಬದವರು ನಿರ್ಧರಿಸಿದ್ದಾರೆ.

ಸುಧನ್ ಸುಂಧರಮ್ ಯಾರು..?

ಸುಧನ್ ಸುಂಧರಮ್ ಅವರು ವಿಜಯ್ ಸೇತುಪತಿ ಅವರ ‘ಮಹಾರಾಜಾ’, ‘ತಾಯ್ ಕಿಳವಿ’, ‘ಸೀತಾಕಾಥಿ’ ಮತ್ತು ‘ಅನ್ನಾಬೆಲ್ಲೆ ಸೇತುಪತಿ’ ಮುಂತಾದ ಚಿತ್ರಗಳಿಗೆ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಶರ್ಮಿಳಾ ಮಾಂಡ್ರೆ ಅವರು ‘ಸಜನಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ್ದು, ಇತ್ತೀಚೆಗೆ ‘ಡೆವಿಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮಿಳು ಚಿತ್ರರಂಗದ ಹೆಸರಾಂತ ನಿರ್ಮಾಪಕ ಸುಧನ್ ಸುಂಧರಮ್ ಅವರೊಂದಿಗೆ ಶರ್ಮಿಳಾ ಮಾಂಡ್ರೆ ಅವರ ವಿವಾಹ ನಿಶ್ಚಯವಾಗಿದ್ದು, ಜೂನ್ 25ರಂದು ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಂಡಿರುವ ಶರ್ಮಿಳಾ ಮಾಂಡ್ರೆ, ಹಲವು ಯಶಸ್ವಿ ಚಿತ್ರಗಳ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಇದೀಗ ಅವರ ಮದುವೆ ಸುದ್ದಿ ಸಿನಿಪ್ರಿಯರಲ್ಲಿ ಸಂತಸ ಮೂಡಿಸಿದೆ. ಕುಟುಂಬ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆಯಲಿದ್ದು, ಬಳಿಕ ಮದುವೆ ಸಿದ್ಧತೆಗಳು ಆರಂಭವಾಗಲಿವೆ.

ಇನ್ನೊಂದೆಡೆ, ಸುಧನ್ ಸುಂಧರಮ್ ತಮಿಳು ಚಿತ್ರರಂಗದ ಪ್ರಮುಖ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ಅವರು ಮಹಾರಾಜಾ, ಸೀತಾಕಾಥಿ, ಅನ್ನಾಬೆಲ್ಲೆ ಸೇತುಪತಿ ಸೇರಿದಂತೆ ಹಲವು ಯಶಸ್ವಿ ಚಿತ್ರಗಳ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರ ನಿರ್ಮಾಣ ಸಂಸ್ಥೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿಶಿಷ್ಟ ಗುರುತನ್ನು ಪಡೆದಿದೆ.

ಶರ್ಮಿಳಾ ಮಾಂಡ್ರೆ ಅವರು 2008ರಲ್ಲಿ ಬಿಡುಗಡೆಯಾದ ಸಜನಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಹಲವು ಕನ್ನಡ ಹಾಗೂ ಬಹುಭಾಷಾ ಚಿತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದರು. ಇತ್ತೀಚೆಗೆ ಬಿಡುಗಡೆಯಾದ ಡೆವಿಲ್ ಚಿತ್ರದಲ್ಲೂ ಅವರು ಅಭಿನಯಿಸಿದ್ದರು.ಮೂಲಗಳ ಪ್ರಕಾರ, ನಿಶ್ಚಿತಾರ್ಥದ ನಂತರ ಇದೇ ವರ್ಷದೊಳಗೆ ಮದುವೆ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಎರಡೂ ಕುಟುಂಬಗಳು ತೀರ್ಮಾನಿಸಿವೆ. ಈ ಸಂತಸದ ಸುದ್ದಿಗೆ ಅಭಿಮಾನಿಗಳು ಹಾಗೂ ಸಿನಿತಾರೆಯರು ಶುಭಾಶಯಗಳ ಮಹಾಪೂರ ಹರಿಸುತ್ತಿದ್ದಾರೆ.ನಿಶ್ಚಿತಾರ್ಥದ ನಂತರ, ಇದೇ ವರ್ಷದೊಳಗೆ ಮದುವೆ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಎರಡೂ ಕುಟುಂಬದವರು ನಿರ್ಧರಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯ: ನಟಿ ಶರ್ಮಿಳಾ  ಮಾಂಡ್ರೆ   ‘ನವಗ್ರಹ’, ‘ಸ್ವಯಂವರ’, ‘ಮಮ್ತಾಜ್’, ‘ಮಾಸ್ ಲೀಡರ್’, ‘ಗಾಳಿಪಟ-2’ ಹೀಗೆ ಒಂದಷ್ಟು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.ಶರ್ಮಿಳಾ ಮಾಂಡ್ರೆ ಸಾಮಾಜಿಕ ಜಾಲತಾಣಗಳಲ್ಲಿ ಬಹಳ ಸಕ್ರಿಯರಾಗಿದ್ದು, ತಮ್ಮ ಜೀವನಶೈಲಿ, ವಿದೇಶ ಪ್ರವಾಸದ ಮಾಹಿತಿ ಮತ್ತು ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ, ನಿರ್ಮಾಪಕ ಸುಧನ್ ಸುಂಧರಮ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನಟಿಗೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ನಿಶ್ಚಿತಾರ್ಥದ ನಂತರ, ಇದೇ ವರ್ಷದೊಳಗೆ ಮದುವೆ ಸಮಾರಂಭವನ್ನು ಬಹಳ ಅದ್ಧೂರಿಯಾಗಿ ನಡೆಸಲು ಎರಡೂ ಕುಟುಂಬದವರು ನಿರ್ಧರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ