LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಲ್ಲೀಶ್ವರಿ ಶೂಟಿಂಗ್ ವೇಳೆ ಕತ್ರಿನಾ ಕೈಫ್‌ಗೆ ಬಾಡಿ ಲಾಂಗ್ವೇಜ್ ಇರಲಿಲ್ಲ: ಅಂದಿನ ಸವಾಲುಗಳನ್ನು ಬಿಚ್ಚಿಟ್ಟ ನಿರ್ದೇಶಕ ವಿಜಯ ಭಾಸ್ಕರ್

ಟಾಲಿವುಡ್‌ನ ಎವರ್‌ಗ್ರೀನ್ ಸಿನಿಮಾಗಳಲ್ಲಿ ವಿಕ್ಟರಿ ವೆಂಕಟೇಶ್ ನಟನೆಯ ‘ಮಲ್ಲೀಶ್ವರಿ’ ಚಿತ್ರವೂ ಒಂದು. ಈ ಸಿನಿಮಾ ಬಿಡುಗಡೆಯಾಗಿ ಎರಡು ದಶಕಗಳೇ ಕಳೆದಿವೆ. ಆದರೂ ಇಂದಿಗೂ ಈ ಚಿತ್ರದ ಕ್ರೇಜ್ ಕಡಿಮೆಯಾಗಿಲ್ಲ. ಈ ಚಿತ್ರದ ಮೂಲಕವೇ ಕತ್ರಿನಾ ಕೈಫ್ ತೆಲುಗು ಚಿತ್ರರಂಗಕ್ಕೆ ನಾಯಕಿಯಾಗಿ ಪದಾರ್ಪಣೆ ಮಾಡಿದ್ದರು. ಆದರೆ, ಕತ್ರಿನಾ ಅವರನ್ನು ಈ ಚಿತ್ರಕ್ಕೆ ಆಯ್ಕೆ ಮಾಡುವುದು ಮತ್ತು ಅವರಿಂದ ನಟನೆ ಮಾಡಿಸುವುದು ಅಂದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ ಎಂದು ಚಿತ್ರದ ನಿರ್ದೇಶಕ ಕೆ. ವಿಜಯ ಭಾಸ್ಕರ್ ಇತ್ತೀಚಿನ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.

ರಾಜಕುಮಾರಿಯ ಪಾತ್ರಕ್ಕೆ ಹೊಸ ಮುಖದ ಹುಡುಕಾಟ

ಮಲ್ಲೀಶ್ವರಿ ಚಿತ್ರಕ್ಕೆ ಕತ್ರಿನಾ ಕೈಫ್ ಅವರನ್ನೇ ನಾಯಕಿಯಾಗಿ ಆಯ್ಕೆ ಮಾಡಲು ನಿರ್ದೇಶಕ ವಿಜಯ ಭಾಸ್ಕರ್ ಬಯಸಿದ್ದರು. ಜಾಹೀರಾತೊಂದರಲ್ಲಿ ಕತ್ರಿನಾ ಅವರನ್ನು ನೋಡಿ, ಅವರೇ ಈ ಪಾತ್ರಕ್ಕೆ ಸೂಕ್ತ ಎಂದು ನಿರ್ಧರಿಸಿದ್ದರು. ಆದರೆ ಆರಂಭದಲ್ಲಿ ಈ ಆಯ್ಕೆ ಪ್ರಕ್ರಿಯೆ ನಿರ್ಮಾಪಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತಂತೆ. ಕತ್ರಿನಾ ಅವರಿಗೆ ಕಥೆ ಇಷ್ಟವಾಗಿ ಒಪ್ಪಿಕೊಂಡಿದ್ದರೂ, ಮುಂಬೈನಲ್ಲಿ ನಡೆದ ಮಾತುಕತೆಯ ವೇಳೆ ಕೆಲವು ಭಿನ್ನಾಭಿಪ್ರಾಯಗಳು ಉಂಟಾಗಿದ್ದವು. ಸಿನಿಮಾ ತಂಡ ಮುಂಗಡ ಹಣ ನೀಡಲು ಮುಂದಾದರೂ ಕತ್ರಿನಾ ಅದನ್ನು ನಿರಾಕರಿಸಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಚಿತ್ರತಂಡ ಬೇರೆ ನಾಯಕಿಯರಿಗಾಗಿ ಹುಡುಕಾಟ ನಡೆಸಿತ್ತು. ಅಂದಿನ ಪ್ರಮುಖ ಸುಂದರಿಯರು ಮತ್ತು ಮಾಡೆಲ್‌ಗಳನ್ನು ಆಡಿಷನ್ ಮಾಡಲಾಗಿತ್ತು. ಆ ಸಮಯದಲ್ಲಿ ತೆಲುಗಿನಲ್ಲಿ ಈಗಾಗಲೇ ಸ್ಟಾರ್ ನಟಿಯಾಗಿದ್ದ ಸೋನಾಲಿ ಬೇಂದ್ರೆ ಅವರ ಹೆಸರೂ ಮುಂಚೂಣಿಗೆ ಬಂದಿತ್ತು. ಆದರೆ, ಸೋನಾಲಿ ಬೇಂದ್ರೆ ಅವರೊಂದಿಗೆ ಈಗಾಗಲೇ ‘ಮನ್ಮಥುಡು’ ಸಿನಿಮಾ ಮಾಡಿದ್ದರಿಂದ, ಮಲ್ಲೀಶ್ವರಿ ಪಾತ್ರಕ್ಕೆ ಹೊಸ ಮುಖವೇ ಬೇಕು ಎಂಬ ಹಠಕ್ಕೆ ಬಿದ್ದ ನಿರ್ದೇಶಕರು ಅಂತಿಮವಾಗಿ ಕತ್ರಿನಾ ಕೈಫ್ ಅವರನ್ನೇ ಸಿನಿಮಾಗೆ ಕರೆತಂದರು.

ನಟನೆಯ ಸಂದರ್ಭದಲ್ಲಿ ಎದುರಾದ ಸವಾಲುಗಳು

ಕತ್ರಿನಾ ಕೈಫ್ ಭಾರತೀಯ ವಾತಾವರಣದಲ್ಲಿ ಬೆಳೆಯದೇ ಇದ್ದುದರಿಂದ ಅವರಿಗೆ ತೆಲುಗು ಹುಡುಗಿಯ ನಡವಳಿಕೆ ಅಥವಾ ಬಾಡಿ ಲಾಂಗ್ವೇಜ್ ಬಗ್ಗೆ ಯಾವುದೇ ಕಲ್ಪನೆ ಇರಲಿಲ್ಲ ಎಂದು ವಿಜಯ ಭಾಸ್ಕರ್ ಹೇಳಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ಅವರು ಕೂರುವ ಶೈಲಿಯನ್ನು ಸಹ ತಿದ್ದಬೇಕಿತ್ತಂತೆ. ತೆಲುಗು ರಾಜಕುಮಾರಿಯ ಪಾತ್ರಕ್ಕೆ ತಕ್ಕಂತೆ ಗೌರವ ಮತ್ತು ಪ್ರೀತಿಯನ್ನು ನಟನೆಯಲ್ಲಿ ತೋರಿಸುವುದು ಅವರಿಗೆ ಸವಾಲಾಗಿತ್ತು. ಆದರೆ, ಕತ್ರಿನಾ ಕಷ್ಟಪಟ್ಟು ಕೆಲಸ ಮಾಡುವ ಗುಣ ಹೊಂದಿದ್ದರಿಂದ ಶ್ರಮವಹಿಸಿ ಆ ಪಾತ್ರಕ್ಕೆ ಜೀವ ತುಂಬಿದರು ಎಂದು ನಿರ್ದೇಶಕರು ಅಂದಿನ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಅಂದು ವಿಜಯ ಭಾಸ್ಕರ್ ತಗೆದುಕೊಂಡ ಆ ನಿರ್ಧಾರದಿಂದಾಗಿ ತೆಲುಗು ಚಿತ್ರರಂಗಕ್ಕೆ ಒಬ್ಬ ಸ್ಟಾರ್ ನಟಿ ಸಿಗುವಂತಾಯಿತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ ಮತ ಹಾಕಿ ಉಲ್ಟಾ ಹೊಡೆದ ಬಿಜೆಪಿ, ಜೆಡಿಎಸ್ ಶಾಸಕರು; 5 ಸ್ಥಾನ ಗೆದ್ದ ಕಾಂಗ್ರೆಸ್!5 ನಗರ ಪಾಲಿಕೆಗಳ ರಸ್ತೆಗಳ ಅಭಿವೃದ್ಧಿಗೆ 2000 ಕೋಟಿ ರೂ ವಿಶೇಷ ಅನುದಾನ ಬಿಡುಗಡೆ: ಕೃಷ್ಣಬೈರೇಗೌಡಮೇಕೆದಾಟು ದಕ್ಷಿಣ ಭಾರತದ ಹೃದಯದಂತಹ ಯೋಜನೆ, ಇದರಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ: ಡಿಕೆಶಿBIG NEWS: ‘ಕರ್ತವ್ಯ’ ಆ್ಯಪ್ ನೋಂದಣಿಯಲ್ಲಿ ಶೇ. 70.6 ರಷ್ಟು ಪ್ರಗತಿ ಸಾಧನೆ: ಸರ್ಕಾರ ಸ್ಪಷ್ಟನೆ ​ಮಹಿಷಿ ಉತ್ತರಾಧಿ ಮಠದಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನ ದೋಚಿದ್ದ ಕಳ್ಳ ಅರೆಸ್ಟ್ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ: ನಕಲಿ ವೈದ್ಯ ಮುಕ್ತ ಜಿಲ್ಲೆಯಾಗಿಸಲು ಸೂಚನೆಮನೆಯ ಹೊರಗೆ ಮಲಗಿದ್ದ ತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪಾಪಿ ಪುತ್ರBREAKING NEWS: MLC ಚುನಾವಣೆಯಲ್ಲಿ ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು, ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರಾಭವಮಂಡ್ಯ ಮೇಡಂಗೂ ಟೋಪಿ ಹಾಕಿದ್ರು; ಅವರಿಗಾದರೂ ರಾಜ್ಯಸಭೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡಾ ಅಂತಿದ್ವಾ? ರೇವಣ್ಣ ಅಚ್ಚರಿ ಹೇಳಿಕೆಮುಖ್ಯಮಂತ್ರಿಯಾಗಿ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ರಣತಂತ್ರಕ್ಕೆ ಬೆಚ್ಚಿದ ‘ದೋಸ್ತಿ’