LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯಾಣಿಕರ ಗಮನಕ್ಕೆ: ರಾಜ್ಯದ ಪ್ರಮುಖ ರೈಲುಗಳ ಸಂಚಾರದಲ್ಲಿ ಭಾರಿ ಬದಲಾವಣೆ: ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು

ಬೆಂಗಳೂರು: ನೈರುತ್ಯ ರೈಲ್ವೆ ವಲಯವು ರಾಜ್ಯದ ಪ್ರಮುಖ ರೈಲುಗಳ ಸಂಚಾರದಲ್ಲಿ ಭಾರಿ ಬದಲಾವಣೆ ಮಾಡಿದೆ.ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದಾಗಿವೆ.

ಬೆಂಗಳೂರಿನ ಕೆಎಸ್‌ಆರ್ ಯಾರ್ಡ್ ನವೀಕರಣ ಮತ್ತು ಹೊಳೆನರಸೀಪುರದಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 18 ಇಂದಿನಿಂದ ಆಗಸ್ಟ್ ತಿಂಗಳವರೆಗೆ ಹಲವು ರೈಲುಗಳನ್ನು ರದ್ದುಪಡಿಸಲಾಗಿದೆ. ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ಸಂಪೂರ್ಣ ರದ್ದಾಗಿದ್ದು, ವಂದೇ ಭಾರತ್ ಮತ್ತು ಕಾವೇರಿ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗದಲ್ಲೂ ವ್ಯತ್ಯಯವಾಗಲಿದೆ.

ಹೊಳೆನರಸೀಪುರ ಮಾರ್ಗ ದಲ್ಲಿ ರದ್ದಾದ ರೈಲುಗಳು: ರಸ್ತೆ ಕೆಳಸೇತುವೆ ಕಾಮಗಾರಿಯಿಂದಾಗಿ ಕೆಳಗಿನ ರೈಲುಗಳ ಸಂಚಾರ ಇರುವುದಿಲ್ಲ.

ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ (16206)

ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ (16205)

ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56267)

ಭಾಗಶಃ ರದ್ದು ಮತ್ತು ವಿಳಂಬವಾಗುವ ರೈಲುಗಳು:

ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (16225): ಈ ರೈಲು ಜೂನ್ 18 ಮತ್ತು 23 ರಂದು ಮೈಸೂರಿನಿಂದ ಹೊರಡುವ ಬದಲಾಗಿ ಅರಸೀಕೆರೆಯಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ. ಇದರಿಂದ ಮೈಸೂರು, ಕೆ.ಆರ್.ನಗರ ಮತ್ತು ಹಾಸನದ ಪ್ರಯಾಣಿಕರಿಗೆ ಸೇವೆ ಲಭ್ಯವಿರುವುದಿಲ್ಲ.

ಮೈಸೂರು–ಯಶವಂತಪುರ ಎಕ್ಸ್‌ಪ್ರೆಸ್ (16208): ಈ ರೈಲು ಮಾರ್ಗ ಮಧ್ಯೆ ನಿಯಂತ್ರಣಕ್ಕೊಳಗಾಗಲಿದ್ದು, ನಿಗದಿತ ಸಮಯಕ್ಕಿಂತ 30 ರಿಂದ 120 ನಿಮಿಷಗಳಷ್ಟು ತಡವಾಗಿ ಸಂಚರಿಸಲಿದೆ.

ಜುಲೈ-ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ರದ್ದು:
ಬೆಂಗಳೂರಿನ ಪ್ರಮುಖ ರೈಲು ನಿಲ್ದಾಣವಾದ ಕೆಎಸ್‌ಆರ್ (ಮೆಜೆಸ್ಟಿಕ್) ನಲ್ಲಿ ಯಾರ್ಡ್ ನವೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ಕೇರಳ ಮತ್ತು ತಮಿಳುನಾಡಿಗೆ ಸಂಚರಿಸುವ ಕೆಳಗಿನ ರೈಲು ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

ಬೆಂಗಳೂರು-ಕೇರಳ ವಂದೇ ಭಾರತ್ ರದ್ದು: ಜುಲೈ 31 ಮತ್ತು ಆಗಸ್ಟ್ 3 ರಂದು ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (26652) ರೈಲು ಕೆಎಸ್‌ಆರ್ ನಿಲ್ದಾಣಕ್ಕೆ ಬರುವ ಬದಲಾಗಿ ಕೃಷ್ಣರಾಜಪುರಂ (ಕೆ.ಆರ್.ಪುರಂ) ನಿಲ್ದಾಣದಲ್ಲೇ ತನ್ನ ಪ್ರಯಾಣ ಕೊನೆಗೊಳಿಸಲಿದೆ.

ಲಾಲ್‌ಬಾಗ್ ಎಕ್ಸ್‌ಪ್ರೆಸ್ ಮಾರ್ಗ ಬದಲಾವಣೆ: ಜುಲೈ 31 ರಿಂದ ಆಗಸ್ಟ್ 3 ರವರೆಗೆ ಚೆನ್ನೈ-ಬೆಂಗಳೂರು ಲಾಲ್‌ಬಾಗ್ ಎಕ್ಸ್‌ಪ್ರೆಸ್ ರೈಲನ್ನು ಬೈಯಪ್ಪನಹಳ್ಳಿಯಿಂದಲೇ ಎಸ್‌ಎಂವಿಟಿ (SMVT) ಬೆಂಗಳೂರು ನಿಲ್ದಾಣಕ್ಕೆ ತಿರುಗಿಸಲಾಗುತ್ತದೆ.

ಆಗಸ್ಟ್‌ನಲ್ಲಿ ಸಂಪೂರ್ಣ ರದ್ದಾಗಲಿರುವ ಪ್ರಮುಖ ರೈಲುಗಳು:
ಆಗಸ್ಟ್ 1: ಕೆಎಸ್‌ಆರ್ ಬೆಂಗಳೂರು ಟು ಚೆನ್ನೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12658) – ರದ್ದು

ಆಗಸ್ಟ್ 2: ಚೆನ್ನೈ-ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12657) – ರದ್ದು

ಆಗಸ್ಟ್ 2 ಮತ್ತು 3: ಚೆನ್ನೈ-ಅಶೋಕಪುರಂ ಕಾವೇರಿ ಎಕ್ಸ್‌ಪ್ರೆಸ್ ರೈಲು – ರದ್ದು

ರೈಲ್ವೆ ಕಾರ್ಯಾಚರಣೆಯ ಸಾಮರ್ಥ್ಯ ಮತ್ತು ದಕ್ಷತೆ ಹೆಚ್ಚಿಸಲು ಈ ಮಹತ್ವದ ಕಾಮಗಾರಿ ಅಗತ್ಯವಾಗಿದ್ದು, ಪ್ರಯಾಣಿಕರು ರೈಲ್ವೆ ಇಲಾಖೆಯ ಅಧಿಕೃತ ಹೆಲ್ಪ್‌ಲೈನ್ ಅಥವಾ ಆಪ್‌ಗಳ ಮೂಲಕ ರೈಲಿನ ಇಂದಿನ ಸ್ಥಿತಿಯನ್ನು ಪರಿಶೀಲಿಸಿ ಪ್ರಯಾಣ ಬೆಳೆಸಲು ಕೋರಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ