LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೇಜಸ್ವಿಗೆ ಪ್ರಪೋಸ್ ಮಾಡುವ ಮುನ್ನ ಹೆತ್ತವರ ಒಪ್ಪಿಗೆ ಪಡೆದ ಕರಣ್ ಕುಂದ್ರಾ: ಟ್ರೋಲರ್ಸ್‌ಗೆ ಸಿಕ್ಕಿತು ಖಡಕ್ ತಿರುಗೇಟು

ಖ್ಯಾತ ಕಿರುತೆರೆ ನಟ ಕರಣ್ ಕುಂದ್ರಾ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ. ತಮ್ಮ ದೀರ್ಘಕಾಲದ ಗೆಳತಿ ತೇಜಸ್ವಿ ಪ್ರಕಾಶ್ ಅವರಿಗೆ ಮದುವೆಯ ಪ್ರಸ್ತಾಪ ಇಡುವ ಮುನ್ನ ಕರಣ್ ತಮ್ಮ ಪೋಷಕರ ಅನುಮತಿ ಪಡೆದಿದ್ದರು ಎಂಬ ವಿಷಯ ಇತ್ತೀಚೆಗೆ ಮುನ್ನೆಲೆಗೆ ಬಂದಿತ್ತು. ಇದನ್ನು ಕೇಳಿ ಕೆಲ ನೆಟ್ಟಿಗರು ಕರಣ್ ಕುಂದ್ರಾ ಅವರನ್ನು ತಮಾಷೆ ಮಾಡಿದ್ದರು. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಸ್ವಂತ ಬುದ್ಧಿ ಇಲ್ಲವೇ ಎಂದು ಕೆಲವರು ಟೀಕಿಸಿದ್ದರು. ಇದೀಗ ಈ ಎಲ್ಲಾ ಟ್ರೋಲ್‌ಗಳಿಗೆ ಕರಣ್ ಕುಂದ್ರಾ ತಮ್ಮದೇ ಶೈಲಿಯಲ್ಲಿ ಖಡಕ್ ಉತ್ತರ ನೀಡಿದ್ದಾರೆ.

ಇತ್ತೀಚೆಗೆ ಸಿದ್ಧಾರ್ಥ್ ಕಣ್ಣನ್ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಕರಣ್ ಕುಂದ್ರಾ, ತಮ್ಮ ವೈಯಕ್ತಿಕ ಜೀವನದ ಪ್ರಮುಖ ನಿರ್ಧಾರಗಳಲ್ಲಿ ಕುಟುಂಬವನ್ನು ಒಳಗೊಳ್ಳುವುದನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಜೀವನದ ಇಷ್ಟು ದೊಡ್ಡ ನಿರ್ಧಾರ ತೆಗೆದುಕೊಳ್ಳುವಾಗ ಪೋಷಕರು ಮತ್ತು ಒಡಹುಟ್ಟಿದವರನ್ನು ಕೇಳದಿದ್ದರೆ ಮತ್ತೆ ಯಾರನ್ನು ಕೇಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಕುಟುಂಬವನ್ನು ಗೌರವಿಸುವುದು ಎಂದರೆ ಸ್ವಾತಂತ್ರ್ಯದ ಕೊರತೆ ಎಂದಲ್ಲ ಎಂದು ಸ್ಪಷ್ಟಪಡಿಸಿದ ಕರಣ್, ಹೊಸಬರು ಜೀವನಕ್ಕೆ ಬಂದ ತಕ್ಷಣ ಹೆತ್ತವರ ಸ್ಥಾನವನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇನ್ನು ತಮ್ಮನ್ನು ಟೀಕಿಸಿದವರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ ಅವರು, ಪೋಷಕರನ್ನು ಸಂಪರ್ಕಿಸಬಾರದು ಎಂದು ಕಮೆಂಟ್ ಮಾಡುವವರು ಭಾರತದಲ್ಲಿ ಹುಟ್ಟಿದ್ದಾರೋ ಅಥವಾ ಕಾರ್ಡಶಿಯನ್ಸ್ ಮನೆಯಲ್ಲಿ ಹುಟ್ಟಿದ್ದಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ತಮ್ಮ ನಿರ್ಧಾರಕ್ಕೆ ತೇಜಸ್ವಿ ಪ್ರಕಾಶ್ ಅವರದ್ದೂ ಯಾವುದೇ ಆಕ್ಷೇಪವಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಬಿಗ್ ಬಾಸ್‌ನಿಂದ ಶುರುವಾದ ಪ್ರೇಮಕಥೆ

ಕರಣ್ ಕುಂದ್ರಾ ಮತ್ತು ತೇಜಸ್ವಿ ಪ್ರಕಾಶ್ 2021 ರಿಂದ ಡೇಟಿಂಗ್ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್ ನಿರೂಪಣೆಯ ಬಿಗ್ ಬಾಸ್ ಸೀಸನ್ 15 ರಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದ ಇವರ ನಡುವೆ ಸ್ನೇಹ ಬೆಳೆದು, ನಂತರ ಅದು ಪ್ರೀತಿಯಾಗಿ ಬದಲಾಗಿತ್ತು. ಇವರಿಬ್ಬರ ಜೋಡಿಯನ್ನು ಅಭಿಮಾನಿಗಳು ಪ್ರೀತಿಯಿಂದ ತೇಜ್ರಾನ್ ಎಂದು ಕರೆಯುತ್ತಾರೆ. ಬಿಗ್ ಬಾಸ್ ಮನೆಯಿಂದ ಹೊರಬಂದ ಮೇಲೂ ಈ ಜೋಡಿ ಒಟ್ಟಿಗೇ ಇತ್ತು.

ಇತ್ತೀಚೆಗೆ ನೆಟ್‌ಫ್ಲಿಕ್ಸ್‌ನ ದೇಸಿ ಬ್ಲಿಂಗ್ ರಿಯಾಲಿಟಿ ಶೋನಲ್ಲಿ ಈ ಜೋಡಿ ಕಾಣಿಸಿಕೊಂಡಿತ್ತು. ಕಾರ್ಯಕ್ರಮದ ಮಧ್ಯೆ ಇವರ ನಡುವಿನ ಕೆಲವು ಜಗಳಗಳು ಮತ್ತು ಮನಸ್ತಾಪಗಳನ್ನು ಕಂಡು ಇವರಿಬ್ಬರು ಬ್ರೇಕಪ್ ಮಾಡಿಕೊಳ್ಳಲಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಆದರೆ ಈ ಎಲ್ಲಾ ಊಹಾಪೋಹಗಳಿಗೆ ಕರಣ್ ಕುಂದ್ರಾ ದುಬೈನಲ್ಲಿ ತೆರೆ ಎಳೆದಿದ್ದಾರೆ. ಶೋನ ಕೊನೆಯ ಸಂಚಿಕೆಯಲ್ಲಿ ಕರಣ್ ಕುಂದ್ರಾ ದುಬೈನಲ್ಲಿ ಅದ್ಧೂರಿ ಸೆಟಪ್ ಮಾಡಿ, ತೇಜಸ್ವಿ ಪ್ರಕಾಶ್ ಅವರಿಗೆ ಮದುವೆಯ ಪ್ರಸ್ತಾಪ ಇಟ್ಟಿದ್ದಾರೆ. ಮೊಣಕಾಲೂರಿ ವಜ್ರದ ಉಂಗುರ ತೊಡಿಸಿ ಪಂಜಾಬಿ ಶೈಲಿಯಲ್ಲಿ ಮದುವೆಯಾಗುತ್ತೀಯಾ ಎಂದು ಕೇಳಿದಾಗ ತೇಜಸ್ವಿ ಭಾವುಕರಾಗಿ ಒಪ್ಪಿಗೆ ನೀಡಿದ್ದಾರೆ. ಆದರೆ ಇವರ ಮದುವೆ ಯಾವಾಗ ನಡೆಯಲಿದೆ ಎಂಬ ಅಧಿಕೃತ ದಿನಾಂಕ ಇನ್ನೂ ಪ್ರಕಟವಾಗಿಲ್ಲ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕ್ಷೀರಭಾಗ್ಯ–ಮಧ್ಯಾಹ್ನ ಉಪಹಾರ, ಪೌಷ್ಟಿಕ ಆಹಾರ ಕಾರ್ಯಕ್ರಮ: ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದಿಂದ ತ್ರೈಮಾಸಿಕ ₹21,822.37 ಲಕ್ಷ ಬೃಹತ್ ಅನುದಾನ ಬಿಡುಗಡೆ‘ನಾನು ಅಥವಾ ಇಟಲಿ ಎಂದಿಗೂ ಬೇಡುವುದಿಲ್ಲ’: ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಬೇಡಿಕೊಂಡ್ರು ಎಂಬ ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟುBREAKING: ಮಂಗಳೂರಿನಲ್ಲಿ ಸಂಪುಟ ಸಭೆ: ಕರಾವಳಿ, ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿಪಿಎಂ-ವಿ.ಬಿ.ಆರ್.ವೈ. ಯೋಜನೆಯಿಂದ ಯುವಕರಿಗೆ ಉದ್ಯೋಗ ಸೃಷ್ಟಿ: ಕಾರ್ಮಿಕರಿಗೆ ಪ್ರೋತ್ಸಾಹಧನBREAKING: ರಾಂಗ್ ರೂಟ್ ನಲ್ಲಿ ಬಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವುBREAKING NEWS: ನಟಿ ರುಕ್ಮಿಣಿ ವಸಂತ್ ಡೀಪ್ ಫೇಕ್ ಫೋಟೋ ವೈರಲ್ ಕೇಸ್: ಮೂವರು ಅರೆಸ್ಟ್ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ಹೂಡಿಕೆದಾರರ ನಿಯೋಗ ಭೇಟಿಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸಿಎಂ ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್BREAKING: ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ: ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೆ ತೊಂದರೆ ಆಗಬಾರದು: ಸಿಎಂ ಡಿ.ಕೆ.ಶಿವಕುಮಾರ್ ತಾಕೀತುವಿಧಾನ ಪರಿಷತ್ ಚುನಾವಣೆ: ನಮಗೆ ಬಿದ್ದಿರುವುದು ಆತ್ಮಸಾಕ್ಷಿಯ ಮತಗಳು ಎಂದ ಸಚಿವ ಸತೀಶ್ ಜಾರಕಿಹೊಳಿ