LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಸಿಹಿಸುದ್ದಿ ; ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರವು 2026 ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ ಎಲ್ಲಾ 14 ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಿರುತ್ತದೆ.

ಧಾರವಾಡ ಜಿಲ್ಲೆಯ ಹೋಬಳಿ ಮಟ್ಟದ ಬೆಳೆಗಳು (12 ಬೆಳೆಗಳು):* ಭತ್ತ(ನೀ), ಭತ್ತ(ಮ.ಆ.), ಮುಸುಕಿನಜೋಳ (ನೀ), ಮುಸುಕಿನಜೋಳ (ಮ.ಆ.), ಉದ್ದು(ಮ.ಆ.), ತೊಗರಿ (ಮ.ಆ.), ಹೆಸರು (ಮ.ಆ.), ಸೋಯಾಅವರೆ(ಮ.ಆ.), ನೆಲಗಡಲೆ (ಶೇಂಗಾ) (ಮ.ಆ.), ನೆಲಗಡಲೆ (ಶೇಂಗಾ) (ನೀ.), ಹತ್ತಿ (ಮ.ಆ.), ಹತ್ತಿ (ನೀ), ಈರುಳ್ಳಿ (ಮ.ಆ.), ಈರುಳ್ಳಿ (ನೀ.), ಆಲೂಗಡ್ಡೆ (ಮ.ಆ.), ಟೊಮ್ಯಾಟೋ, ಕೆಂಪು ಮೆಣಸಿನಕಾಯಿ (ಮ.ಆ.) ಮತ್ತು ಕೆಂಪು ಮೆಣಸಿನಕಾಯಿ (ನೀ.)

*ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳು:* ಧಾರವಾಡ ಮತ್ತು ಅಳ್ನಾವರ ತಾಲ್ಲೂಕು – ಭತ್ತ (ಮಳೆ ಆಶ್ರಿತ), ಕಲಘಟಗಿ ತಾಲ್ಲೂಕು – ಭತ್ತ (ಮಳೆ ಆಶ್ರಿತ), ಮುಸುಕಿನ ಜೋಳ (ಮಳೆ ಆಶ್ರಿತ), ಹುಬ್ಬಳ್ಳಿ ಮತ್ತು ಹುಬ್ಬಳ್ಳಿ ನಗರ ತಾಲ್ಲೂಕು – ನೆಲಗಡಲೆ (ಶೇಂಗಾ)(ಮಳೆ ಆಶ್ರಿತ), ಕುಂದಗೋಳ ತಾಲ್ಲೂಕು – ನೆಲಗಡಲೆ (ಶೇಂಗಾ)(ಮಳೆ ಆಶ್ರಿತ) ಮತ್ತು ಹತ್ತಿ (ಮಳೆ ಆಶ್ರಿತ), ನವಲಗುಂದ ಮತ್ತು ಅಣ್ಣಿಗೇರಿ ತಾಲ್ಲೂಕು – ಮುಸುಕಿನ ಜೋಳ (ಮಳೆಆಶ್ರಿತ) ಮತ್ತು ಹೆಸರು (ಮಳೆ ಆಶ್ರಿತ)

ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರು ಹೆಸರು ಮತ್ತು ಉದ್ದು ಬೆಳೆಗಳಿಗೆ ಜುಲೈ 15, 2026 ಮತ್ತು ಇತರೆ ಬೆಳೆಗಳಿಗೆ ಜುಲೈ 31, 2026 ಹಾಗೂ ಕೆಂಪು ಮೆಣಸಿನಕಾಯಿ (ನೀರಾವರಿ ಹಾಗೂ ಮಳೆ ಆಶ್ರಿತ) ಬೆಳೆಗೆ ಅಗಸ್ಟ್ 14, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಎಸ್‍ಬಿಐ ಜನರಲ್ ಇನ್ಸೂರೆನ್ಸ್ ಕಂಪನಿ ಲಿಂ. (SBI General Insurance Company Ltd), ಸ್ಥಳೀಯ ಕೃಷಿ ಇಲಾಖೆ, ಕಂದಾಯ, ಗ್ರಾಮೀಣ ಅಭಿವೃದ್ಧಿ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯ ಹಣಕಾಸು ಸಂಸ್ಥೆಗಳಾದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ, ಸೇವಾ ಬ್ಯಾಂಕ, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರದ ಸಿಬ್ಬಂದಿಯವರನ್ನು ಅಥವಾ ಎಸ್‍ಬಿಐಜಿಐಸಿ ಟೊಲ್ ಫ್ರೀ ನಂಬರ್: 18002091111 ಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಧಾರವಾಡ ಸಂಸ್ಥೆಯಿಂದ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ತರಬೇತಿಯ ಅವಧಿಯು 6 ತಿಂಗಳಾಗಿದ್ದು, ತರಬೇತಿ ಜೊತೆಗೆ ಪ್ರತಿ ತಿಂಗಳು ಶಿಷ್ಯವೇತನ ನೀಡಲಾಗುವುದು. ತರಬೇತಿ ಪಡೆದವರಿಗೆ ವಿವಿಧ ರೀತಿಯ ಸಹಕಾರ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶವಿದ್ದು. ಸಹಕಾರ ಬ್ಯಾಂಕುಗಳಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು. ಜೂನ್ 27, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2773349, 8317383188, 9845120371 ಗೆ ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ