LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಮಾಜಿ ಶಾಸಕ ಸಿಐಡಿ ವಶಕ್ಕೆ

ಹಾಸನ: ಬಗರ್ ಹುಕುಂ ಜಮೀನನ್ನು ಅಕ್ರಮವಾಗಿ ಮಂಜೂರಾತಿ ಮಾಡಿದ ಆರೋಪದಲ್ಲಿ ಹಾಸನ ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೇಲೂರು ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರಾಗಿದ್ದ ವೇಳೆ 2016 ರಿಂದ 2022ರ ನಡುವೆ ಬರೋಬ್ಬರಿ 2,750 ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ದಾಖಲಿಸಿದ್ದ ದೂರಿನ ಮೇರೆಗೆ ಸಿಐಡಿ ಅಧಿಕಾರಿಗಳು, ಹಳೇಬೀಡಿನ ಅವರ ನಿವಾಸದಲ್ಲೇ ಸಿಐಡಿ ಅಧಿಕಾರಿಗಳು ಲಿಂಗೇಶ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಜೆಡಿಎಸ್ ನಿಂದ 2018ರಲ್ಲಿ ಗೆದ್ದು ಶಾಸಕರಾಗಿದ್ದ ಕೆ.ಎಸ್.ಲಿಂಗೇಶ್, ಬಗರ್ ಹುಕುಂ ಕಮಿಟಿಯ ಅಧ್ಯಕ್ಷರಾಗಿದ್ದರು. ಬರೋಬ್ಬರಿ 2,750 ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬೇಲೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಬಳಿಕ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತಿರಿಸಲಾಗಿತ್ತು.

ದೂರಿನಲ್ಲಿ ಸುಮಾರು 2750 ಎಕರೆ ಸರ್ಕಾರಿ ಜಮೀನನನ್ನು ನಕಲಿ ದಾಖಲೆಗಳ ಆಧಾರದ ಮೇಲೆ 1430 ಬೋಗಸ್ ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಮಾಜಿ ಶಾಸಕ ಲಿಂಗೇಶ್ ಸೇರಿದಂತೆ ಇತರರ ವಿರುದ್ಧ ವಿವಿಧ ಸೆಕ್ಷನ್​​ಗಳಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ನಂತರದ ಬಂಧನ ಭೀತಿ ಎದುರಾಗುತ್ತಿದ್ದಂತೆಯೇ ಲಿಂಗೇಶ್ ಹಾಗೂ ಇತರರು ಅವರು ತಮ್ಮ ವಿರುದ್ಧ ಪ್ರಕರಣ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಜಾ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಸಿಐಡಿ ಪೊಲೀಸರು ಲಿಂಗೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ