LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ: ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್; ನಾಯಕತ್ವದ ಬಗ್ಗೆ ಅಸಮಾಧಾನ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕೆಲ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರು ಗರಂ ಆಗಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ಬುಲಾವ್ ನೀಡಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕಿದ್ದ ವಿಪಕ್ಷಗಳ ಶಾಸಕರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೈಕೊಟ್ಟಿದ್ದಾರೆ. ಬಿಜೆಪಿ, ಜೆಡಿಎಸ್ ಶಾಸಕರು ಪಕ್ಷಕ್ಕೆ ಕೈಕೊಟ್ಟಿದ್ದು, 11 ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಹಾಕಿದ್ದಾರೆ. ಇದು, ದೋಸ್ತಿಗಳಿಗೆ ಮುಖಭಂಗವಾಗುವಂತೆ ಮಾಡಿದೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ.

ಶಾಸಕರ ಅಡ್ಡಮತದಾನವನ್ನು ಬಿಜೆಪಿ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ನಾಯಕರಿಗೆ ದೆಹಲಿಗೆ ಬರುವಂತೆ ಕರೆ ನೀಡಿದೆ. ಅಡ್ಡಮತದಾನದಿಂದ ನಾಯಕತ್ವದ ಮೇಲೆ ಅಸಮಾಧಾನಗೊಂಡಿರುವ ಹೈಕಮಾಂಡ್ ಈ ಬಗ್ಗೆ ಚರ್ಚಿಸಲು ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅವರಿಗೆ ದೆಹಲಿಗೆ ಬರುವಂತೆ ತಿಳಿಸಿದೆ.

ಕಾಂಗ್ರೆಸ್ ಬೆಂಬಲಿಸಿದವರಿಗೆ ಮುಂದಿನ ಚುನಾವಣೆಗೆ ಟಿಕೆಟ್, ಬಿಜೆಪಿ-ಜೆಡಿಎಸ್ ಶಾಸಕರ ಅಭಿವೃದ್ಧಿಗೆ ಅನುದಾನದ ಭರವಸೆ ಕೊಟ್ಟಿರೋ ಮಾತು ರಾಜಕೀಯ ಪಡಸಾಲೆಯಲ್ಲಿ ಹರಿದಾಡ್ತಿದೆ. ಕೇಸರಿ-ದಳ ಶಾಸಕರಿಗೆ ಸಕಲ ರೀತಿಯಲ್ಲಿ ಸಹಾಯ ಹಸ್ತ ಭರವಸೆ ಕಾರಣಕ್ಕೆ ಕ್ರಾಸ್ ವೋಟಿಂಗ್ ಆಗಿರೋದಾಗಿ ತಿಳಿದುಬಂದಿದೆ.

ವಿಧಾನ ಪರಿಷತ್ ಕದನದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ರಾಜ್ಯ ಕಾಂಗ್ರೆಸ್​ನೊಳಗೆ ಆತಂರಿಕ ಕಲಹ, ಅಧಿಕಾರಕ್ಕೆ ಕಿತ್ತಾಟ ಎಂದು ಸದಾಕಾಲ ವಾಗ್ದಾಳಿ ನಡೆಸುತ್ತಿದ್ದ ವಿಪಕ್ಷಗಳಲ್ಲೇ ಇದೀಗ ದೊಡ್ಡ ಬಿರುಕು ಇರೋದು ಬಯಲಾಗಿದೆ. ಮೈತ್ರಿಯೊಳಗಿನ ಅಸಮಾಧಾನ, ಗೊಂದಲದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ