LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಜಯ್ ರಾವ್ ಹೊಸ ಚಿತ್ರದ ಫಸ್ಟ್ ಲುಕ್ ಔಟ್: ಸ್ಯಾಂಡಲ್‌ವುಡ್ ಕೃಷ್ಣನಿಗೆ ಬೃಂದಾ ಆಚಾರ್ಯ ಜೋಡಿ

ಸ್ಯಾಂಡಲ್‌ವುಡ್ ಕೃಷ್ಣ ಅಜಯ್ ರಾವ್ ನಟನೆಯ ಬಹುನಿರೀಕ್ಷಿತ ಹೊಸ ಸಿನಿಮಾದ ಶೀರ್ಷಿಕೆ ಕೊನೆಗೂ ಹೊರಬಿದ್ದಿದೆ. ಚಿತ್ರಕ್ಕೆ ‘ಪಾರ್ಟ್ನರ್’ ಎಂದು ಹೆಸರಿಡಲಾಗಿದ್ದು, ಶೀರ್ಷಿಕೆಯ ಕೆಳಗೆ ‘ಟುಗೆದರ್ ಫಾರೆವರ್’ ಎಂಬ ಟ್ಯಾಗ್‌ಲೈನ್ ನೀಡಲಾಗಿದೆ. ಚಿತ್ರದ ಈ ಆಕರ್ಷಕ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಯಾಗಿದ್ದು, ಸಿನಿರಸಿಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಪ್ರೇಕ್ಷಕರ ಮನ ಗೆಲ್ಲುವಂತಹ ವಿಭಿನ್ನ ಪ್ರೇಮಕಥೆಯ ಹಂದರ ಹೊಂದಿರುವ ಈ ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ತಂತ್ರಜ್ಞರ ದಂಡೇ ಕೈಜೋಡಿಸಿದೆ.

ಯಶಸ್ವಿ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಶಿವ ತೇಜಸ್ ಈ ನೂತನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಜಯ್ ರಾವ್ ಅವರಿಗೆ ಜೋಡಿಯಾಗಿ ಸ್ಯಾಂಡಲ್‌ವುಡ್‌ನ ಉದಯೋನ್ಮುಖ ನಟಿ ಬೃಂದಾ ಆಚಾರ್ಯ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ. ಇನ್ನು ಈ ಸಿನಿಮಾವನ್ನು ಹರೀಶ್ ದೇವಿಥಾಂಡ್ರೆ ಅವರು ಅತ್ಯಂತ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರಕ್ಕಿದೆ ಶ್ರೀಮಂತ ತಾಂತ್ರಿಕ ವರ್ಗ

ಸಿನಿಮಾದ ಗುಣಮಟ್ಟವನ್ನು ಹೆಚ್ಚಿಸಲು ಚಿತ್ರತಂಡದಲ್ಲಿ ಅನುಭವಿ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಖ್ಯಾತ ಸಂಕಲನಕಾರ ಕೆ ಎಂ ಪ್ರಕಾಶ್ ಅವರು ಈ ಚಿತ್ರದ ಎಡಿಟಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ಇನ್ನು ಹಾಡುಗಳಿಗೆ ಮತ್ತಷ್ಟು ಮೆರುಗು ನೀಡಲು ಕನ್ನಡದ ಪ್ರಮುಖ ಸಾಹಿತಿಗಳಾದ ಕವಿರಾಜ್, ಪ್ರಮೋದ್ ಮರವಂತೆ ಹಾಗೂ ನಾಗಾರ್ಜುನ್ ಶರ್ಮಾ ಲೇಖನಿ ಚುರುಕುಗೊಳಿಸಿದ್ದಾರೆ. ಹಾಡುಗಳ ನೃತ್ಯ ಸಂಯೋಜನೆಯನ್ನು ಹೆಸರಾಂತ ನೃತ್ಯ ನಿರ್ದೇಶಕ ಮುರುಳಿ ಮಾಸ್ಟರ್ ಮಾಡುತ್ತಿದ್ದಾರೆ.

ಶೀರ್ಷಿಕೆ ಹಾಗೂ ಟ್ಯಾಗ್‌ಲೈನ್ ಮೂಲಕವೇ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ‘ಪಾರ್ಟ್ನರ್’ ಚಿತ್ರವು ಶೀಘ್ರದಲ್ಲೇ ಶೂಟಿಂಗ್ ಆರಂಭಿಸಲಿದ್ದು, ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಮತ್ತಷ್ಟು ರೋಚಕ ಮಾಹಿತಿಗಳು ಹೊರಬೀಳಲಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ