LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎರಡೂ ಚುನಾವಣೆಗೆ ಶಾಸಕರೇ ಮತದಾರರಾಗಿದ್ರೂ ರಾಜ್ಯಸಭೆಗೆ ಬಹಿರಂಗ, ವಿಧಾನ ಪರಿಷತ್ ಗೆ ಗೌಪ್ಯ ಮತದಾನ ಏಕೆ..?: ಸ್ಪಷ್ಟನೆ ಕೇಳಿದ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯಸಭೆಗೆ ಬಹಿರಂಗ, ವಿಧಾನ ಪರಿಷತ್ ಗೆ ಗೌಪ್ಯ ಮತದಾನದ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಇತ್ತೀಚೆಗೆ ನಮ್ಮ ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಹಾಗೂ ರಾಜ್ಯದ ವಿಧಾನ ಪರಿಷತ್‌ಗೆ ಸಂಬಂಧಿಸಿದಂತೆ ವಿಧಾನಸಭೆಯಿಂದ ಏಳು ಸ್ಥಾನಗಳಿಗೆ ಚುನಾವಣೆಗಳು ನಡೆದವು. ರಾಜ್ಯಸಭೆಯ ಚುನಾವಣೆಗಳು ಅವಿರೋಧವಾಗಿ ನಡೆದವು. ವಿಧಾನ ಪರಿಷತ್ತಿನ ಚುನಾವಣೆಗೆ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಇದ್ದದ್ದರಿಂದ ಚುನಾವಣೆ ಅನಿವಾರ್ಯವಾಗಿತ್ತು. ಈ ಸಂದರ್ಭದಲ್ಲಿ ಸ್ವಾಭಾವಿಕವಾಗಿ ಉದ್ಭವಿಸಿರುವ ಒಂದು ಪ್ರಶ್ನೆಗೆ ನಿಮ್ಮಿಂದ ಉತ್ತರ ಬಯಸಿದ್ದೇನೆ.

ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿಗೆ ನಡೆದ ಚುನಾವಣೆಗಳಲ್ಲಿ ಮತದಾರರು ವಿಧಾನಸಭಾ ಸದಸ್ಯರೇ ಆಗಿದ್ದರು. ರಾಜ್ಯಸಭೆಗೆ ನಡೆದ ಚುನಾವಣೆಗಳಲ್ಲಿ ವಿಧಾನಸಭೆಯ ಸದಸ್ಯರು ಮತ ಚಲಾಯಿಸುವಾಗ, ತಾವು ಗುರುತು ಮಾಡಿದ ಮತ ಚೀಟಿಯನ್ನು ತೋರಿಸಿ ಹಾಕಬೇಕಿತ್ತು. ಆದರೆ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಗಳಲ್ಲಿ ಇದೇ ವಿಧಾನಸಭಾ ಸದಸ್ಯರಿಗೆ ಗೌಪ್ಯ ಮತದಾನದ ಸೌಲಭ್ಯ ದೊರೆತಿತ್ತು.

ಒಂದೊಮ್ಮೆ ರಾಜ್ಯಸಭೆಯ ಚುನಾವಣೆಗಳು ಅವಿರೋಧವಾಗಿ ಆಗಿರದಿದ್ದರೆ ರಾಜ್ಯಸಭೆಯ ಮತ್ತು ವಿಧಾನ ಪರಿಷತ್ತಿನ ಚುನಾವಣೆಗಳು ಒಂದೇ ದಿನ ನಡೆಯುತ್ತಿದ್ದವು. ರಾಜ್ಯಸಭೆಯ ಚುನಾವಣೆಯಲ್ಲಿ ಮತಪತ್ರವನ್ನು ವಿಧಾನಸಭಾ ಸದಸ್ಯರು ಅಲ್ಲಿ ಕುಳಿತಿದ್ದ ತಮ್ಮ ಏಜೆಂಟರಿಗೆ ತೋರಿಸಿ ಹಾಕಬೇಕಿತ್ತು. ಆದರೆ ಅದೇ ವಿಧಾನಸಭಾ ಸದಸ್ಯರು ವಿಧಾನ ಪರಿಷತ್ತಿಗೆ ಮತ ಚಲಾಯಿಸುವಾಗ ಗೌಪ್ಯತೆ ಕಾಪಾಡಿಕೊಳ್ಳಬೇಕಿತ್ತು.

ಈ ಎರಡೂ ಚುನಾವಣೆಗಳಲ್ಲಿ ವಿಧಾನಸಭಾ ಸದಸ್ಯರು ಮತದಾರರಾಗಿ ವರ್ತಿಸಬೇಕಾದ ರೀತಿಯಲ್ಲಿ ಈ ದ್ವಂದ್ವ ನೀತಿ ಏಕೆ? ಈ ರೀತಿಯ ನಿಯಮಾವಳಿಗಳ ಹಿಂದೆ ಇರುವ ಉದ್ದೇಶವೇನು? ದಯವಿಟ್ಟು ಈ ಗೊಂದಲಕ್ಕೆ ಸ್ಪಷ್ಟಿಕರಣ ನೀಡಬೇಕೆಂದು ಸುರೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ