LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಮುಂದಾದ ಬಿಜೆಪಿ ನಾಯಕರು

ಬೆಂಗಳೂರು: ವಿಧಾನ ಪರಿಷತ್​​ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನವಾಗಿರುವ ಹಿನ್ನೆಲೆಯಲ್ಲಿ ತೀವ್ರ ಮುಖಭಂಗ ಅನುಭವಿಸಿರುವ ಬಿಜೆಪಿ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಮುಂದಾಗಿದೆ.

ದೇವರ ಮೇಲೆ ಆಣೆ ಪ್ರಮಾಣ ಮಾಡಿಸಲು ರಾಜ್ಯ ಬಿಜೆಪಿ ಮುಂದಾದ್ದು, ಧರ್ಮಸ್ಥಳದಲ್ಲಿ ಬಿಜೆಪಿ‌ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಮುಂದಿನ ವಾರ ಸಭೆ ನಡೆಯಲಿದ್ದು, ಸಭೆಯಲ್ಲಿ ಅಡ್ಡ ಮತದಾನದ ಬಗ್ಗೆ ಶಾಸಕರಿಂದ ಆಣೆ ಮಾಡಿ ಮಾಹಿತಿ ಸಂಗ್ರಹ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಷತ್ ಚುನಾವಣೆಯಲ್ಲಿ‌ ನಮ್ಮಿಂದ 4 ಅಡ್ಡ ಮತದಾನ ಆಗಿದೆ ಎಂಬ ಚರ್ಚೆ ಮಾಧ್ಯಮಗಳಲ್ಲಿ ನಡೆಯುತ್ತಿದೆ. ನಮ್ಮ ಕಾರ್ಯಕರ್ತರು, ಶಾಸಕರ ನಡವಳಿಕೆ ಬಗ್ಗೆ ಬೇಸರ ಪಟ್ಟಿದ್ದಾರೆ. ಹೀಗಾಗಿ ನನ್ನನ್ನು ಸೇರಿ ಎಲ್ಲ 63 ಶಾಸಕರ ಮೇಲೂ ಅನುಮಾನ ಪಡುವಂತಾಗಿದೆ. ನಿನ್ನೆ ನಿತಿನ್ ನಬಿನ್ ಅವರಿಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದೇನೆ. ದೆಹಲಿಗೆ ನಾನು ಹಾಗೂ ಆರ್. ಅಶೋಕ್ ಅವರು ಹೋಗುತ್ತಿದ್ದು, ಈ ವಾರದಲ್ಲೇ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಅಶೋಕ್ ಅವರ ಜತೆ ಚರ್ಚೆ ಮಾಡುತ್ತೇನೆ ಎಂದರು.

ತಾಯಿಗೆ ದ್ರೋಹ ಮಾಡಿದ ಶಾಸಕರು ಯಾರೆಂದು ಶ್ರೀಕ್ಷೇತ್ರದಲ್ಲೇ ಗೊತ್ತಾಗಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ಎಲ್ಲವೂ ಧರ್ಮಸ್ಥಳದಲ್ಲಿ ತೀರ್ಮಾನವಾಗಲಿದೆ ಎಂದು ಹೇಳಿದರು. ಒಬ್ಬರಿಗೆ 50ರಿಂದ 100 ಕೋಟಿ ಆಮಿಷವೊಡ್ಡಿದ್ದಾರೆ. ಹಾಗಾಗಿಯೇ ಅಡ್ಡಮತದಾನವಾಗಿದೆ ಎಂದು ಕಿಡಿಕಾರಿದರು.

ಪರಿಷತ್​​ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​​ನಿಂದ ಒಟ್ಟು 11 ಮತಗಳು ಕ್ರಾಸ್​​ ವೋಟಿಂಗ್​​ ಆಗಿತ್ತು. ಹೀಗಾಗಿ ಜೆಡಿಎಸ್​​ ಅಭ್ಯರ್ಥಿ ಸೋಲುಂಡಿದ್ದರೆ, ಬಿಜೆಪಿಯ ಎರಡು ಅಭ್ಯರ್ಥಿಗಳ ಪೈಕಿ ಓರ್ವ ಅಭ್ಯರ್ಥಿ ಪ್ರಯಾಸದಲ್ಲಿ ಗೆಲುವು ಪಡೆದಿದ್ದರು. ಓರ್ವ ಅಭ್ಯರ್ಥಿಗೆ 30 ಮತಗಳು ಎಂದು ಕೊನೇ ಕ್ಷಣದಲ್ಲಿ ರಾಜ್ಯ ಬಿಜೆಪಿಯ ನಾಯಕರು ನಿರ್ಧರಿಸಿದ್ದ ಪರಿಣಾಮ ಚುನಾವಣೆಯಲ್ಲಿ ಭಾರೀ ಮುಖಭಂಗ ಬಿಜೆಪಿಗೆ ತಪ್ಪಿತ್ತು. ಹೀಗಾಗಿ ಪಕ್ಷಕ್ಕೆ ದ್ರೋಹ ಬಗೆದ ಶಾಸಕರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಬಿಜೆಪಿ ನಾಯಕರು ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಅಧಿಕಾರ ಸ್ವೀಕಾರನೀಟ್ ಮರು ಪರೀಕ್ಷೆ: ಜೀನ್ಸ್ ಧರಿಸಿ ಬಂದವರಿಗೆ ಪರೀಕ್ಷೆಗಿಲ್ಲ ಅವಕಾಶಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಇಬ್ಬರು ಅವಳಿ ಸಹೋದರರು ದುರ್ಮರಣYOGA Day: ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ: ಯೋಗಾಭ್ಯಾಸದಲ್ಲಿ ಭಾಗಿಯಾದ ನಟ ದರ್ಶನ್BREAKING: ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಹಸಿರು ಮಾರ್ಗದ ಮೆಟ್ರೋ ಸ್ಟೇಷನ್20 ಲಕ್ಷ ರೂಪಾಯಿ ದರೋಡೆ ಪ್ರಕರಣ: ಸಿಐಡಿ ಇನ್ಸ್ ಪೆಕ್ಟರ್ ನ್ಯಾಯಾಂಗ ಬಂಧನಕ್ಕೆಬಿಡದಿ ಟೌನ್ ಶಿಪ್ ಗೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆಗೆ ಚಾಲನೆ: ಇದು ಆರಂಭವಷ್ಟೇ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ: ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆಮೇಕೆದಾಟು ಯೋಜನೆ: ಕಾಂಗ್ರೆಸ್ ಪಕ್ಷದ 9 ಸಂಸದರು ಮಾತನಾಡಿದ್ರಾ? ಕೈ ಪಡೆ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಉದ್ಯಮಿಗೆ 2.66 ಕೋಟಿ ವಂಚನೆ: ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್BREAKING: ಬಹುಭಾಷಾ ನಟ ಪ್ರಕಾಶ್ ರಾಜ್ ಗೆ ಸಂಕಷ್ಟ: ಅರೆಸ್ಟ್ ವಾರಂಟ್ ಜಾರಿ