LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಣೆ-ಪ್ರಮಾಣದ ವಿಚಾರವನ್ನು ಇಲ್ಲಿಗೆ ನಿಲ್ಲಿಸಿ: ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಸಲಹೆ

ಬೆಂಗಳೂರು: ವಿಧಾನ ಪರಿಷತ್​​ ಚುನಾವಣೆಯಲ್ಲಿ ಕೆಲ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ್ದು, ಅವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿಸಲು ಮುಂದಾಗಿದ್ದಾರೆ. ಪಕ್ಷಕ್ಕೆ ದ್ರೋಹ ಬಗೆದವರು ಯಾರೆಂಬುದು ದೇವರ ಎದುರೇ ಬಯಲಾಗಲಿ ಎಂದು ನಿನ್ನೆಯಷ್ಟೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದರು. ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿಸುವ ಪಕ್ಷದ ಈ ನಿರ್ಧಾರಕ್ಕೆ ಕೆಲ ಹಿರಿಯ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜಕೀಯ ಅಪಚಾರಗಳಿಗೆ ರಾಜಕೀಯ ಪರಿಹಾರ ಕಂಡುಕೊಳ್ಳಬೇಕು. ಬದಲಾಗಿ ಪವಿತ್ರ ಕ್ಷೇತ್ರಗಳನ್ನು ಎಳೆದು ತರುವುದು ಸೂಕ್ತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಕೂಡ ರಾಜ್ಯ ಬಿಜೆಪಿ ನಾಯಕರಿಗೆ ಕೆಲ ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನನ್ನ ಅಭಿಪ್ರಾಯದಲ್ಲಿ ಆಣೆ-ಪ್ರಮಾಣದ ವಿಚಾರವನ್ನು ಇಲ್ಲಿಗೆ ನಿಲ್ಲಿಸಿ. ಈ ಸರ್ಕಾರದಲ್ಲಿ ಯಾರನ್ನ ಬೇಕಾದರೂ ಬ್ಲಾಕ್‌ಮೇಲ್, ಬದಲಾವಣೆ ಮಾಡುತ್ತಾರೆ ಎಂದಿದ್ದಾರೆ.

ಕ್ರಾಸ್ ವೋಟಿಂಗ್ ಹೊಸದೇನಲ್ಲ. ಹೀಗಾಗಿ ಬಿಜೆಪಿಯವ್ರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗಬೇಡಿ. ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತ ಆಗಿದೆ, ಈಗಿನ ಸಿಎಂ ದಾರಾಳವಾಗಿದ್ದಾರೆ. ಆ ಕಾರಣಕ್ಕೆಅಭಿವೃದ್ಧಿ ಹೆಸರಲ್ಲಿ ಕ್ಷೇತ್ರದ ಜನರ ಮುಂದೆ ಹೋಗಲು ಕ್ರಾಸ್ ವೋಟ್ ಮಾಡಿರಬಹುದು. ಇದನ್ನ ಇಲ್ಲಿಗೆ ಬಿಟ್ಟುಬಿಡಿ ಎಂದು ಸಲಹೆ ನೀಡಿದ್ದಾರೆ.

ರಾಜಕೀಯದಲ್ಲಿ ಆಗಿರುವ ಅಪಚಾರಗಳಿಗೆ ರಾಜಕೀಯ ಉತ್ತರ ಕಂಡುಕೊಳ್ಳಬೇಕು. ಧರ್ಮಸ್ಥಳವು ನಾಡಿನ ಭಕ್ತರ ಶ್ರದ್ಧಾ ಕೇಂದ್ರವಾಗಿದ್ದು, ಅದರ ಪಾವಿತ್ರ್ಯತೆಯನ್ನು ಕಾಪಾಡಬೇಕು. ರಾಜಕೀಯದಲ್ಲಿ ನಡೆದಿರುವ ಅಡ್ಡಮತದಾನದಂತಹ ಅಪಸವ್ಯಗಳಿಗೆ ಪವಿತ್ರ ಕ್ಷೇತ್ರವನ್ನು ಎಳೆದು ತರುವುದು ಸರಿಯಲ್ಲ. ರಾಜಕೀಯ ಸಮಸ್ಯೆಗಳಿಗೆ ರಾಜಕೀಯ ಪರಿಹಾರವೇ ಉತ್ತಮ ಎಂದು ಬಿಜೆಪಿಯ ಹಿರಿಯ ಸುರೇಶ್ ಕುಮಾರ್ ಕೂಡ ಅಭಿಪ್ರಾಯಪಟ್ಟಿದ್ದಾರೆ.

ವಿಜಯೇಂದ್ರ ಅವರು ನೋವಿನಿಂದ ಈ ಮಾತುಗಳನ್ನು ಹೇಳಿದ್ದಾರೆ. ಆದರೆ, ಅಡ್ಡಮತದಾನ ಮಾಡಿದವರನ್ನು ಗುರುತಿಸಲು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವುದು ಪರಿಹಾರವಲ್ಲ. ಹಾಗೆ ಮಾಡಿದರೂ, ಸುಳ್ಳು ಹೇಳುವವನನ್ನು ಕಂಡುಹಿಡಿಯುವುದು ಕಷ್ಟವಾಗುತ್ತದೆ. ಇದರಿಂದ ಪವಿತ್ರ ಕ್ಷೇತ್ರದ ಶ್ರದ್ಧೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ