LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿ ಆದೇಶ

ಬೆಂಗಳೂರು: ರಾಜ್ಯದಲ್ಲಿ ವಸತಿ ಕಟ್ಟಡಗಳ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಲಾಗಿದ್ದು, ಮೇ 31ರೊಳಗೆ ಪೂರ್ಣವಾದ ವಸತಿ ಕಟ್ಟಡಗಳಿಗೆ ಒಸಿ ಇಲ್ಲದೆ ಅರ್ಜಿ ಸಲ್ಲಿಸಲು ಇಂದಿನಿಂದ 15 ದಿನ ಕಾಲಾವಕಾಶ ನೀಡಲಾಗಿದೆ. ಇಂಧನ ಇಲಾಖೆಯ ದೀನ ಕಾರ್ಯದರ್ಶಿ ಶಾಂತರಾಮ ಅವರು ಆದೇಶ ಹೊರಡಿಸಿದ್ದಾರೆ

ಮೇ 31ರೊಳಗೆ ಪೂರ್ಣಗೊಂಡ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿದ್ದು, ಒಸಿ ಇಲ್ಲದೆ ಅರ್ಜಿ ಸಲ್ಲಿಸಲು ಇಂದಿನಿಂದ 15 ದಿನಗಳ ಕಾಲ ಕಾಲಾವಕಾಶ ನೀಡಲಾಗುವುದು. ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ಶಾಂತರಾಮ ಈ ಕುರಿತಾಗಿ ಆದೇಶ ಹೊರಡಿಸಿದ್ದಾರೆ.

 ಜೂನ್ 20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಮಾಡಲಾಗಿತ್ತು. ಅನುಷ್ಠಾನಕ್ಕೆ ಆದೇಶ ಹೊರಡಿಸುವಂತೆ ಸಂಪುಟ ಸಭೆ ಸೂಚನೆ ನೀಡಿತ್ತು.

ಸಚಿವ ಸಂಪುಟ ಸಭೆಯಲ್ಲಿ ಇಂಧನ ಇಲಾಖೆಗೆ ಈ ಕುರಿತಾಗಿ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಮಹಾನಗರ ಪಾಲಿಕೆಗಳ ವ್ಯಾಪ್ತಿ ಮತ್ತು ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಿಗೆ ಆದೇಶ ಅನ್ವಯ ಆಗಲಿದೆ.

2400 ಚ.ಅ. ವರೆಗಿನ ಅಳತೆಯ ನಿವೇಶನಗಳ ವಸತಿ ಕಟ್ಟಡಗಳಿಗೆ ಇಂಧನ ಇಲಾಖೆ ಒಸಿ ವಿನಾಯಿತಿ ನೀಡಿದೆ. ಜೊತೆಗೆ ಜಿಪ್ಲಸ್ 3 ಅಥವಾ ಸ್ಟಿಲ್ಟ್ ಪಾರ್ಕಿಂಗ್ ಪ್ಲಸ್ 4 ಮಹಡಿಗಳ ವಸತಿ ಕಟ್ಟಡಗಳಿಗೆ ನಿಯಮ ಅನ್ವಯವಾಗಲಿದೆ. ಗ್ರಾಮೀಣ ಭಾಗದ ರೈತರ ಮನೆಗಳು, ತೋಟದ ಮನೆ, ಕೃಷಿ ಉಪಕರಣದ ಮನೆಗಳು, ದನದ ಕೊಟ್ಟಿಗೆಗಳಿಗೆ ವಿನಾಯಿತಿ ನೀಡಲಾಗಿದ್ದು, 15 ದಿನದೊಳಗೆ ಕಟ್ಟಡ ಮಾಲೀಕರು ಕಟ್ಟಡದ ಜೊತೆಗಿನ ಫೋಟೋ, ಜಿಪಿಎಸ್ ದಾಖಲೆಯನ್ನು ಅರ್ಜಿ ಜೊತೆಗೆ ಸಲ್ಲಿಸಬೇಕಿದೆ.

ವಿದ್ಯುತ್ ಸರಬರಾಜು ಕಂಪನಿಗಳು ಅನುಸರಿಸಬೇಕಿರುವ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಿಂದ ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆ ಸುಗಮವಾಗಲಿದೆ ಎನ್ನಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ