LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮದುವೆಯ ಕೊನೆ ಕ್ಷಣದಲ್ಲಿ ಕೈಕೊಟ್ಟ ವಧು, ನಿಶ್ಚಯವಾಗಿದ್ದ ಮುಹೂರ್ತದಲ್ಲೇ ಬೇರೆ ಯುವತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಯುವಕ

ಗದಗ: ಸೋಮವಾರ ನಿಗದಿಯಾಗಿದ್ದ ಮುಹೂರ್ತದಲ್ಲಿ ಮದುವೆಯಾಗಬೇಕಿದ್ದ ವಧು ಕೊನೆ ಕ್ಷಣದಲ್ಲಿ ಮದುವೆ ನಿರಾಕರಿಸಿದ್ದರಿಂದ ಅದೇ ಮುಹೂರ್ತದಲ್ಲಿ ಬೇರೆ ಯುವತಿಯೊಂದಿಗೆ ಮದುವೆ ನೆರವೇರಿದೆ.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಸೋಮವಾರ ಘಟನೆ ನಡೆದಿದೆ. ನರಗುಂದದ ಕಸಬಾ ಬಡಾವಣೆಯ ನಿಂಗಪ್ಪ ಬಸಪ್ಪ ಸವದಿ ಅವರ ಮದುವೆ ಬಾದಾಮಿ ತಾಲೂಕಿನ ಮಾಗನೂರು ಗ್ರಾಮದ ಯುವತಿಯೊಂದಿಗೆ ಸೋಮವಾರ ನಡೆಯಬೇಕಿತ್ತು.

ಆದರೆ, ವೈಯಕ್ತಿಕ ಕಾರಣದಿಂದ ಶನಿವಾರ ರಾತ್ರಿ ಏಕಾಏಕಿ ಯುವತಿ ಮದುವೆಗೆ ನಿರಾಕರಿಸಿದ್ದಾರೆ. ಈ ಬಗ್ಗೆ ಆಕೆಯ ಪೋಷಕರು ಲಿಖಿತ ಮುಚ್ಚಳಿಕೆ ಪತ್ರವನ್ನು ಬರೆದು ಕೊಟ್ಟಿದ್ದಾರೆ. ಆದರೆ ವರನ ಪೋಷಕರಿಗೆ ಇದು ಶಾಕ್ ನೀಡಿದೆ. ಮದುವೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡು ಕೊನೆ ಕ್ಷಣದಲ್ಲಿ ಮದುವೆ ನಿಲ್ಲಿಸುವುದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದಾರೆ.

ಕೊನೆಗೆ ಹಿರಿಯರು, ಗುರುಗಳು ಮದುವೆ ನಿಲ್ಲಿಸುವುದು ಬೇಡ ಎಂದು ವರನ ಪೋಷಕರಿಗೆ ಧೈರ್ಯ ಹೇಳಿ ಬೇರೆ ಯುವತಿ ಹುಡುಕಾಟ ನಡೆಸಿದ್ದಾರೆ. ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಮದ ಯುವತಿ ಮತ್ತು ಆಕೆಯ ತಂದೆ ತಾಯಿಗೆ ನಡೆದ ಘಟನೆಯ ಬಗ್ಗೆ ಮನವರಿಕೆ ಮಾಡಿಕೊಟ್ಟು ಅವರ ಒಪ್ಪಿಗೆ ಪಡೆದು ಸೋಮವಾರ ನಿಗದಿಯಾಗಿದ್ದ ಮುಹೂರ್ತದಲ್ಲಿಯೇ ಮದುವೆ ನೆರವೇರಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ