LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಾನ್ಸರ್ ಕಿಶನ್ ಬೆಳಗಲಿ ಹಾಗೂ ನಟಿ ನಿವೇದಿತಾ ಗೌಡ ವಿರುದ್ಧ ದೂರು ದಾಖಲು

ಬೆಂಗಳೂರು: ಖ್ಯಾತ ಡಾನ್ಸರ್ ಕಿಶನ್ ಬೆಳಗಲಿ ಹಾಗೂ ನಟಿ ನಿವೇದಿತಾ ಗೌಡ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಹಳ್ಳಿ ಅರಣ್ಯ ಇಲಾಖೆಗೆ ದೂರು ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಕೆಲ ದಿನಗಳಿಂದ ಕಿಶನ್ ಬೆಳಗಲಿ ಹಾಗೂ ನಿವೇದಿತಾ ಅವರ ನವಿಲುಗರಿ ಉಡುಪು ಧರಿಸಿ ಮಾಡಿದ್ದ ರೀಲ್ಸ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಗಮನ ಸೆಳೆದಿತ್ತು. ಇದೀಗ ಈ ರೀಲ್ಸ್ ಗಾಗಿ ಕಿಶನ್ ಹಾಗೂ ನಿವೇದಿತಾ ಅವರು ಧರಿಸಿದ್ದ ನವಿಲುಗರಿ ವಿಚಾರವಾಗಿ ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

ರೀಲ್ಸ್ ವಿಡಿಯೋದಲ್ಲಿ ಧರಿಸಿದ್ದ ನವಿಲುಗರಿ ನೈಜವಾಗಿರುವುದೇ? ಅಥವಾ ಕೃತಕ ನವಿಲುಗರಿಯೇ? ಎಂಬುದನ್ನು ತನಿಖೆ ನಡೆಸುವಂತೆ ಹಾಗೂ ಒಂದು ವೇಳೆ ನೈಜ ನವಿಲುಗರಿಗಳಾಗಿದ್ದರೆ ಅವುಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳುವಂತೆ ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ಒತ್ತಾಯಿಸಿದ್ದಾರೆ. ನೈಜ ನವಿಲುಗರಿಗಳಾಗಿದ್ದರೆ ಅವು ಸೊಕ್ಕಿದ್ದಾದರೂ ಹೇಗೆ? ಕಾನೂನು ಪ್ರಕಾಅರ ಇದು ಅಪರಾಧ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರುನ ಹಿನ್ನೆಲೆಯಲ್ಲಿ ಅರಯ ಇಲಾಖೆ ಕೇಸ್ ದಾಖಲಿಸಿಕೊಂಡಿದೆ. ಕಿಶನ್ ಬೆಳಗಲಿ ಹಾಗೂ ನಿವೇದಿತಾ ಹಾಗೂ ಕಸ್ಟ್ಯೂಮ್ ಡಿಸೈನ್ ಮಾಡಿರುವವವರಿಗೂ ಸಂಕಷ್ಟ ಎದುರಾಗಿದೆ.

ಕಿಶನ್ ಬೆಳಗಲಿ ಹಾಗೂ ನಿವೇದಿತಾ, ರವಿಚಂದ್ರನ್ ಅಭಿನಯದ ಕಲಾವಿದ ಚಿತ್ರದ ನವಿಲೇ…ಹೇ ನವಿಲೇ…ಹೆಣ್ಣ ನವಿಲೇ…ನವಿಲೇ..ಹಾಡಿಗೆ ನವಿಲುಗರಿಯ ಉಡುಪು ಧರಿಸಿ ರೀಲ್ಸ್ ಮಾಡಿದ್ದರು. ಈ ರಿಲೀಲ್ಸ್ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಆದರೆ ನವಿಲುಗರಿ ಬಳಿಸಿದ ಕಾರಣಕ್ಕಾಗಿ ಇದೀಗ ದೂರು ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಸಿಐಡಿ ತನಿಖೆಯಲ್ಲಿ ₹5 ಕೋಟಿಗೂ ಹೆಚ್ಚು ಅಕ್ರಮ ಹಣ ರವಾನೆ ಪತ್ತೆಹಾವೇರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ; ತಂದೆ, ಮಗ ಸ್ಥಳದಲ್ಲೇ ದುರಂತ ಸಾವು!BREAKING : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಹರಿದ ಬಸ್ : ಸ್ಥಳದಲ್ಲೇ ಇಬ್ಬರ ದುರ್ಮರಣ!BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYC