LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ಡ ಮತದಾನ: ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಮಹತ್ವದ ಸೂಚನೆ

ನವದೆಹಲಿ: ವಿಧಾನ ಪರಿಷತ್​ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಬುಲಾವ್ ಮೇರೆಗೆ ರಾಅಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್​. ಅಶೋಕ್ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರು ರಾಅಜ್ಯದ ನಾಅಯಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ.

ದೆಹಲಿಗೆ ಕರೆಸಿಕೊಂಡಿದ್ದ ವರಿಷ್ಠರು ಅಡ್ಡಮತದಾನ ​ ಸಂಬಂಧ ಜೂನ್ 25ರ ಒಳಗೆ ತುರ್ತಾಗಿ ಸಂಪೂರ್ಣ ವರದಿ ನೀಡಲು ಸಿ.ಟಿ.ರವಿ ನೇತೃತ್ವದ ಸತ್ಯಸೋಧನಾ ಸಮಿತಿಗೆ ಸೂಚಿಸಿದೆ. ಈ ಸಂಬಂಧ ಅಶೋಕ್​​ ಮತ್ತು ವಿಜಯೇಂದ್ರ ಅವರಿಗೆ ಸ್ಪಷ್ಟ ಮಾಹಿತಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣವನ್ನು ಬಿಜೆಪಿ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದ್ದು, ವರದಿಯಲ್ಲಿ ಅಡ್ಡಮತದಾನ ಮಾಡಿದ ಶಾಸಕರ ಹೆಸರು ಸಮೇತ ಮಾಹಿತಿ ನೀಡುವ ಜೊತೆಗೆ ಕ್ರಾಸ್​​ ವೋಟಿಂಗ್​​ ಮಾಡಿದ ಕಾರಣವನ್ನೂ ವಿವರವಾಗಿ ನೀಡುವಂತೆ ನಿತಿನ್​​ ನಬಿನ್​​ ರಾಜ್ಯ ಘಟಕಕ್ಕೆ ಸೂಚಿಸಿದ್ದಾರೆ. ಸಮಿತಿ ನೀಡುವ ವರದಿ ಆಧರಿಸಿ ತುರ್ತು ಕ್ರಮ ಕೈಗೊಳ್ಳಲು ನಿರ್ಧರಿಸಿದೆ.

ಸಾಂದರ್ಭಿಕ ಸಾಕ್ಷಿ ಮತ್ತು ಹೇಳಿಕೆ ಪರಾಮರ್ಶಿಸಿ ಸಿ.ಟಿ.ರವಿ ನೇತೃತ್ವದ ಸಮಿತಿ ಪ್ರಾಥಮಿಕ ವರದಿ ಸಿದ್ಧಪಡಿಸಲಿದ್ದು, ದೆಹಲಿಯಿಂದ ಸೂಚನೆ ಬಂದರೆ ಇಂದೇ ಪ್ರಾಥಮಿಕ ಮಾಹಿತಿ ರವಾನೆ ಸಾಧ್ಯತೆ ಇದೆ. ಇಲ್ಲದಿದ್ದರೆ ಬಿ.ವೈ. ವಿಜಯೇಂದ್ರ ದೆಹಲಿಯಿಂದ ಹಿಂತಿರುಗಿದ ಬಳಿಕ ವರದಿ ಸಲ್ಲಿಕೆ ನಡೆಯಲಿದೆ. ಆದರೆ ಅಡ್ಡ ಮತದಾನ ಮಾಡಿದವರ ಹೆಸರು ಉಲ್ಲೇಖಿಸುವುದು ಕಷ್ಟಸಾಧ್ಯದ ವಿಚಾರವಾಗಿದ್ದು, ಬಹುತೇಕ ಎಲ್ಲಾ ಶಾಸಕರನ್ನು ದೂರವಾಣಿ ಮೂಲಕ ಅದಾಗಲೇ ಸಮಿತಿ ಸಂಪರ್ಕಿಸಿದೆ. ಜೂನ್ 25ರೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಜೂನ್ 19ರಂದೇ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಆದೇಶಿಸಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ