LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮಾರ್ಗಸೂಚಿ ಶೀಘ್ರ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ದುರ್ಬಳಕೆ ತಡೆಗೆ ಸರ್ಕಾರ ಮುಂದಾಗಿದ್ದು, ಮತ್ತೊಮ್ಮೆ ಎಲ್ಲಾ ಫಲಾನುಭವಿಗಳು ಅರ್ಜಿ ಸಲ್ಲಿಸಲು ಮಾರ್ಗಸೂಚಿ ಸಿದ್ದಪಡಿಸುತ್ತಿದೆ.

ಇನ್ನು ಎರಡರಿಂದ ಮೂರು ದಿನಗಳಲ್ಲಿ ಮಾರ್ಗಸೂಚಿಯ ಅಂತಿಮಗೊಳಿಸಲಾಗುವುದು. ಮೃತಪಟ್ಟವರು, ಐಟಿ/ಜಿಎಸ್‌ಟಿ ಪಾವತಿದಾರರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶೀಘ್ರದಲ್ಲೇ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಂಡಿದೆ.

ಅನಕ್ಷರಸ್ಥರು ಸೇರಿದಂತೆ ಅರ್ಜಿ ಸಲ್ಲಿಸಲು ಬಾರದವರಿಗೆ ಸಹಾಯ ಮಾಡಲು ಅಂಗನವಾಡಿ ಸಿಬ್ಬಂದಿ ಬಳಕೆ ಮಾಡಿಕೊಳ್ಳಲಾಗುವುದು. ಅಂಗನವಾಡಿ ಸಿಬ್ಬಂದಿಯ ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಆ್ಯಪ್ ಇನ್ಸ್ಟಾಲ್ ಮಾಡಲಿದ್ದು, ಈ ಆ್ಯಪ್ ಮೂಲಕ ಅನಕ್ಷರಸ್ಥರು, ಬಡವರು ಅರ್ಜಿ ಸಲ್ಲಿಸಬಹುದು. ಅಲ್ಲದೇ, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು. ಸೇವಾ ಕೇಂದ್ರಗಳಲ್ಲಿಯೂ ಕೂಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

ಅರ್ಜಿ ಸ್ವೀಕರಿಸುವ ವೇಳೆ ಫೇಸ್ ರೆಕಗ್ನಿಶನ್, ಬಯೋಮೆಟ್ರಿಕ್ ಸಂಗ್ರಹಿಸಲಾಗುವುದು. ಅರ್ಜಿ ಸಲ್ಲಿಸುವ ಫಲಾನುಭವಿಗಳು ರಾಜ್ಯದಲ್ಲಿರುವ ಬ್ಯಾಂಕ್ ಖಾತೆ ನೀಡಬೇಕು. ಯೋಜನೆಗೆ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ದಾರರು ಅರ್ಹರಾಗಿದ್ದು, ಐಟಿ/ಜಿಎಸ್‌ಟಿ ಪಾವತಿದಾರರು ಅರ್ಹರಾಗಿರುವುದಿಲ್ಲ ಎಂದು ಹೇಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ