LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಿರುಪತಿ ತಿಮ್ಮಪ್ಪನ ದರ್ಶನ ಟಿಕೆಟ್ ಬುಕ್ ಆಗುತ್ತಿಲ್ಲ! ಭಕ್ತರ ಆಕ್ರೋಶ ; ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ.!

ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಭಕ್ತರ ಅನುಕೂಲಕ್ಕಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಪ್ರತಿ ತಿಂಗಳು ಆನ್‌ಲೈನ್ ಮೂಲಕ ಸೇವಾ ಟಿಕೆಟ್‌ಗಳು, ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳು ಹಾಗೂ ವಸತಿ ಕೊಠಡಿಗಳ ಬುಕ್ಕಿಂಗ್‌ನ್ನು ಆರಂಭಿಸುತ್ತದೆ.

ಸೆಪ್ಟೆಂಬರ್ ತಿಂಗಳ ವಿಶೇಷ ಪ್ರವೇಶ ದರ್ಶನದ ₹300 ಟಿಕೆಟ್‌ಗಳನ್ನು ಜೂನ್ 24ರಂದು ಟಿಟಿಡಿ ಬಿಡುಗಡೆ ಮಾಡಿತ್ತು. ಆದರೆ ಟಿಕೆಟ್ ಬುಕ್ ಮಾಡಲು ಪ್ರಯತ್ನಿಸಿದ ಅನೇಕ ಭಕ್ತರು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಿಕೆಟ್‌ಗಳು ಲಭ್ಯವಿರುವಂತೆ ತೋರಿಸಿದರೂ ಬುಕ್ ಮಾಡಲು ಪ್ರಯತ್ನಿಸಿದಾಗ ಪ್ರಕ್ರಿಯೆ ಪೂರ್ಣಗೊಳ್ಳುತ್ತಿಲ್ಲ ಎಂದು ಭಕ್ತರು ಆರೋಪಿಸಿದ್ದಾರೆ.

ಅಮರೆಂದ್ರ ಎಂಬ ನೆಟಿಜನ್, ಸೆಪ್ಟೆಂಬರ್ ವಿಶೇಷ ಪ್ರವೇಶ ದರ್ಶನ ಟಿಕೆಟ್ ಬುಕ್ಕಿಂಗ್‌ನಲ್ಲಿ ಸಮಸ್ಯೆ ಎದುರಾಗುತ್ತಿದೆ ಎಂದು ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿ, ತಾನು ಅನುಭವಿಸಿದ ಸಮಸ್ಯೆಯ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಟಿಟಿಡಿ ಹಾಗೂ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಮನವಿ ಮಾಡಿದ್ದಾರೆ.

ಅಲ್ಲದೆ, ಜನವರಿ 2026ರಿಂದ ಟಿಟಿಡಿ ವೆಬ್‌ಸೈಟ್‌ನ ವಿಶ್ವಾಸಾರ್ಹತೆ ಕುಸಿಯುತ್ತಿದ್ದು, ಬುಕ್ಕಿಂಗ್ ಸಮಯದಲ್ಲಿ ಭಕ್ತರಿಗೆ ನಿರಂತರ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿದ್ದಾರೆ. ವೆಬ್‌ಸೈಟ್ ನಿರ್ವಹಣೆ ಮತ್ತು ತಾಂತ್ರಿಕ ತಂಡವನ್ನು ಸುಧಾರಿಸುವಂತೆ ಒತ್ತಾಯಿಸಿದ್ದಾರೆ.

ಮತ್ತೊಬ್ಬ ಭಕ್ತರು, ಜೂನ್ 23ರಂದು ಬೆಳಿಗ್ಗೆ 10 ಗಂಟೆಗೆ ಸೆಪ್ಟೆಂಬರ್ 27ರ ಎಸ್‌ಡಿ ಸೇವೆ ಬುಕ್ ಮಾಡಲು ಪೋರ್ಟಲ್‌ಗೆ ಲಾಗಿನ್ ಆಗಿದ್ದಾಗಿ ತಿಳಿಸಿದ್ದಾರೆ. ಸ್ಲಾಟ್‌ಗಳು ಹಸಿರು ಬಣ್ಣದಲ್ಲಿ ಲಭ್ಯವಿರುವಂತೆ ಕಾಣಿಸಿಕೊಂಡರೂ ಬುಕ್ ಮಾಡಲು ಪ್ರಯತ್ನಿಸಿದಾಗ ಪ್ರತಿಯೊಂದು ಸ್ಲಾಟ್‌ನಲ್ಲೂ ಎರರ್ ಸಂದೇಶ ಬರುತ್ತಿತ್ತು ಎಂದು ಹೇಳಿದ್ದಾರೆ. ಹಲವು ದಿನಾಂಕಗಳನ್ನು ಪ್ರಯತ್ನಿಸಿದರೂ ಅದೇ ಸಮಸ್ಯೆ ಎದುರಾಯಿತು ಎಂದು ತಿಳಿಸಿದ್ದಾರೆ.

ಇನ್ನೊಬ್ಬ ಭಕ್ತರು, ದರ್ಶನ ಟಿಕೆಟ್‌ಗೆ ಪಾವತಿ ಯಶಸ್ವಿಯಾಗಿ ಪೂರ್ಣಗೊಂಡಿದ್ದರೂ, ಟಿಟಿಡಿ ಆ್ಯಪ್‌ನಲ್ಲಿ ಬುಕ್ಕಿಂಗ್ ವಿಫಲವಾಗಿದೆ ಎಂದು ತೋರಿಸುತ್ತಿದೆ ಎಂದು ದೂರಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ.

ಇದೇ ರೀತಿಯ ಸಮಸ್ಯೆ ಅನೇಕ ಭಕ್ತರಿಗೆ ಎದುರಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಪ್ರತಿಕ್ರಿಯಿಸಿದ್ದಾರೆ. ಹಿಂದೆ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಸುಗಮವಾಗಿತ್ತು. ಈಗಿನ ಪರಿಸ್ಥಿತಿ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಟಿಟಿಡಿ, ತನ್ನ ವೆಬ್‌ಸೈಟ್ ಮೂಲಸೌಕರ್ಯವನ್ನು ಏಕೆ ವಿಸ್ತರಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಟಿಟಿಡಿ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತದೆ ಎಂಬುದು ಕಾದು ನೋಡಬೇಕಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ