LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್‌ಎಸ್‌ಎಸ್‌ನವರು ನಕಲಿ ಹಿಂದೂಗಳು, ಅವರ ಮೂಲಕ ಬಿಜೆಪಿಗೆ ಬಂದವರೂ ನಕಲಿ ಹಿಂದೂಗಳೇ: ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ; ವಿಡಿಯೊ

ಕರ್ನಾಟಕದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ನೋಂದಾಯಿತ ಸಂಘಟನೆಯೇ, ಅವರ ಆದಾಯದ ವಿವರವನ್ನು ಒದಗಿಸಲಿ ಎಂದು ನೀಡಿದ್ದ ಹೇಳಿಕೆ ವಿವಾದವನ್ನು ಎಬ್ಬಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈ ವಿವಾದದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾದವು.

ಇದೀಗ ಮತ್ತೋರ್ವ ವ್ಯಕ್ತಿ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದ್ದು, ಮತ್ತೆ ಆರ್‌ಎಸ್‌ಎಸ್‌ ಅಭಿಮಾನಿಗಳು ಹಾಗೂ ಹಿಂಬಾಲಕರು ಕಿಡಿಕಾರಿದ್ದಾರೆ. ಉತ್ತರ ಪ್ರದೇಶದ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಆರ್‌ಎಸ್‌ಎಸ್‌ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಅಸಲಿ ಹಾಗೂ ನಕಲಿ ಹಿಂದೂಗಳ ಕುರಿತ ಚರ್ಚೆಯಲ್ಲಿ ನಕಲಿ ಹಿಂದೂಗಳು ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಿದ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ‘ಆರ್‌ಎಸ್‌ಎಸ್‌ನವರು ನಕಲಿ ಹಿಂದೂಗಳು ಹಾಗೂ ಅವರ ಮೂಲಕ ಬಿಜೆಪಿಯಲ್ಲಿ ಕುಳಿತಿರುವವರು ನಕಲಿ ಹಿಂದೂಗಳು. ಆರ್‌ಎಸ್‌ಎಸ್‌ನವರು ನಕಲಿ ಹಿಂದೂಗಳು ಎಂದು ನೋಂದಾಯಿತರಾಗಿದ್ದಾರೆ, ಸದ್ಯಕ್ಕೆ ಅವರು ನಕಲಿ ಹಿಂದೂಗಳು ಎಂಬುದು ಸಾಬೀತಾಗಿದೆ’ ಎಂದರು.

ಇನ್ನು ನಕಲಿ ಹಾಗೂ ಅಸಲಿ ಹಿಂದೂಗಳಿಗೆ ಇರುವ ವ್ಯತ್ಯಾಸವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ‘ಅಸಲಿ ಹಿಂದೂಗಳು ವೇದ ಹಾಗೂ ಪುರಾಣಗಳನ್ನು ನಂಬುತ್ತಾರೆ, ವೇದ ಹಾಗೂ ಪುರಾಣಗಳಲ್ಲಿ ಏನಾದರೂ ಸಂಶಯವಿದ್ದರೆ ಅದನ್ನು ಗುರುಗಳ ಬಳಿ ಚರ್ಚಿಸಿ ಬಗೆಹರಿಸಿಕೊಳ್ಳುತ್ತಾರೆ. ನಕಲಿ ಹಿಂದೂಗಳು ವೇದ, ಪುರಾಣ ಹಾಗೂ ಗುರು ಇದ್ಯಾವುದನ್ನೂ ಸಹ ನಂಬುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದು, ಆರ್‌ಎಸ್‌ಎಸ್‌ನವರು ಇವುಗಳನ್ನು ಪಾಲಿಸದ ನಕಲಿ ಹಿಂದೂಗಳು ಎಂದಿದ್ದಾರೆ.

ಸದ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿಗಳ ಈ ಹೇಳಿಕೆ ವೈರಲ್ ಆಗಿದ್ದು, ಆರ್‌ಎಸ್‌ಎಸ್ ಹಿಂಬಾಲಕರು ಸ್ವಾಮೀಜಿ ವಿರುದ್ಧ ಕೆಂಡಕಾರುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ