LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ಡಮತದಾನ ವಿಚಾರ: ಏಕಾಂಗಿಯಾಗಿ ಧರ್ಮಸ್ಥಳಕ್ಕೆ ತೆರಳಲು ಮುಂದಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ವಿಧಾನ ಪರಿಷತ್ ಚುನವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ಬೆನ್ನಲ್ಲೇ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಶಾಸಕರು ಆಣೆ-ಪ್ರಮಾಣ ಮಾಡುವಂತೆ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದೀಗ ಏಕಾಂಗಿಯಾಗಿ ಧರ್ಮಸ್ಥಳಕ್ಕೆ ತೆರಳಲು ಸಜ್ಜಾಗಿದ್ದಾರೆ.

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಸತ್ಯಾಸತ್ಯತೆ ತಿಳಿಯಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಿ, ಶಾಸಕರಿಂದ ಆಣೆ-ಪ್ರಮಾಣ ಮಾಡಿಸಲು ಮೊದಲು ಯೋಜಿಸಲಾಗಿತ್ತು. ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಬೇಕು ಎಂದು ವಿಜಯೇಂದ್ರ ಹೇಳಿದ್ದರು. ಆದರೆ, ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಇಂತಹ ರಾಜಕೀಯ ಸಭೆ ಹಾಗೂ ಆಣೆ-ಪ್ರಮಾಣದ ರಾಜಕಾರಣ ಮಾಡುವುದಕ್ಕೆ ಪಕ್ಷದ ಹಿರಿಯ ನಾಯಕರಿಂದಲೇ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರಿಂದಾಗಿ ಧರ್ಮಸ್ಥಳದಲ್ಲಿ ಶಾಸಕಾಂಪ್ಗ ಪಕ್ಷದ ಸಭೆ ಹಾಗೂ ಆಣೆ-ಪ್ರಮಾಣ ನಿರ್ಧಾರವನ್ನು ಕೈಬಿಡಲಾಗಿತ್ತು.

ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಗೊಂದಲಗಳಿಂದಾಗಿ ಈ ಬೆಳವಣಿಗೆಗಳ ಬಗ್ಗೆ ವಿಜಯೇಂದ್ರ ಅವರನ್ನೇ ಪಕ್ಷದ ಕೆಲ ನಾಯಕರು ದೂಷಿಸಲು ಆರಂಭಿಸಿದ್ದರು ಎನ್ನಲಾಗಿದೆ. ಇದರಿಂದ ಬೇಸರಗೊಂಡಿರುವ ವಿಜಯೇಂದ್ರ ಏಕಾಂಗಿಯಾಗಿ ಧರ್ಮಸ್ಥಳಕ್ಕೆ ತೆರಳಲು ನಿರ್ಧರಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಇಂದು ರಾತ್ರಿ ನೇರವಾಗಿ ಮಂಗಳೂರಿಗೆ ಬರಲಿದ್ದು, ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ 7 ರಿಂದ 8 ಗಂಟೆಯ ಅವಧಿಯಲ್ಲಿ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ