LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರಪ್ರೇಮಿಗಳ ಗಮನ ಸೆಳೆದ ‘ಪಿಚ್ಚರ್’ ಸಿನಿಮಾದ ಮೂರನೇ ಹಾಡು: ಜ್ಯಾಸಿ ಗಿಫ್ಟ್ ಗಾಯನಕ್ಕೆ ಫ್ಯಾನ್ಸ್ ಫಿದಾ

ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಿರುವ ‘ಪಿಚ್ಚರ್’ ಕನ್ನಡ ಸಿನಿಮಾದ ಮೂರನೇ ಹಾಡು ಅಧಿಕೃತವಾಗಿ ಬಿಡುಗಡೆಯಾಗಿದೆ. ಗೋಲ್ಡನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಖ್ಯಾತ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸುತ್ತಿದ್ದು, ಸದ್ಯ ಹೊರಬಂದಿರುವ ‘ಹುಣ್ಣಿಮೆ ಚಂದಿರ’ ಎಂಬ ವಿಡಿಯೋ ಸಾಂಗ್ ಪ್ರೇಕ್ಷಕರ ಮನ ಗೆಲ್ಲುತ್ತಿದೆ.

ಸಿನಿಮಾ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿರುವ ಈ ಹಾಡಿಗೆ ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಿರ್ದೇಶಕ ಸುನಿ ಸಾಹಿತ್ಯ ಬರೆದಿದ್ದಾರೆ. ಖ್ಯಾತ ಗಾಯಕ ಜ್ಯಾಸಿ ಗಿಫ್ಟ್ ತಮ್ಮ ವಿಶಿಷ್ಟ ಕಂಠದಲ್ಲಿ ಈ ಗೀತೆಯನ್ನು ಹಾಡಿದ್ದು, ಸ್ಯಾಮ್ಯುಯೆಲ್ ಅಬಿ ಅವರ ಸಂಗೀತ ಸಂಯೋಜನೆ ಮತ್ತು ಹಿನ್ನೆಲೆ ಸಂಗೀತ ಈ ಹಾಡಿನ ಪ್ರಮುಖ ಆಕರ್ಷಣೆಯಾಗಿದೆ.

ಸಂದೀಪ ಬೇಡ್ರ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ನಿತ್ಯಪ್ರಕಾಶ್ ಬಂಟ್ವಾಳ್ ಮತ್ತು ಅಮೃತಾ ಸುಡು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇವರೊಂದಿಗೆ ಕರಾವಳಿಯ ಜನಪ್ರಿಯ ಹಾಸ್ಯ ನಟರಾದ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್ ಹಾಗೂ ಭೋಜರಾಜ್ ವಾಮಂಜೂರ್ ಸೇರಿದಂತೆ ಹಲವು ಹಿರಿಯ ಕಲಾವಿದರು ಬಣ್ಣ ಹಚ್ಚಿದ್ದಾರೆ. ತಾಂತ್ರಿಕ ವಿಭಾಗದಲ್ಲಿ ಸಂತೋಷ್ ರೈ ಪತಾಜೆ ಮತ್ತು ಚಂದ್ರಶೇಖರ್ ಕೆ ಎಸ್ ಅವರ ಛಾಯಾಗ್ರಹಣವಿದ್ದು, ರಾಜು ಆರ್ಯನ್ ಅವರ ಸಂಕಲನ ಕಾರ್ಯ ಈ ಚಿತ್ರಕ್ಕಿದೆ. ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಿಕೊಂಡಿರುವ ‘ಪಿಚ್ಚರ್’ ಸಿನಿಮಾ ಜುಲೈ ಇಪ್ಪತ್ತನಾಲ್ಕರಂದು ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಪ್ರಕಟಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ