LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದರ್ಶನ್ ಪುತ್ರ ವಿನೀಶ್ ಕಾರು ಅಪಘಾತ: ತಾಯಿ ವಿಜಯಲಕ್ಷ್ಮೀ ಹೇಳಿದ್ದೇನು?

ಬೆಂಗಳೂರು: ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಕೆಲಕಾಲ ಗಲಾಟೆ ನಡೆದ ಘಟನೆ ಕೂಡ ನಡೆದಿದೆ. ಈ ವೇಳೆ ಸ್ಥಳೀಯರು ಹಾಗೂ ವಿನೀಶ್ ನಡುವೆ ವಾಗ್ವಾದ ನಡೆದಿದೆ.

ಬೆಂಗಳೂರಿನ ಆರ್.ಆರ್. ನಗರದ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ವಿನೀಶ್ ಕಾರು ಓಡಿಸುತ್ತಿದ್ದರು ಎನ್ನಲಾಗಿತ್ತು. ಆದರೆ ನಿನೀಷ್ ಕಾರು ಓಡಿಸುತ್ತಿರಲಿಲ್ಲ. ಚಾಲಕ ಕಾರು ಓಡಿಸುತ್ತಿದ್ದು, ವಿನೀಶ್ ಪಕ್ಕದ ಸೀಟ್ ನಲ್ಲಿ ಕುಳಿತಿದ್ದರು ಎಂದು ತಿಳಿದುಬಂದಿದೆ.

ವಿನೀಶ್ ಅವರು KA01 MU9969 ಸಂಖ್ಯೆಯ ಫೋರ್ಡ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ಅಪಘಾತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸದ್ಯಕ್ಕೆ ಪೊಲೀಸ್ ಠಾಣೆಯಲ್ಲಿ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ.

ಅಪಘಾತಕ್ಕೆ ಸಂಬಂಧಿಸಿದಂತೆ ವಿನೀಶ್ ತಾಯಿ ವಿಜಯಲಕ್ಷ್ಮೀ ದರ್ಶನ್ ಸ್ಪಷ್ಟನೆ ನೀಡಿದ್ದಾರೆ. ವಿನೀಶ್‌ಗೆ ದೊಡ್ಡ ಅಪಘಾತವಾಗಿದೆ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು. ವಿನೀಶ್ ಸುರಕ್ಷಿತವಾಗಿದ್ದಾನೆ ಮತ್ತು ಆರಾಮಾಗಿದ್ದಾನೆ. ಎಂದಿನಂತೆ ನಮ್ಮ ಚಾಲಕನೇ ಕಾರನ್ನು ಚಲಾಯಿಸುತ್ತಿದ್ದನು. ವಿನೀಶ್ ವಾಹನ ಚಲಾಯಿಸುತ್ತಿರಲಿಲ್ಲ. ಬೆಂಗಳೂರಿನ ಟ್ರಾಫಿಕ್‌ನಲ್ಲಿ ಸಾಮಾನ್ಯ ಎನ್ನುವಂತಹ ಒಂದು ಸಣ್ಣ ರಸ್ತೆ ಅಪಘಾತ ಸಂಭವಿಸಿದೆ ಅಷ್ಟೆ. ಎದುರಿಗಿದ್ದ ಬೈಕ್ ಸವಾರರು ಕೂಡ ತಮ್ಮದೇ ತಪ್ಪು ಎಂದು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬೈಕ್‌ನಲ್ಲಿದ್ದವರು ಸುರಕ್ಷಿತವಾಗಿದ್ದಾರೆಯೇ ಎಂದು ನೋಡಲು ವಿನೀಶ್ ಕಾರಿನಿಂದ ಕೆಳಗಿಳಿದಿದ್ದನು. ಆದರೆ ಆ ಕೆಲವು ಕ್ಷಣಗಳ ದೃಶ್ಯಗಳನ್ನು ಸಂದರ್ಭಕ್ಕೆ ತಕ್ಕುದಲ್ಲದ ರೀತಿಯಲ್ಲಿ ಮತ್ತು ತಪ್ಪು ದಾರಿಗೆಳೆಯುವಂತೆ ಬಿಂಬಿಸಲಾಗಿದೆ. ಯಾರು ಕೂಡ ಇಂತಹ ಸುಳ್ಳು ವರದಿಗಳನ್ನು ನಂಬಬೇಡಿ ಮತ್ತು ಶೇರ್ ಮಾಡಬೇಡಿ ಎಂದು ವಿಜಯಲಕ್ಷ್ಮೀ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
‘ಆಪರೇಶನ್ ಸಿಂಧೂರ್’ ವೇಳೆ ಹುತಾತ್ಮರಾದ 6 ಯೋಧರ ಹೆಸರುಗಳನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ.! ಇಲ್ಲಿದೆ ಮಾಹಿತಿಎಲ್ ಪಿಜಿ ಸಿಲಿಂಡರ್ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ALERT : ‘IT’ ಉದ್ಯೋಗಿಗಳೇ ಎಚ್ಚರ ! ಹೊಸ ‘ಬಾಸ್ ಸ್ಕ್ಯಾಮ್’ ಭೀತಿ ; ಕೇವಲ 20 ದಿನಗಳಲ್ಲಿ 300ಕ್ಕೂ ಹೆಚ್ಚು ಕೇಸ್ ದಾಖಲು.!ಅಡ್ಡಮತದಾನ ಮಾಡಿದವರ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿ: ತನ್ನ ವಿರುದ್ಧ ಆರೋಪ, ಅಪಪ್ರಾಚಾರಕ್ಕೂ ಧರ್ಮಸ್ಥಳದಲ್ಲಿ ಸ್ಪಷ್ಟನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷದೇಶದಲ್ಲಿ ಇನ್ನುಮುಂದೆ ಪಾಸ್‌ಪೋರ್ಟ್ ಪಡೆಯುವ ಪ್ರಕ್ರಿಯೆ ದುಬಾರಿ; ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರಉಸಿರುಗಟ್ಟಿಸುವ ಹೊಗೆಯ ಮಧ್ಯೆ 7 ತಿಂಗಳ ಮಗುವಿನ ಜೀವ ಉಳಿಸಿದ 18 ವರ್ಷದ ಯುವತಿ ; ವಿಡಿಯೋ ವೈರಲ್ |WATCH VIDEOBREAKING: ನಾಡಬಾಂಬ್ ಸ್ಪೋಟಗೊಂಡು ವಕೀಲನಿಗೆ ಗಂಭೀರ ಗಾಯದರ್ಶನ್ ಪುತ್ರ ವಿನೀಶ್ ಕಾರು ಅಪಘಾತ: ತಾಯಿ ವಿಜಯಲಕ್ಷ್ಮೀ ಹೇಳಿದ್ದೇನು?ರಸ್ತೆ ಅಪಘಾತ ಪ್ರಕರಣಗಳಲ್ಲಿ ಮೃತನ ಎರಡನೇ ಪತ್ನಿಗೂ ಸಮಾನ ಪರಿಹಾರ: ಹೈಕೋರ್ಟ್ ಆದೇಶಖಾಸಗಿ ವಿಡಿಯೊ ಬ್ಲಾಕ್‌ಮೇಲ್ ಮಾಡುವ ಕೀಚಕರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ; ಬೀಳಲಿದೆ ಶೂನ್ಯ ಎಫ್ಐಆರ್