ಬೆಂಗಳೂರು: ರಸ್ತೆ ಅಪಘಾತ ಪ್ರಕರಣಗಳಲ್ಲಿ ಪರಿಹಾರ ಘೋಷಣೆ ಮಾಡುವಾಗ ಮೃತ ವ್ಯಕ್ತಿಗೆ ಎರಡನೇ ಪತ್ನಿ ಇದ್ದರೆ ಆಕೆಗೂ ಸಮಾನವಾಗಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ರಸ್ತೆ ಅಪಘಾತ ಪ್ರಕರಣ ಸಂಬಂಧ ದಾವಣಗೆರೆಯ ಮೋಟಾರ್ ವಾಹನ ಅಪಘಾತಗಳ ಪರಿಹಾರ ನ್ಯಾಯಾಧಿಕರಣ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಅವರ ನೇತೃತ್ವದ ವಿಭಾಗೀಯ ಪೀಠ, ರಸ್ತೆ ಅಪಘಾತ ಪ್ರಕರಣಗಳಲ್ಲಿ ಪರಿಹಾರ ಘೋಷಣೆ ಮಾಡುವಾಗ ಮೃತನಿಗೆ ಎರಡನೇ ಪತ್ನಿ ಇದ್ದರೆ ಅವರಿಗೂ ಸಮಾನವಾಗಿ ಪರಿಹಾರ ನೀಡಬೇಕು ಎಂದು ಆದೇಶ ನೀಡಿದೆ.
ಅಲ್ಲದೇ, ವಾಹನ ಅಪಘಾತಗಳಲ್ಲಿ ಮೃತಪಟ್ಟವರ ಅರ್ಹ ವಾರಸುದಾರರನ್ನು ನಿರ್ಧರಿಸುವುದಕ್ಕೆ ಯಾವುದೇ ಕಾನೂನು ನಿಯಮಗಳಿಲ್ಲ. ಪರಿಹಾರ ಘೋಷಿಸುವಾಗ ಮೃತನ ಅವಲಂಬಿತರನ್ನು ಪರಿಗಣಿಸಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.