LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ಡಮತದಾನ ಮಾಡಿದವರ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿ: ತನ್ನ ವಿರುದ್ಧ ಆರೋಪ, ಅಪಪ್ರಾಚಾರಕ್ಕೂ ಧರ್ಮಸ್ಥಳದಲ್ಲಿ ಸ್ಪಷ್ಟನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿದ್ದು, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು, ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಧರ್ಮಸ್ಥಳದಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯೇಂದ್ರ, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕೆಲ ಶಾಸಕರಿಂದ ಅಡ್ಡಮತದಾನವಾಗಿದೆ. ಇದು ನನಗೆ ಹಾಗೂ ಲಕ್ಷಾಂತರ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಅಡ್ಡಮತದಾನವಾಗಿದೆ ಎಂಬುದು ಗೊತಾದ ಮರುದಿನ ನನ್ನ ಮನಸ್ಸಿಗೆ ಆಘಾತವಾಗಿತ್ತು ಎಂದು ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ ಸತ್ಯಾಅಸತ್ಯತೆ ತಿಳಿಯಲಿ ಎಂದು ಆಣೆ ವಿಚಾರ ಹೇಳಿದ್ದೆ. ನಾನು ಭಾವನಾತ್ಮಕ ವ್ಯಕ್ತಿ. ಮನಸ್ಸಿನಲ್ಲಿ ಇದ್ದುದನ್ನು ಹೇಳಿದ್ದೆ. ಆದರೆ ಪಕ್ಷದ ಹಲವರು ಇದು ಬೇಡ, ನಮ್ಮಲ್ಲೇ ಬಗೆಹರಿಸಿಕೊಳ್ಳೋಣ ಎಂದರು. ನಾನು ನಂಬುವ ಧರ್ಮಸ್ಥಳಕ್ಕೆ ಬಂದು ಇಂದು ದರ್ಶನ್ ಅಪಡೆದಿದ್ದೇನೆ ಎಂದರು.

ಇದೇ ವೇಳೆ ನನ್ನ ವಿರುದ್ಧ ಅಪಪ್ರಾಚರಗಳನ್ನು ಮಾಡಲಾಗುತ್ತಿದೆ. ಅಡ್ಡ ಮತದಾನಕ್ಕೆ ನಾನೇ ನಾನೇ ಅವಕಾಶ ಮಾಡಿಕೊಟ್ಟೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳಾಗುತ್ತಿವೆ. ನಾನು ಪಕ್ಷದ ಅಧ್ಯಕ್ಷನಾಗಿ ಅಂತಹ ಕೀಳು ಮಟ್ಟದ ಕೆಲಸ ಮಾಡಲ್ಲ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಜೊತೆ ನನಗೆ ರಾಜಕೀಯ ಹಾಗೂ ವ್ಯಾವಹಾರಿಕ ಸಂಬಂಧವಿದೆ ಎಂದು ನಮ್ಮ ಪಕ್ಷದವರೇ ಹಲವು ಬಾರಿ ಆರೋಪಿಸಿದ್ದಾರೆ. ಆದ್ದರಿಂದ ಧರ್ಮಸ್ಥಳದಲ್ಲಿ ನಿಂತು ನಾನು ಹೇಳುತ್ತಿದ್ದೇನೆ. ನನಗೂ ಡಿ.ಕೆ.ಶಿವಕುಮಾರ್ ಅವರಿಗೂ ಯಾವುದೇ ರಾಜಕೀಯ ವ್ಯಾವಹಾರಿಕ ಸಂಬಂಧವಿಲ್ಲ. ಆತ್ಮೀಯತೆಯೂ ಇಲ್ಲ. ಕೆಪಿಸಿಸಿ ಅಧ್ಯಕ್ಷ, ಮುಖ್ಯಮಂತ್ರಿ ಅವರಿಗೆ ಎಷ್ಟು ಗೌರವ ಕೊಡಬೇಕೋ ಅಷ್ಟು ಕೊಡುತ್ತಿದ್ದೇನೆ ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ