LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಮೈದ ಮಂಜುನಾಥ್ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನಲಾಗದು ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ವೈ.ಮಂಜುನಾಥ್ ಮನೆ ಮೇಲೆ ಜಾರಿ ನಿರ್ದೇಶನಾಲಯ- ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಎನ್ನಲಾಗದು ಎಂದು ತಿಳಿಸಿದ್ದಾರೆ.

‌ ಬೆಳಗಾವಿಯ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಬೆಳಗಾವಿ ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ವೈ.ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿರುವುದು ನಿಜ. ಅವರು ನಮ್ಮ ಸಂಬಂಧಿಯೂ ಹೌದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದನ್ನು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಲು ಸಾಧ್ಯವಿಲ್ಲ ಎಂದರು.

ಮಂಜುನಾಥ್ ಅವರ ಮೇಲೆ ಇಷ್ಟು ದೊಡ್ಡ ಮಟ್ಟದಲ್ಲಿ ಇಡಿ ದಾಳಿ ನಡೆಸಿರುವುದು ಇದೇ ಮೊದಲು. ಈ ಬೆಳವಣಿಗೆ ನಮಗೂ ಕೂಡ ಆತಂಕ ಮೂಡಿಸಿದೆ. ಈ ಹಿಂದೆ 2011 ರಲ್ಲಿ ಅವರ ಮೇಲೊಂದು ಪ್ರಕರಣ ದಾಖಲಾಗಿತ್ತು, ಆದರೆ ಅದು ಈಗಾಗಲೇ ರದ್ದಾಗಿದೆ. ಈಗಿನ ದಾಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಏನು ಪ್ರಶ್ನೆ ಕೇಳುತ್ತಾರೆ, ಯಾವ ಮಾಹಿತಿ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇಂದು ನಾನು ಕೂಡ ಮಂಜುನಾಥ್ ಅವರ ಜೊತೆ ಮಾತನಾಡುತ್ತೇನೆ ಎಂದರು.

ನಮ್ಮನ್ನು ರಾಜಕೀಯವಾಗಿ ಕಟ್ಟಿ ಹಾಕಲು ಈ ದಾಳಿ ನಡೆಸಲಾಗುತ್ತಿದೆಯೇ ಎಂಬುದು ಈಗಲೇ ಗೊತ್ತಾಗುವುದಿಲ್ಲ. ಅದಕ್ಕೆ ಕನಿಷ್ಠ ಆರು ತಿಂಗಳು ಬೇಕಾಗುತ್ತದೆ. ಸದ್ಯಕ್ಕೆ ಏನೂ ಹೇಳಲಾಗದು. ಸಾಮಾನ್ಯವಾಗಿ 2028ರ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಂತಹ ಇಡಿ ದಾಳಿಗಳು ಆರಂಭವಾಗುವುದು ಸಹಜ ಎಂದರು.

ಮಂಜುನಾಥ್ ಅವರ ಕುಟುಂಬಸ್ಥರು ಕಳೆದ 30 ವರ್ಷಗಳಿಂದ ಮದ್ಯದ ಅಂಗಡಿ ವ್ಯವಹಾರದಲ್ಲಿದ್ದಾರೆ. ಭ್ರಷ್ಟಾಚಾರದ ತನಿಖೆ ಕೇವಲ ಒಂದು ಇಲಾಖೆಗೆ ಮಾತ್ರ ಸೀಮಿತವಾಗಿಲ್ಲ, ಈ ಪ್ರಕರಣ ಇಷ್ಟಕ್ಕೇ ಮುಗಿಯುವುದೂ ಇಲ್ಲ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ