ಧಾರವಾಡ: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಬಳಿ ನಡೆದಿದೆ.
ಧಾರವಾಡ ತಾಲೂಕಿನ ಹಳೇ ತೇಗೂರಿನ ಷಣ್ಮುಖ ಜೋಗಿ(28), ಉತ್ತರ ಪ್ರದೇಶ ಮೂಲದ ಸಾಗರ್(30) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಗರಗ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಾರಿ ಟೈರ್ ಬ್ಲಾಸ್ಟ್ ಆಗಿದ್ದ ಹಿನ್ನೆಲೆಯಲ್ಲಿ ರಸ್ತೆ ಬದಿ ಲಾರಿ ನಿಲ್ಲಿಸಿ ಚಾಲಕ ಟೈರ್ ಬದಲಿಸುತ್ತಿದ್ದ. ಈ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಕ್ಯಾಂಟರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.