LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಕುಮಾರಸ್ವಾಮಿ ಭೈರಮಂಗಲಕ್ಕೆ ಹೋಗ್ತಾರೆ; ಸಿಎಂ ಡಿ.ಕೆ.ಶಿವಕುಮಾರ್ ಕೂಡ ಬಂದು ರೈತರೊಂದಿಗೆ ಚರ್ಚಿಸಲಿ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಬಿಡದಿ ಟೌನ್ ಶಿಪ್ ನಿರ್ಮಾಣ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ನಾಳೆ ಭೈರಮಂಗಲಕ್ಕೆ ಹೋಗ್ತಾ ಇದ್ದಾರೆ. ಸಿಎಂ ಡಿ.ಕೆ ಶಿವಕುಮಾರ್ ಅವರು ಭೈರಮಂಗಲಕ್ಕೆ ಬರಲಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಹ್ವಾನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮರಸ್ವಾಮಿ, ಸಿಎಂ ಅವರು ವಿಧಾನಸೌಧದಲ್ಲಿ 4 ಗೋಡೆ ಮಧ್ಯೆ ಚರ್ಚೆ ಮಾಡೋಣ ಅಂತ ಪತ್ರ ಬರೆದಿದ್ದರು. ಕುಮಾರಸ್ವಾಮಿ ಅವರು ರೈತರ ಸಮ್ಮುಖದಲ್ಲಿ ಚರ್ಚೆಗೆ ಕರೆದಿದ್ದಾರೆ. 4 ಗೋಡೆ ಮಧ್ಯೆ ಬೇಡ, ರೈತರ ಮಧ್ಯೆ ಕೂತು ಸಮಸ್ಯೆ ಪರಿಹಾರ ‌ಮಾಡೋಣ ಅಂತ ಕುಮಾರಸ್ವಾಮಿ ಅವರು ಪತ್ರ ಬರೆದಿದ್ದಾರೆ. ಸಿಎಂ ಅವರು ಕುಮಾರಸ್ವಾಮಿ ಅವರ ಪತ್ರಕ್ಕೆ ರಿಪ್ಲೈ ಕೊಟ್ಟಿಲ್ಲ. ಸಿಎಂ ಬ್ಯುಸಿ ಇರ್ತಾರೆ ಎಂದರು.

ಕುಮಾರಸ್ವಾಮಿ ‌ರೈತರ ಪರ ಇರೋ ವ್ಯಕ್ತಿ. ನಾಳೆ ಕುಮಾರಸ್ವಾಮಿ ಅವರು ಭೈರಮಂಗಲ ಸರ್ಕಲ್ ನಲ್ಲಿ ರೈತರ ಜೊತೆ ಕೂರುತ್ತಾರೆ‌. ಸಿಎಂ ‌ಅವರು ಬಂದು ಕೂತು ರೈತರೊಂದಿಗೆ ಮಾತಾಡಲಿ ಎಂದರು.

ಪಹಣಿ ಇರೋರು, ಸಮಸ್ಯೆ ಇರೋ ರೈತರನ್ನ ಕೂರಿಸಿಕೊಳ್ಳಲಿ. ಯಾವುದೇ, ಸಂಘರ್ಷ ಗಲಭೆಗೆ ಅವಕಾಶ ಇಲ್ಲ. ರೈತರ ಸಮಸ್ಯೆ ಸುಸೂತ್ರವಾಗಿ ಪರಿಹಾರ ಆಗಲಿ ಎಂಬುದು ನಮ್ಮೆಲ್ಲರ ಆಶಯ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ