LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐರ್ಲೆಂಡ್ ವಿರುದ್ಧ ಹೀನಾಯ ಸೋಲುಂಡ ಭಾರತ; ತಾನೂ ಸೇರಿದಂತೆ ಸೋಲಿಗೆ ಕಾರಣರಾದವರ ಹೆಸರು ಹೇಳದೇ ಆ ಇಬ್ಬರನ್ನು ಹೊಗಳಿ ಜಾರಿಕೊಂಡ ನಾಯಕ ಶ್ರೇಯಸ್!

ನಿನ್ನೆ ( ಜೂನ್ 26 ) ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಐರ್ಲೆಂಡ್ ಭಾರತವನ್ನು ಮಣಿಸಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಪಂದ್ಯವನ್ನು ಗೆದ್ದ ಐತಿಹಾಸಿಕ ದಾಖಲೆ ಬರೆದಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆರಿಸಿಕೊಂಡು ಐರ್ಲೆಂಡ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಐರ್ಲೆಂಡ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182 ರನ್ ದಾಖಲಿಸುವ ಮೂಲಕ ಭಾರತಕ್ಕೆ 183 ರನ್‌ಗಳ ಗುರಿಯನ್ನು ನೀಡಿತು. ಆದರೆ ಭಾರತ 18.5 ಓವರ್‌ಗಳಲ್ಲಿ 148 ರನ್‌ಗಳಿಗೆ ಆಲ್‌ಔಟ್ ಆಯಿತು. ಈ ಮೂಲಕ ಐರ್ಲೆಂಡ್ 34 ರನ್‌ಗಳ ಜಯ ದಾಖಲಿಸಿ ಇತಿಹಾಸ ಬರೆಯಿತು.

ಐರ್ಲೆಂಡ್ ನೀಡಿದ ಸವಾಲಿನ ಗುರಿ ಬೆನ್ನಟ್ಟಲು ಮುಂದಾದ ಭಾರತದ ಪರ ಅಭಿಷೇಕ್ ಶರ್ಮಾ 49 ಹಾಗೂ ಶಿವಮ್ ದುಬೆ 25 ರನ್ ಬಾರಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟ್ಸ್‌ಮನ್ ಸಹ ಇಪ್ಪತ್ತು ರನ್ ಗಡಿ ದಾಟಲೇ ಇಲ್ಲ. ಬೌಲಿಂಗ್‌ನಲ್ಲಿ ಪರವಾಗಿಲ್ಲ ಎಂಬ ಪ್ರದರ್ಶನವನ್ನು ನೀಡಿದ ಭಾರತಕ್ಕೆ ಬ್ಯಾಟಿಂಗ್ ವಿಭಾಗ ಕೈಕೊಟ್ಟಿದ್ದೇ ಸೋಲಿಗೆ ಪ್ರಮುಖ ಕಾರಣ ಎನ್ನಬಹುದು.

ಸಂಜು ಸ್ಯಾಮ್ಸನ್ 5, ಇಶಾನ್ ಕಿಶನ್ 1, ನಾಯಕ ಶ್ರೇಯಸ್ ಐಯ್ಯರ್ 3, ತಿಲಕ್ ವರ್ಮಾ 19, ವಾಷಿಂಗ್ಟನ್ ಸುಂದರ್ 9, ಅಕ್ಸರ್ ಪಟೇಲ್ 15, ಹರ್ಷಿತ್ ರಾಣಾ 8 ರನ್ ಗಳಿಸಿ ವಿಫಲರಾದದ್ದು ತಂಡವನ್ನು ಸೋಲಿನತ್ತ ಕೊಂಡೊಯ್ಯಿತು.

ಹೀಗೆ ಬ್ಯಾಟಿಂಗ್ ವಿಭಾಗದ ಹೀನಾಯ ಪ್ರದರ್ಶನದಿಂದ ತಂಡ ಸೋತಿದ್ದು, ಪಂದ್ಯದ ಬಳಿಕ ಮಾತನಾಡಿದ ನಾಯಕ ಶ್ರೇಯಸ್ ಐಯ್ಯರ್ ಎಲ್ಲಿಯೂ ಬ್ಯಾಟಿಂಗ್ ವಿಭಾಗದ ವೈಫಲ್ಯದ ಬಗ್ಗೆ ಮಾತನಾಡಲೇ ಇಲ್ಲ. ತಮ್ಮ ತಂಡದ ಬೌಲರ್‌ಗಳು ಆರಂಭದಲ್ಲಿ ಚೆನ್ನಾಗಿ ವಿಕೆಟ್ ಪಡೆದರು, ಬಳಿಕ ಎದುರಾಳಿ ಬ್ಯಾಟ್ಸ್‌ಮನ್‌ಗಳು ದೊಡ್ಡ ಹೊಡೆತಗಳನ್ನು ಬಾರಿಸಿದರು, ಬೌಂಡರಿ ಚಿಕ್ಕದಾಗಿತ್ತು ಎಂದೆಲ್ಲ ಹೇಳಿಕೆ ನೀಡಿದ ಐಯ್ಯರ್ ಕೊನೆಯಲ್ಲಿ ಮತ್ತೆ ಬೌಲರ್‌ಗಳು ಪುಟಿದೆದ್ದರು ಎಂದರು. ಹೀಗೆ ಬೌಲಿಂಗ್ ವಿಭಾಗದ ಬಗ್ಗೆ ಮಾತನಾಡಿದ ಶ್ರೇಯಸ್ ಬ್ಯಾಟಿಂಗ್ ಬಗ್ಗೆ ಒಂದು ಪದವನ್ನೂ ಮಾತನಾಡಲಿಲ್ಲ. ಅಲ್ಲದೇ ಆಗಿದ್ದನ್ನು ಮರೆತು ಮುಂದಿನ ಪಂದ್ಯಕ್ಕೆ ಸಿದ್ಧರಾಗಬೇಕು ಎಂದ ಐಯ್ಯರ್ ಉತ್ತಮ ಬೌಲಿಂಗ್ ಮಾಡಿದ ಹರ್ಷಿತ್ ರಾಣಾ ಹಾಗೂ ಶಿವಮ್ ದುಬೆಯನ್ನು ಹೊಗಳಿದರು. ಗಾಯದ ಸಮಸ್ಯೆಯಿಂದ ಹೊರಬಿದ್ದ ರಾಣಾ ಸಂದೇಶ ರವಾನಿಸಿದ್ದಾರೆ ಎಂದ ಶ್ರೇಯಸ್ ತಾನು ಶಿವಮ್ ದುಬೆಯನ್ನು ಯಾವಾಗಲೂ ಬೆಂಬಲಿಸುತ್ತೇನೆ, ಆತನ ಆಟವನ್ನು ಸ್ಥಳೀಯ ಕ್ರಿಕೆಟ್‌ನಲ್ಲೂ ಕಂಡಿದ್ದೇನೆ ಎಂದರು.

ಹೀಗೆ ಇಷ್ಟೆಲ್ಲ ಮಾತನಾಡಿದ ನಾಯಕ ಶ್ರೇಯಸ್ ಐಯ್ಯರ್ ಬ್ಯಾಟಿಂಗ್ ವಿಭಾಗದ ಕುರಿತು ತುಟಿಬಿಚ್ಚಲಿಲ್ಲ. ತಾನೇ ಕೇವಲ 3 ರನ್ ಗಳಿಸಿ ವಿಫಲನಾದ ಕಾರಣಕ್ಕೆ ಬ್ಯಾಟಿಂಗ್ ಬಗ್ಗೆ ಮಾತನಾಡದೇ ಸುಮ್ಮನಾದ್ರಾ ಎಂಬ ಪ್ರಶ್ನೆಯೂ ಸಹ ಕ್ರಿಕೆಟ್ ಪ್ರೇಕ್ಷಕರಲ್ಲಿ ಮೂಡಿದ್ದು, ಐಯ್ಯರ್ ಸೋತಾಗ ಸೋಲಿಗೆ ಕಾರಣವಾದ ಅಂಶದ ಬಗ್ಗೆ ಸರಿಯಾಗಿ ಮಾತನಾಡಬೇಕಾದ್ದನ್ನು ಕಲಿಯಬೇಕಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ