LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತಕ್ಕೆ ಭಾರೀ ಮುಖಭಂಗ: ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ಸೋಲಿಸಿ ದಾಖಲೆ ಬರೆದ ಐರ್ಲೆಂಡ್!

ಸದ್ಯ ಟೀಮ್ ಇಂಡಿಯಾ ಐರ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಎರಡು ಟಿ ಟ್ವೆಂಟಿ ಪಂದ್ಯಗಳನ್ನು ಆಡುತ್ತಿದೆ. ನಿನ್ನೆ ( ಜೂನ್ 26 ) ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಐರ್ಲೆಂಡ್ ಭಾರತವನ್ನು ಮಣಿಸಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಪಂದ್ಯವನ್ನು ಗೆದ್ದ ಐತಿಹಾಸಿಕ ದಾಖಲೆ ಬರೆದಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆರಿಸಿಕೊಂಡು ಐರ್ಲೆಂಡ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಐರ್ಲೆಂಡ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182 ರನ್ ದಾಖಲಿಸುವ ಮೂಲಕ ಭಾರತಕ್ಕೆ 183 ರನ್‌ಗಳ ಗುರಿಯನ್ನು ನೀಡಿತು. ಆದರೆ ಭಾರತ 18.5 ಓವರ್‌ಗಳಲ್ಲಿ 148 ರನ್‌ಗಳಿಗೆ ಆಲ್‌ಔಟ್ ಆಯಿತು. ಈ ಮೂಲಕ ಐರ್ಲೆಂಡ್ 34 ರನ್‌ಗಳ ಜಯ ದಾಖಲಿಸಿ ಇತಿಹಾಸ ಬರೆಯಿತು.

ಐರ್ಲೆಂಡ್ ಇನ್ನಿಂಗ್ಸ್: ತಂಡ ಉತ್ತಮ ಆರಂಭವನ್ನೇನೂ ಪಡೆದುಕೊಳ್ಳಲಿಲ್ಲ. ಕೇವಲ 30 ರನ್‌ಗೆ 3 ವಿಕೆಟ್ ಕಳೆದುಕೊಂಡಿತು. ರಾಸ್ ಅಡೈರ್ 12 ರನ್ ಗಳಿಸಿದರೆ, ಟಿಮ್ ಟೆಕ್ಟರ್ 17 ರನ್ ಗಳಿಸಿದರು ಹಾಗೂ ಹ್ಯಾರಿ ಟೆಕ್ಟರ್ ಡಕ್‌ಔಟ್ ಆದರು. ಬಳಿಕ ನಾಯಕ ಲಾರ್ಕನ್ ಟಕ್ಕರ್ 50 ಹಾಗೂ ಗೆರೆತ್ ಡಿಲಾನಿ 49 ರನ್ ಗಳಿಸಿ ತಂಡ ಉತ್ತಮ ರನ್ ಗಳಿಸುವಲ್ಲಿ ನೆರವಾದರು. ಇನ್ನುಳಿದಂತೆ ಬೆಂಜಮಿನ್ ಕಾಲಿಟ್ಜ್ ಜಾರ್ಜ್ ಡಾಕ್ರೆಲ್ 19, ಲಿಯಾಮ್ ಮೆಗ್ರಾಥಿ 7, ಮ್ಯಾಥ್ಯೂ ಹಂಫ್ರೈಸ್ 2 ಹಾಗೂ ಜೈ ಮೂಂದ್ರ ಅಜೇಯ 2 ರನ್ ಗಳಿಸಿದರು.

ಹರ್ಷಿತ್ ರಾಣಾ ಮೂರು ವಿಕೆಟ್ ಪಡೆದರೆ, ಅಕ್ಸರ್ ಪಟೇಲ್ ಎರಡು ವಿಕೆಟ್, ಅರ್ಷ್‌ದೀಪ್ ಸಿಂಗ್ ಎರಡು ವಿಕೆಟ್ ಹಾಗೂ ಶಿವಮ್ ದುಬೆ ಒಂದು ವಿಕೆಟ್ ಪಡೆದರು.

ಭಾರತದ ಇನ್ನಿಂಗ್ಸ್: ಐರ್ಲೆಂಡ್‌ ಬೌಲಿಂಗ್ ದಾಳಿಗೆ ನಲುಗಿದ ಭಾರತದ ಪರ ಅಭಿಷೇಕ್ ಶರ್ಮಾ ಹಾಗೂ ಶಿವಮ್ ದುಬೆ ಹೊರತುಪಡಿಸಿ ಉಳಿದ ಯಾವ ಆಟಗಾರನೂ ಸಹ 20ರ ಗಡಿ ದಾಟಲಿಲ್ಲ. ಅಭಿಷೇಕ್ ಶರ್ಮಾ 49 ರನ್ ಗಳಿಸಿದರೆ, ಸಂಜು ಸ್ಯಾಮ್ಸನ್ 5, ಇಶಾನ್ ಕಿಶನ್ 1, ನಾಯಕ ಶ್ರೇಯಸ್ ಐಯ್ಯರ್ 3, ತಿಲಕ್ ವರ್ಮಾ 19, ವಾಷಿಂಗ್ಟನ್ ಸುಂದರ್ 9, ಶಿವಮ್ ದುಬೆ 25, ಅಕ್ಸರ್ ಪಟೇಲ್ 15, ಹರ್ಷಿತ್ ರಾಣಾ 8, ಅರ್ಷ್‌ದೀಪ್ ಸಿಂಗ್ 2 ಹಾಗೂ ಪ್ರಸಿದ್ಧ್ ಕೃಷ್ಣ ಅಜೇಯ 1 ರನ್ ಗಳಿಸಿದರು.

ಐರ್ಲೆಂಡ್ ಪರ ಮ್ಯಾಥ್ಯೂ ಹಂಫ್ರೇಯ್ಸ್ ಹಾಗೂ ಮ್ಯಾಥ್ಯೂ ಹಾಲರ್ಡ್ ತಲಾ ಮೂರು ವಿಕೆಟ್ ಪಡೆದರೆ, ಜೈ ಮೂಂದ್ರಾ ಎರಡು ವಿಕೆಟ್, ಲಿಯಾಮ್ ಮೆಗ್ರಾಥಿ ಹಾಗೂ ಗಾರೆಥ್ ಡಿಲಾನ್ ತಲಾ ಒಂದೊಂದು ವಿಕೆಟ್ ಪಡೆದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ವಿಪಕ್ಷದವರ ಹತಾಶೆಯ ಪರಮಾವಧಿ: ಸಿಎಂ ಡಿ.ಕೆ. ಶಿವಕುಮಾರ್BREAKING: ರಾಸ್ ತನುರಾ ಬಳಿ ಸೌದಿ ಅರೇಬಿಯಾದ ಇಂಧನ ದೈತ್ಯ ‘ಸೌದಿ ಅರಾಮ್ಕೊ’ ಹೆಲಿಕಾಪ್ಟರ್ ಪತನ: 14 ಮಂದಿ ಸಾವುBREAKING NEWS: ಫ್ರಾನ್ಸ್ ನಲ್ಲಿ ನಾಗರಿಕ ವಿಮಾನ ಪತನ: 11 ಜನ ಸಾವು‘ಮಿಷನ್ ಇಂದ್ರಧನುಷ್’ ಯೋಜನೆಯಡಿ 7 ಪ್ರಮುಖ ರೋಗಗಳ ವಿರುದ್ಧದ ಲಸಿಕೆಗಳನ್ನು ಕಾಲಕಾಲಕ್ಕೆ ಮಕ್ಕಳಿಗೆ ಹಾಕಿಸಿನನ್ನ ಹೋರಾಟ ಡಿ.ಕೆ.ಶಿವಕುಮಾರ್​ ವಿರುದ್ಧ ಅಲ್ಲ; ರೈತರ ನಡುವೆ ಬಂದು ಚರ್ಚೆ ಮಾಡುವುದಕ್ಕೆ ನಾನು ಈಗಲೂ ಸಿದ್ಧ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಲೋಕೋಪಯೋಗಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಬರೋಬ್ಬರಿ 3.48 ಕೋಟಿ ರೂಪಾಯಿ ಗುಳುಂ ಆರೋಪ; ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ಲೂಟಿಖಾಸಗಿ ಅಂಗಗಳಲ್ಲಿ MDMA ಅಡಗಿಸಿಟ್ಟಿದ್ದ ಮಹಿಳೆ ಸೇರಿ ಮಾದಕ ದ್ರವ್ಯ ಸಾಗಿಸುತ್ತಿದ್ದ 7 ಮಂದಿ ಅರೆಸ್ಟ್ಆರ್.ಎಸ್.ಎಸ್ ನವರು ಯಾರ ಬಳಿಯೂ ಕೈಚಾಚುವುದು ಬೇಡ: ಶುಲ್ಕ ಬೇಕಿದ್ದರೆ ನಾನೇ ಕಟ್ಟುತ್ತೇನೆ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ300 ಕೋಟಿ ರೂ. ವೆಚ್ಚದಲ್ಲಿ 7 ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಅಸ್ತು: ಸಂಸದ ಬಿ.ವೈ.ರಾಘವೇಂದ್ರ