LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯಲ್ಲಿ ಸ್ವಪಕ್ಷದ ನಾಯಕರ ನಡುವೆಯೇ ಗುದ್ದಾಟ: ಯಲಹಂಕ ಕ್ಷೇತ್ರದಲ್ಲಿ ಸ್ಪರ್ಧಿಸುವ ಧೈರ್ಯವಿದ್ದರೆ ಸುಧಾಕರ್ ನನ್ನ ವಿರುದ್ಧವೇ ಕಣಕ್ಕಿಳಿಯಲಿ: ಎಸ್.​​​ಆರ್ ವಿಶ್ವನಾಥ್ ಸವಾಲು

ಚಿಕ್ಕಬಳ್ಳಾಪುರ: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ, ಭಿನ್ನಮತ ದಿನದಿಂದ ದಿಅಕ್ಕೆ ಹೆಚ್ಚುತ್ತಿದೆ. ಚಿಕ್ಕಬಳ್ಳಾಪುರ ಸಂಸದ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್.​​ಆರ್. ವಿಶ್ವನಾಥ್ ನಡುವಿನ ಸಂಘರ್ಷ ತಾರಕಕ್ಕೇರಿದೆ.

2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆರಂಭವಾಗಿದ್ದ ಇಬ್ಬರ ನಡುವಿನ ಮುಸುಕಿನ ಗುದ್ದಾಟ ಇದೀಗ ಬಹಿರಂಗ ಕಾದಾಟವಾಗಿ ಮಾರ್ಪಟ್ಟಿದೆ. ಒಂದೆ ಪಕ್ಷದ ಇಬ್ಬರು ನಾಯಕರು ಪರಸ್ಪರ ಸವಾಲುಗಳನ್ನು ಹಾಕಿ ಯುದ್ಧಕ್ಕೆ ಇಳಿದಿದ್ದಾರೆ.

ಶಾಸಕ ಎಸ್.​​ಆರ ವಿಶ್ವನಾಥ್ ಅವರು ಚಿಕ್ಕಬಳ್ಳಾಪುರಕ್ಕೆ ತೆರಳಿ ಸ್ವಪಕ್ಷದ ಸಂಸದ ಸುಧಾಕರ್ ವಿರುದ್ಧ ನೇರ ನೇರವಾಗಿ ಏಕವಚನದಲ್ಲಿ ವಾಗ್ದಾಳಿ ನಡೆಸಿ ಸವಾಲು ಹಾಕಿದ್ದಾರೆ. ಯಲಹಂಕ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದರೂ ಪದೇ ಪದೇ ನನ್ನ ಕ್ಷೇತ್ರದಲ್ಲಿ ರಾಜಕೀಯ ಮಾಡಲು ಬಂದರೆ ನಿನ್ನ ಬುಡಕ್ಕೆ ಕೈ ಹಾಕಿತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸುಧಾಕರ್ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸುವುದು ಹಾಗೂ ನನ್ನ ಬೆಂಬಲಿಗರನ್ನು ನನ್ನ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾನು ಪಕ್ಷವಿರೋಧಿ ಕೆಲಸ ಮಾಡಿಲ್ಲ. ಆದ್ರೂ ನಿನಗೆ ಅನುಮಾನ ಇದ್ರೆ ಆರೋಪ ಸತ್ಯವಾಗಿದ್ದರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ ಗೆ ಬನ್ನಿ ಪ್ರಮಾಣ ಮಾಡಲು ಸಿದ್ಧ ಎಂದಿದ್ದಾರೆ.

ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಪಕ್ಷದ ಅಭ್ಯರ್ಥಿ ಯಾರೇ ಆಗಿದ್ದರೂ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಲಹಂಕ ಕ್ಷೇತ್ರದಲ್ಲಿ ಸ್ಪರ್ಧಿಸುವ ಧೈರ್ಯವಿದ್ದರೆ ಸುಧಾಕರ್ ನೇರವಾಗಿ ನನ್ನ ವಿರುದ್ಧವೇ ಕಣಕ್ಕಿಳಿಯಲಿ ಎಂದು ಸವಾಲು ಹಾಕಿದ್ದಾರೆ.

ಸುಧಾಕರ್ ಅವರು ಲೋಕಸಭೆ ಬಿಟ್ಟು ವಿಧಾನಸಭೆ ಚುನಾವಣೆಯತ್ತ ಗಮನ ಹರಿಸುತ್ತಿದ್ದಾರೆ. ಬಿಜೆಪಿಯಿಂದ ನಿನಗೆ ಟಿಕೆಟ್ ಕೊಡಲ್ಲ, ಬೇರೆ ಪಕ್ಷದಿಂದ ಸ್ಪರ್ಧೆ ಮಾಡು. ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಸಂದೀಪ್ ರೆಡ್ಡಿಗೆ ನೀಡಬೇಕು ಎಂದು ಹೈಕಮಾಂಡ್‌ಗೆ ಮನವಿ ಮಾಡುತ್ತೇವೆ ಎಂದು ವಿಶ್ವನಾಥ್ ಹೇಳಿದ್ದಾರೆ.

ನಾನು ನೇರಾ ನೇರ ವ್ಯಕ್ತಿ, ಹೇಳಿದ್ದನ್ನು ಮಾಡುತ್ತೇನೆ. ಆದ್ರೆ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಡಿಫರೆಂಟ್ ವ್ಯಕ್ತಿ. ಅವರು ರಾಜಕೀಯ ಶೈಲಿ ಸಂಪೂರ್ಣ ವಿಭಿನ್ನ. ಸುಧಾಕರ್ ಪ್ರತಿಭೆ ಕಂಡು ಹಿಡಿಯಲು ಸತ್ಯಶೋಧನಾ ಸಮಿತಿ ಮಾಡಬೇಕಾಗುತ್ತೆ ಎಂದು ವ್ಯಂಗ್ಯವಾಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ