LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ಡ ಮತದಾನ ಪ್ರಕರಣ: ಸಿ.ಟಿ.ರವಿ ನೇತೃತ್ವದ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ವರದಿ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣಕ್ಕೆ ಸಂಬಮ್ಧಿಸಿದಂತೆ ಬಿಜೆಪಿ ರಚಿಸಿದ್ದ ಸಿ.ಟಿ.ರವಿ ನೇತೃತ್ವದ ಸತ್ಯಶೋಧನಾ ಸಮಿತಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ.

ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಎನ್ ಮಹೇಶ್ ನೇತೃತ್ವದ ತ್ರಿಸದಸ್ಯ ಸಮಿತಿಯು ಅಡ್ಡ ಮತದಾನದ ಬಗ್ಗೆ ಆಂತರಿಕ ಸತ್ಯಶೋಧನೆ ನಡೆಸಿ, ಸಾಂದರ್ಭಿಕ ಸಾಕ್ಷಿ, ಶಂಕೆ, ಮೂಲಗಳಿಂದ ಸಂಗ್ರಹಿಸಿದ ಮಾಹಿತಿ ಹಾಗೂ ಅನುಮಾನ ಇದ್ದ ಶಾಸಕರಿಂದ ಪಡೆದ ಮಾಹಿತಿ ಆಧರಿಸಿ ವರದಿ ಸಿದ್ಧಪಡಿಸಿದ್ದಾರೆ. ಈ ಮಧ್ಯಂತರ ವರದಿಯನ್ನು ಬಿಜೆಪಿ ಕಚೇರಿಯಲ್ಲಿ ಸಲ್ಲಿಕೆ ಮಾಡಿದ್ದು, ಬಳಿಕ ಬಿ.ವೈ.ವಿಜಯೇಂದ್ರ ಹಾಗೂ ಸಿ.ಟಿ ರವಿ ಇಬ್ಬರೂ ಪ್ರತ್ಯೇಕವಾಗಿ ಚರ್ಚೆ ನಡೆಸಿದರು.

ನಾಲ್ಕು ದಿನಗಳ ಕಾಲ ಆಂತರಿಕ ತನಿಖೆ ನಡೆಸಿದ ಸಮಿತಿಯು ಒಟ್ಟು ಮೂರು ಪುಟಗಳ ವರದಿಯನ್ನು ಸೀಲ್ಡ್ ಕವರ್‌ನಲ್ಲಿ ಸಲ್ಲಿಕೆ ಮಾಡಿದೆ. ಮೈತ್ರಿ ಪಕ್ಷಗಳಿಂದ ಒಟ್ಟು 12 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಈ ಪೈಕಿ 1 ಅಸಿಂಧು ಮತ. ಬಿಜೆಪಿಯಿಂದ 1 ಅಸಿಂಧು ಮತ ಸೇರಿ ಒಟ್ಟು 4 ಅಡ್ಡಮತದಾನ ಆಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದರ ಹೊರತಾಗಿ ಉಳಿದ ಅಡ್ಡ ಮತಗಳು ಜೆಡಿಎಸ್‌ನಿಂದಾಗಿವೆ. ವರದಿಯಲ್ಲಿ ಅಡ್ಡ ಮತ ಚಲಾಯಿಸಿದ ಶಾಸಕರ ಹೆಸರು ಉಲ್ಲೇಖಿಸಿಲ್ಲ ಎನ್ನಲಾಗಿದ್ದು, ಅಡ್ಡ ಮತಗಳ ಸಂಖ್ಯೆ ಮಾತ್ರ ಉಲ್ಲೇಖಿಸಿದ್ದಾರೆ. ಸದ್ಯಕ್ಕೆ ಅನುಮಾನ ಇರುವ ಶಾಸಕರ ಮೇಲೆ ತೀವ್ರ ನಿಗಾ ಇಡುವಂತೆ ಸಮಿತಿ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ