LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆಗಿಳಿದ ಕಿಚ್ಚ ಸುದೀಪ್‌ರ ವಿಮಾನದಂತ ಐಷಾರಾಮಿ ಕ್ಯಾರವನ್ ಇದರ ಬೆಲೆ, ವಿಶೇಷತೆ ಕೇಳಿದ್ರೆ ಶಾಕ್ ಆಗ್ತೀರಾ

ಬೆಂಗಳೂರು: ಸ್ಯಾಂಡಲ್‌ವುಡ್ ಬಾದ್‌ಷಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅವರಿಗೆ ವಾಹನಗಳ ಬಗ್ಗೆ ಇರುವ ಕ್ರೇಜ್ ಎಲ್ಲರಿಗೂ ಗೊತ್ತಿರೋದೇ. ಆದರೆ ಈಗ ಅವರ ಗ್ಯಾರೇಜ್ ಸೇರಿರುವ ಹೊಸ ವಾಹನ ಇಡೀ ಚಿತ್ರರಂಗವೇ ಹುಬ್ಬೇರಿಸುವಂತೆ ಮಾಡಿದೆ ನಟ ಸುದೀಪ್ ಅವರಿಗಾಗಿ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಹಾಗೂ ಐಷಾರಾಮಿ ಕ್ಯಾರವನ್ (Caravan) ಒಂದು ಸಿದ್ಧವಾಗಿ ಬಂದಿದ್ದು, ಸದ್ಯ ಸ್ಯಾಂಡಲ್‌ವುಡ್‌ನಲ್ಲೇ ಅತ್ಯಂತ ದುಬಾರಿ ಬೆಲೆಯ ಕ್ಯಾರವನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ

ಬರೋಬ್ಬರಿ ₹6.5 ಕೋಟಿ ಏನಿದರ ವಿಶೇಷತೆ?

ಮಹಾರಾಷ್ಟ್ರದ ಪುಣೆಯಲ್ಲಿ ರೆಡಿಯಾಗಿರುವ ಈ ಹೈ-ಫೈ ಕ್ಯಾರವನ್‌ನ ಒಟ್ಟು ಬೆಲೆ ಬರೋಬ್ಬರಿ ಸುಮಾರು 6.5 ಕೋಟಿ ರೂಪಾಯಿ ಭಾರತದ ಖ್ಯಾತ ಕಾರ್ ಡಿಸೈನರ್ ದಿಲೀಪ್ ಛಾಬ್ರಿಯಾ ಅವರ ಮಾಲೀಕತ್ವದ ‘DC2’ ಸಂಸ್ಥೆಯು ಸುದೀಪ್ ಅವರ ಇಷ್ಟಕ್ಕೆ ತಕ್ಕಂತೆ ಇದನ್ನು ಕಸ್ಟಮೈಸ್ ಮಾಡಿಕೊಟ್ಟಿದೆ. ಇದು ಬರೀ ಕ್ಯಾರವನ್ ಅಲ್ಲ, ಒಳಗಡೆ ಜಿಮ್ ಸೌಲಭ್ಯವನ್ನೂ ಒಳಗೊಂಡಿರುವ ಜಿಮ್ ಮಾಡ್ಯುಲರ್ ಕ್ಯಾರವನ್ ಆಗಿದೆ.

ಖಡಕ್ ಸಿಂಬಲ್: ಈ ಐಷಾರಾಮಿ ಕ್ಯಾರವನ್‌ನ ಮತ್ತೊಂದು ಹೈಲೈಟ್ ಅಂದರೆ, ಇದರ ಮುಂಭಾಗದಲ್ಲಿ ಕಿಚ್ಚ ಸುದೀಪ್ ಅವರ ಹೆಸರನ್ನು ಸೂಚಿಸುವ ‘K’ (ಕಿಚ್ಚ) ಎಂಬ ವಿಶೇಷ ಸಿಂಬಲ್ ಅನ್ನು ಡಿಸೈನ್ ಮಾಡಲಾಗಿದೆ. ಸುದೀಪ್ ಅವರು ತಮ್ಮ ಕಾರುಗಳ ಮೇಲೂ ಇದೇ ರೀತಿಯ ಲೋಗೋ ಹೊಂದಿದ್ದು, ಈಗ ಕ್ಯಾರವನ್ ಮೇಲೂ ಅದೇ ‘K’ ಬ್ರ್ಯಾಂಡ್ ರಾರಾಜಿಸುತ್ತಿದೆ.

ಬಿಲ್ಲ ರಂಗ ಬಾಷಾ’ ಶೂಟಿಂಗ್ ಅಡ್ಡಾಗೆ ಬಂತು ಕಾಸ್ಟ್ಲಿ ವಾಹನ

ಸುದೀಪ್ ಅಭಿಮಾನಿಗಳು ಬಹುಕಾಲದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಬಿಲ್ಲ ರಂಗ ಬಾಷಾ ಸಿನಿಮಾದ ಶೂಟಿಂಗ್ ಜೂನ್ 26ರಿಂದ ಭರ್ಜರಿಯಾಗಿ ಕಿಕ್ ಸ್ಟಾರ್ಟ್ ಆಗಿದೆ. ಸುಮಾರು ಒಂದು ವರ್ಷದ ದೀರ್ಘ ಬಿಡುವಿನ ಬಳಿಕ ಈ ಪ್ಯಾನ್ ಇಂಡಿಯಾ ಚಿತ್ರದ ಎರಡನೇ ಹಂತದ ಚಿತ್ರೀಕರಣ ಆರಂಭಗೊಂಡಿದೆ.

ಬೆಂಗಳೂರು ಜಿಲ್ಲೆಯ ಕನಕಪುರದ ಬಳಿ ಬೃಹತ್ ಆದ ಸೆಟ್ ಒಂದನ್ನು ನಿರ್ಮಿಸಲಾಗಿದ್ದು, ಅಲ್ಲಿ ಈ ಸಿನಿಮಾದ ಪ್ರಮುಖ ಆ್ಯಕ್ಷನ್ ಹಾಗೂ ಪ್ರಮುಖ ದೃಶ್ಯಗಳನ್ನು ಶೂಟ್ ಮಾಡಲಾಗುತ್ತಿದೆ. ಇದೇ ಶೂಟಿಂಗ್ ಅಡ್ಡಾಗೆ ಸುದೀಪ್ ಅವರ ಈ ₹6.5 ಕೋಟಿಯ ಹೊಸ ಕ್ಯಾರವನ್ ಭರ್ಜರಿಯಾಗಿ ಎಂಟ್ರಿ ಕೊಟ್ಟಿದೆ. ಸೆಟ್‌ನಲ್ಲಿ ನಿಂತಿರುವ ಈ ರಾಜಗಾಂಭೀರ್ಯದ ವಾಹನದ ಲುಕ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಗಾಂಧಿನಗರದ ಅಂಗಳದಲ್ಲಿ ಭಾರಿ ಸೌಂಡ್ ಮಾಡುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ