ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು ಕಳೆದ ಕೆಲವು ತಿಂಗಳುಗಳಿಂದ ತಮ್ಮ ಬಹುನಿರೀಕ್ಷಿತ ‘ವಾರಾಣಸಿ’ ಚಿತ್ರದ ಶೂಟಿಂಗ್ನಲ್ಲಿ ಸಖತ್ ಬ್ಯುಸಿಯಾಗಿದ್ದರು. ಅತ್ಯಂತ ದೂಡ್ಡ ಬಜೆಟ್ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಪ್ರೊಡಕ್ಷನ್ ಕೆಲಸಗಳಿಗೆ ಸದ್ಯ ಸಣ್ಣ ವಿರಾಮ ಸಿಕ್ಕಿದ್ದು, ನಟ ತಮ್ಮ ಇಡೀ ಕುಟುಂಬದೊಂದಿಗೆ ಕಿರು ಪ್ರವಾಸಕ್ಕೆ ತೆರಳಿದ್ದಾರೆ.
ಮಹೇಶ್ ಬಾಬು ಅವರು ಪತ್ನಿ ನಮ್ರತಾ ಮತ್ತು ಮಕ್ಕಳಾದ ಗೌತಮ್ ಹಾಗೂ ಸಿತಾರಾ ಅವರೊಂದಿಗೆ ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಕುಟುಂಬ ಏರ್ಪೋರ್ಟ್ನಲ್ಲಿ ಒಟ್ಟಿಗೆ ನಡೆದು ಹೋಗುತ್ತಿರುವ ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಆದರೆ, ಈ ಸ್ಟಾರ್ ಫ್ಯಾಮಿಲಿ ವೆಕೇಷನ್ಗಾಗಿ ಯಾವ ದೇಶಕ್ಕೆ ಅಥವಾ ಜಾಗಕ್ಕೆ ತೆರಳಿದೆ ಎಂಬ ಮಾಹಿತಿ ಮಾತ್ರ ಸದ್ಯಕ್ಕೆ ಗೌಪ್ಯವಾಗಿದೆ.
ಚಿತ್ರೀಕರಣದಿಂದ ಅಲ್ಪ ದಿನಗಳ ಕಾಲ ಬಿಡುವು ಪಡೆದಿರುವ ಮಹೇಶ್ ಬಾಬು ಅವರು ಜುಲೈ ೧ ರೊಳಗೆ ಹೈದರಾಬಾದ್ಗೆ ಮರಳಲಿದ್ದಾರೆ. ಅಲ್ಲದೆ ಜುಲೈ ೨ ರಂದು ನಡೆಯಲಿರುವ ರಾವ್ ಬಹದ್ದೂರ್ ಕಾರ್ಯಕ್ರಮದಲ್ಲೂ ಅವರು ಭಾಗವಹಿಸುವ ಸಾಧ್ಯತೆಯಿದೆ.
ಚಿತ್ರರಂಗದ ದೈತ್ಯ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ವಾರಾಣಸಿ’ ಚಿತ್ರದ ಮೇಲೆ ಈಗಾಗಲೇ ಭಾರತೀಯ ಸಿನಿಪ್ರೇಮಿಗಳಲ್ಲಿ ಭಾರೀ ನಿರೀಕ್ಷೆ ಸೃಷ್ಟಿಯಾಗಿದೆ. ಈ ಚಿತ್ರದಲ್ಲಿ ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್ ಮತ್ತು ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ದುರ್ಗಾ ಆರ್ಟ್ಸ್ ಮತ್ತು ಶೋಯಿಂಗ್ ಬ್ಯುಸಿನೆಸ್ ಸಂಸ್ಥೆಗಳು ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಎಂ.ಎಂ. ಕೀರವಾಣಿ ಸಂಗೀತ ನೀಡುತ್ತಿದ್ದಾರೆ. ಈ ಬಿಗ್ ಬಜೆಟ್ ಚಿತ್ರವನ್ನು ೨೦೨೭ ರ ಏಪ್ರಿಲ್ ೭ ರಂದು ಪ್ರಪಂಚದಾದ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.