LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡ್ರಗ್ಸ್ ಪ್ರಕರಣ: ರಾಜಧಾನಿ ಬೆಂಗಳೂರಿಗೆ ಮೊದಲ ಸ್ಥಾನ; ಎರಡು ಮತ್ತು ಮೂರನೇ ಸ್ಥಾನದಲ್ಲಿ ಮಂಗಳೂರು ಹಾಗೂ ಶಿವಮೊಗ್ಗ

ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ-ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಡ್ರಗ್ಸ್ ದಂಧಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಆದರೆ ಆದರೆ ನಶೆ ಲೋಕದ ಕಬಂದಬಾಹು ಜಿಲ್ಲೆ ಜಿಲ್ಲೆಗಳಿಗೂ ವ್ಯಾಪಿಸಿದೆ.

ಕಳೆದ ಐದು ತಿಂಗಳಲ್ಲಿ ಪೊಲೀಸರು ನಡೆಸಿರುವ ಡ್ರಗ್ಸ್ ಕಾರ್ಯಾಚಾರಣೆ ಅಂಕಿ-ಅಂಶಗಳ ಪ್ರಕಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಮಾದಕವಸ್ತುಗಳು ಪತ್ತೆ ಹಾಗೂ ಕಾರ್ಯಾಚರಣೆ ನಡೆದಿದ್ದು ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಕಡಲ ನಗರಿ ಮಂಗಳೂರು ಎರಡನೇ ಸ್ಥಾನದಲ್ಲಿ ಹಾಗೂ ಶಿವಮೊಗ್ಗ ಮೂರನೇ ಸ್ಥಾನದಲ್ಲಿದೆ.

​2026ರ ಜನವರಿಯಲ್ಲಿ ಅತಿ ಹೆಚ್ಚು ಮಾಅದಕ ವಸ್ತುಗಳ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರ 841 ಪ್ರಕರಣಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಮೈಸೂರು 93 ಮತ್ತು ಕರ್ನಾಟಕ ರೈಲ್ವೆ ಪೊಲೀಸ್ 63 ವ್ಯಾಪ್ತಿಯಲ್ಲಿ ಗಮನಾರ್ಹ ಪ್ರಕರಣಗಳು ದಾಖಲಾಗಿವೆ. ದಾವಣಗೆರೆಯಲ್ಲಿ 37 ಪ್ರಕರಣಗಳು ಪತ್ತೆಯಾಗಿವೆ.

​ಫೆಬ್ರುವರಿಯಲ್ಲಿ ಪ್ರಕರಣಗಳ ಸಂಖ್ಯೆ ಬೆಂಗಳೂರು ನಗರದಲ್ಲಿ 441 ಪ್ರಕರಣಗಳು ದಾಖಲಾಗಿವೆ. ಮಂಗಳೂರು 66 ಮತ್ತು ಶಿವಮೊಗ್ಗ 52 ನಂತರದ ಸ್ಥಾನದಲ್ಲಿವೆ.

ಮಾರ್ಚ್ ತಿಂಗಳಲ್ಲಿ ಬೆಂಗಳೂರು ನಗರದಲ್ಲಿ 344 ಪ್ರಕರಣಗಳು ದಾಖಲಾಗಿವೆ. ಶಿವಮೊಗ್ಗದಲ್ಲಿ ಬರೋಬ್ಬರಿ 128 ಪ್ರಕರಣಗಳು ದಾಖಲಾಗಿವೆ. ಮಂಗಳೂರಿನಲ್ಲಿ 58 ಪ್ರಕರಣಗಳು ವರದಿಯಾಗಿವೆ.

​ಏಪ್ರಿಲ್‌ನಲ್ಲಿ ಬೆಂಗಳೂರು ನಗರದಲ್ಲಿ 373 ಪ್ರಕರಣಗಳು ದಾಖಲಾಗಿವೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ 70 ಮತ್ತು ಶಿವಮೊಗ್ಗದಲ್ಲಿ 62 ಪ್ರಕರಣಗಳು ದಾಖಲಾಗಿವೆ.

ಮೇ ತಿಂಗಳಲ್ಲಿ ಬೆಂಗಳೂರು ನಗರ 352 ಕೇಸ್ ದಾಖಲು, ಮಂಗಳೂರು 89, ರಾಯಚೂರು 39 ಮತ್ತು ದಾವಣಗೆರೆ 29 ಪ್ರಕರಣಗಳು ದಾಖಲಾಗಿವೆ.
ಡ್ರಗ್ಸ್ ಪ್ರಕರಣದಲ್ಲಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ಐಟಿ ಹಬ್, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ಮತ್ತು ಸಪ್ಲೈ ನೆಟ್‌ವರ್ಕ್ ದೊಡ್ಡದಾಗಿರುವುದರಿಂದ ಐದೂ ತಿಂಗಳುಗಳಲ್ಲೂ ಬೆಂಗಳೂರೇ ಮೊದಲ ಸ್ಥಾನದಲ್ಲಿದೆ. ಒಟ್ಟು 2,351 ಪ್ರಕರಣಗಳು ದಾಖಲಾಗಿವೆ. ಮಂಗಳೂರು ಎರಡನೇ ಸ್ಥಾನದಕ್ಲಿದೆ. ಶಿವಮೊಗ್ಗ ಮೂರನೇ ಸ್ಥಾನದಲ್ಲಿದೆ.

ಜನವರಿಯಲ್ಲಿ ಒಟ್ಟು 1,397 ಪ್ರಕರಣಗಳಿದ್ದದ್ದು, ಮೇ ತಿಂಗಳ ವೇಳೆಗೆ 813ಕ್ಕೆ ಕುಸಿದಿದೆ. ಇದು ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕಾರ್ಯಾಚರಣೆಗೆ ಸಾಕ್ಷಿಯಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ