LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸದಾ ಬೌದ್ಧಿಕ, ವೈಚಾರಿಕ ಆಲೋಚನೆಗಳಿಗೆ ಮುನ್ನುಡಿ ಬರೆಯುತ್ತಿದ್ದ ಕ್ರಿಯಾಶೀಲ ವ್ಯಕ್ತಿ: ಎನ್.ಎಸ್. ಶಂಕರ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಲೇಖನಿಯ ಮೂಲಕ ಸಮಾಜದ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸುತ್ತಾ, ಸದಾ ಬೌದ್ಧಿಕ ಮತ್ತು ವೈಚಾರಿಕ ಆಲೋಚನೆಗಳಿಗೆ ಮುನ್ನುಡಿ ಬರೆಯುತ್ತಿದ್ದ ಕ್ರಿಯಾಶೀಲ ವ್ಯಕ್ತಿ ಎನ್. ಎಸ್. ಶಂಕರ್ ಅವರ ನಿಧನದ ಸುದ್ದಿ ತೀವ್ರ ಬೇಸರ ತಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪತ್ರಕರ್ತರಾಗಿ, ಸಿನಿಮಾ ನಿರ್ದೇಶಕರಾಗಿ, ಜನಪ್ರಿಯ ಅಂಕಣಕಾರರಾಗಿ ಗುರುತಿಸಿಕೊಂಡಿದ್ದ ಅವರು, ಕನ್ನಡ ದಲಿತ ಸಾಹಿತ್ಯ ಕ್ಷೇತ್ರಕ್ಕೆ ಹಲವು ಪ್ರಶಂಸನೀಯ ಕೃತಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಅವರ ಅಗಲಿಕೆ ಮಾಧ್ಯಮ ಕ್ಷೇತ್ರ ಹಾಗೂ ಸಾಹಿತ್ಯ ವಲಯಕ್ಕೆ ತುಂಬಲಾರದ ನಷ್ಟ. ಭಗವಂತನು ಮೃತರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ, ಅವರ ಕುಟುಂಬಸ್ಥರಿಗೆ ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಸಿದ್ಧರಾಮಯ್ಯ ಸಂತಾಪ

ಹಿರಿಯ ಪತ್ರಕರ್ತ ಮತ್ತು ಪ್ರತಿಭಾವಂತ ಚಿತ್ರ ನಿರ್ದೇಶಕ ಮತ್ತು ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದ ಎನ್‌.ಎಸ್.ಶಂಕರ್ ಅವರ ಸಾವಿನ ಸುದ್ದಿ ಕೇಳಿ ದು:ಖವಾಯಿತು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಪ್ರಜಾವಾಣಿ, ಮುಂಗಾರು, ಸುದ್ದಿಸಂಗಾತಿ ಮತ್ತು ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ಶಂಕರ್, ಹಲವು ಸಿನೆಮಾಗಳನ್ನು ನಿರ್ದೇಶನ ಮಾಡಿದ್ದರು. ಅವರೊಬ್ಬ ಕನ್ನಡದ ಬಹುಮುಖ ಪ್ರತಿಭೆ. ಇನ್ನಷ್ಟು ಕಾಲ ನಮ್ಮ ಜೊತೆ ಇದ್ದು, ನಮಗೆಲ್ಲ ಮಾರ್ಗದರ್ಶನ ನೀಡಬೇಕಾಗಿತ್ತು. ಅವರ ಕುಟುಂಬವರ್ಗಕ್ಕೆ ಸಂತಾಪಗಳು, ಅವರೆಲ್ಲರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ