LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಾಹಿತ ಪುತ್ರಿಯೂ ಅನುಕಂಪದ ನೌಕರಿಗೆ ಅರ್ಹ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ವಿವಾಹಿತ ಪುತ್ರಿ ಮೃತ ಸರ್ಕಾರಿ ನೌಕರನ ಮೇಲೆ ಅವಲಂಬಿತರಾಗಿದ್ದರೆ, ಅವರೊಂದಿಗೆ ವಾಸಿಸುತ್ತಿದ್ದರೆ ಅನುಕಂಪದ ಆಧಾರದಲ್ಲಿ ನೇಮಕಾತಿಗೆ ಅರ್ಹ ಎಂದು ಹೈಕೋರ್ಟ್ ಆದೇಶಿಸಿದೆ.

ಚಿತ್ರದುರ್ಗದ ಜೋಗಿಮಟ್ಟಿಯ ಆರ್. ಸವಿತಾ ಅವರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಜೆ. ಪಂಡಿತ್ ಮತ್ತು ಕೆ. ರಾಜೇಶ್ ಅವರನ್ನೊಳಗೊಂಡ ವಿಭಾಗೀಯಪೀಠ ಈ ಆದೇಶ ನೀಡಿದೆ.

ಕುಟುಂಬದ ವ್ಯಾಖ್ಯಾನದಲ್ಲಿ ವಿವಾಹಿತ ಹೆಣ್ಣು ಮಕ್ಕಳನ್ನು ಸೇರಿಸುವ ಕರ್ನಾಟಕ ನಾಗರೀಕ ಸೇವೆಗಳ ಅನುಕಂಪದ ಆಧಾರದ ಮೇಲೆ ನೇಮಕಾತಿ ನಿಯಮಗಳು 1996 ತಿದ್ದುಪಡಿಯು ಹಿಂದಿನಿಂದಲೂ ಜಾರಿಯಲ್ಲಿದೆ ಮತ್ತು ವಿವಾಹಿತ ಪುತ್ರಿ ಅನುಕಂಪದ ನೇಮಕಾತಿಗೆ ಅರ್ಹರಾಗಿದ್ದಾಳೆ ಎಂದು ಅಭಿಪ್ರಾಯಪಟ್ಟಿದೆ.

ಕುಟುಂಬ ಮತ್ತು ಅವಲಂಬಿ ಎಂಬ ಪದಗಳ ವ್ಯಾಖ್ಯಾನವನ್ನು ಅವಿವಾಹಿತರು, ವಿವಾಹಿತರು, ವಿಚ್ಛೇದಿತರು ಅಥವಾ ವಿಧವೆಯೇ ಆಗಿರಲಿ, ಅವರು ಮೃತ ಸರ್ಕಾರಿ ನೌಕರನ ಮೇಲೆ ಅವಲಂಬಿತರಾಗಿದ್ದರೆ ಮತ್ತು ಅವರೊಂದಿಗೆ ವಾಸಿಸುತ್ತಿದ್ದಾರೆ ಅವರನ್ನು ಸೇರ್ಪಡೆ ಮಾಡಲು ವಿಸ್ತರಣೆ ಮಾಡಲಾಗಿತ್ತು.

ಕರ್ನಾಟಕ ನಾಗರೀಕ ಸೇವಾ ನಿಯಮಗಳಿಗೆ ತಿದ್ದುಪಡಿಯನ್ನು ಪರ್ಯಾಯದ ಮೂಲಕ ಮಾಡಲಾಗಿದೆ. ಬದಲಿ ನಿಬಂಧನೆ ಅದರ ಆರಂಭದಿಂದಲೂ ಕಾನೂನಿನ ಭಾಗವಾಗಿದೆ ಎಂದು ಪರಿಗಣಿಸಲಾಗುತ್ತದೆ. ಅರ್ಜಿದಾರರು ವಿವಾಹಿತ ಪುತ್ರಿ ಎನ್ನುವ ಕಾರಣಕ್ಕೆ ಮಾತ್ರ ಅನುಕಂಪದ ಆಧಾರದಲ್ಲಿ ನೇಮಕಾತಿ ಅರ್ಜಿ ತಿರಸ್ಕರಿಸಲಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಹೀಗಾಗಿ ವಿವಾಹಿತ ಹೆಣ್ಣು ಮಕ್ಕಳು ಇತರೆ ಅರ್ಹತಾ ಅವಶ್ಯಕತೆಗಳನ್ನು ಪೂರೈಸಿದರೆ ಅನುಕಂಪದ ನೇಮಕಾತಿಗೆ ಪರಿಗಣಿಸಲು ಅರ್ಹರಾಗಿರುತ್ತಾರೆ. ಅರ್ಜಿದಾರರ ತಾಯಿ ನಿವೃತ್ತ ಸರ್ಕಾರಿ ನೌಕರರು, ಅವರು ಪಿಂಚಣಿ ಪಡೆಯುತ್ತಿದ್ದಾರೆ ಎಂಬ ಕಾರಣಕ್ಕೆ ಅನುಕಂಪದ ಆಧಾರದಲ್ಲಿ ನೇಮಕಾತಿಗೆ ಅರ್ಜಿದಾರರ ಮನವಿಯನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಅರ್ಜಿಯನ್ನು ತಿರಸ್ಕರಿಸಿದ ಕೆಎಟಿ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದ್ದು, ಸರ್ಕಾರ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ನಿರ್ದೇಶಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ