LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಯಾವಾಗ ರೀಲ್ಸ್ ಮಾಡ್ತೀರಾ ಸಚಿವ ಕೃಷ್ಣಬೈರೇಗೌಡ ಅವರೇ? ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರುಗೆ ಕಾಲೆಳೆದಿದ್ದಾರೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಮಾಡುವುದು ಯಾವಾಗ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಜನತೆ ಪತ್ರಿಕೆಗೆ ಕಳುಹಿಸಿರುವ ನರಕಸದೃಶ ರಸ್ತೆಗುಂಡಿಗಳು ಫೋಟೋಗಳನ್ನು ಒಮ್ಮೆ ಕಣ್ಣು ಬಿಟ್ಟು ನೋಡಿ! ವಿನಾಯಕ ಲೇಔಟ್ ನಾಗರಭಾವಿ, ಮುದ್ದಿನಪಾಳ್ಯ ರಸ್ತೆ, ಜಯನಗರ 8ನೇ ಬ್ಲಾಕ್… ಹೀಗೆ ರಾಜಧಾನಿಯ ಪ್ರತಿ ರಸ್ತೆಯಲ್ಲೂ ಈಗ ‘ಗುಂಡಿಗಳದ್ದೇ ದರ್ಬಾರ್’!

ಬೆಂಗಳೂರನ್ನು “Failed Model” ಎಂದು ಕರೆಯುವ ಮೂಲಕ ಬ್ರ್ಯಾಂಡ್ ಬೆಂಗಳೂರು ನಿರ್ಮಿಸುತ್ತೇವೆ ಎಂದು ಕೊಚ್ಚಿಕೊಳ್ಳುತ್ತಿದ್ದ ನಿಮ್ಮ ಮುಖ್ಯಮಂತ್ರಿಗಳ ಅಸಲಿ ಬಂಡವಾಳವನ್ನ ನೀವೇ ಬಯಲು ಮಾಡಿದ್ದೀರಿ.

ಬೆಂಗಳೂರಿನ ಇಂದಿನ ದುಸ್ಥಿತಿಗೆ ನೇರ ಹೊಣೆಗಾರರು ನಿಮ್ಮ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಎಂದು ಒಪ್ಪಿಕೊಂಡು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದೀರಾ ಕೃಷ್ಣ ಭೈರೇಗೌಡರೇ? ಅಥವಾ ಇದನ್ನು ಸರಿಪಡಿಸಲು ಸಾಧ್ಯವೇ ಇಲ್ಲ ಎಂದು ಕೈಚೆಲ್ಲಿದೀರಾ? ಎಂದು ಕೇಳಿದ್ದಾರೆ.

ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಬೆಂಗಳೂರಿನ ನಾಗರಿಕರ ತೆರಿಗೆ ಹಣ ಬೇಕು, ಆದರೆ ಅವರಿಗೆ ಸುರಕ್ಷಿತ ರಸ್ತೆ ಕೊಡುವ ಯೋಗ್ಯತೆ ಇಲ್ಲ. ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ಉಸ್ತುವಾರಿ ಸಚಿವರ ವೈಫಲ್ಯದಿಂದಾಗಿ ಜನರ ದಿನನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಇದೆ.

ಕ್ಯಾಮೆರಾ ಮುಂದೆ ಅಧಿಕಾರಿಗಳನ್ನು ಗದರಿಸಿ ರೀಲ್ಸ್ ಮಾಡುವ ನಾಟಕ ಸಾಕು ಮಾಡಿ, ಮೊದಲು ರಸ್ತೆಗಿಳಿದು ಈ ಗುಂಡಿಗಳನ್ನು ಮುಚ್ಚಿಸಿ. ಇಲ್ಲದಿದ್ದರೆ ಬೆಂಗಳೂರಿನ ಜನ ನಿಮಗೆ ತಕ್ಕ ಪಾಠ ಕಲಿಸುವ ದಿನ ಬಹಳ ದೂರವಿಲ್ಲ ಎಂದು ಕಿಡಿಕಾರಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ