LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅರಣ್ಯ ಇಲಾಖೆ ಖಾಲಿ ಹುದ್ದೆಗಳ ಭರ್ತಿ, ಪ್ರಾಣಿ ಸಂಪತ್ತಿನ ಮೇಲೆ ನಿಗಾ ಇಡಲು ಥರ್ಮಲ್‌ ಡ್ರೋಣ್‌ ವ್ಯವಸ್ಥೆ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಇಲಾಖೆಯ ಈ ವರೆಗಿನ ಪ್ರಗತಿ ಹಾಗೂ ಈ ಸಾಲಿಗೆ ನಿಗದಿಪಡಿಸಲಾಗಿರುವ ಗುರಿಗಳ ಬಗ್ಗೆ ಮಾಹಿತಿ ಪಡೆದು, ಅಧಿಕಾರಿಗಳಿಗೆ ಸೂಚನೆ ನೀಡಿದರು.

* ಗಣಿಗಾರಿಕೆ ಸೇರಿ ನಾನಾ ಚಟುವಟಿಕೆಗಳಿಗೆ ಸರ್ಕಾರಿ ಜಾಗ ಪಡೆದು ವರ್ಷಗಳ ಕಾಲ ಚಟುವಟಿಕೆ ಆರಂಭಿಸದಿದ್ದರೆ ಕ್ರಮ ಕೈಗೊಳ್ಳಬೇಕು.‌

* ಬಾಕಿ ಇರುವ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸಬೇಕು.

* ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಬೇಕು.

* ನಮ್ಮ ಅರಣ್ಯ ಪ್ರಾಣಿ ಸಂಪತ್ತು ಅಮೂಲ್ಯವಾದದ್ದು. ಸಂರಕ್ಷಣೆ ಪರಿಣಾಮಕಾರಿಯಾಗಿ ಆಗಬೇಕು.

* ಕೈಗಾರಿಕೆ ಹಾಗೂ ಗಣಿಗಾರಿಕೆ ಯೋಜನೆಗಳಿಗೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ನಿಗದಿತ ಕಾಲಮಿತಿಯೊಳಗೆ ನೀಡುವ ವ್ಯವಸ್ಥೆ ಮಾಡಬೇಕು.

* ಸರ್ಕಾರದ ಜಾಗವನ್ನು ಪಡೆದು ಐದಾರು ವರ್ಷಗಳ ಕಾಲ ಖಾಲಿ ಬಿಟ್ಟರೆ ಸರ್ಕಾರಕ್ಕೆ ಯಾವುದೇ ಆದಾಯ ದೊರೆಯುವುದಿಲ್ಲ. ಅಷ್ಟೇ ಅಲ್ಲದೆ, ಈ ಅವಧಿಯಲ್ಲಿ ಉತ್ಪಾದನಾ ವೆಚ್ಚ, ಸರಕುಗಳ ಬೆಲೆ ಹಾಗೂ ಯೋಜನೆಯ ಒಟ್ಟು ಮೌಲ್ಯವೂ ಹೆಚ್ಚಾಗುತ್ತದೆ. ಇಂತಹ ವಿಳಂಬವನ್ನು ಸಹಿಸುವುದಿಲ್ಲ.

* ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಸಣ್ಣಪುಟ್ಟ ನೆಪಗಳನ್ನು ಮುಂದಿಟ್ಟು ಅವರಿಗೆ ತೊಂದರೆ ನೀಡಬಾರದು. ನಿಯಮಾನುಸಾರ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು.

* ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿ ವಿತರಣೆ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು.

* ಇಲಾಖೆಯ ಆಡಳಿತ ವ್ಯವಸ್ಥೆ, ಪ್ರಮುಖ ಯೋಜನೆಗಳು ಹಾಗೂ ವಿವಿಧ ಹಂತಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಸಮಗ್ರ ಮಾಹಿತಿ ಇಂದು ಪಡೆಯಲಾಗಿದ್ದು, ಅಗತ್ಯ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು.

* ಬೆಳೆನಾಶ, ಜಾನುವಾರು ಜೀವಹಾನಿ, ಮಾನವ ಪ್ರಾಣ ಹಾನಿ, ಶಾಶ್ವತ ಅಂಗವಿಕಲತೆ, ಭಾಗಶಃ ಅಂಗವಿಕಲತೆ, ಮಾನವ ಗಾಯ, ಆಸ್ತಿನಾಶ, ಮಾಶಾಸನ ಗಳಿಗಾಗಿ 2025-26ನೇ ಸಾಲಿನಲ್ಲಿ 6,306 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಮಾನವ, ಅರಣ್ಯಜೀವಿ ಸಂಘರ್ಷ ತಪ್ಪಿಸಲು ರೈಲ್ವೇ ಬ್ಯಾರಿಕೇಡ್‌, ಆನೆತಡೆ ಕಂದಕ ಮತ್ತು ಸೌರತಂತಿ ಬೇಲಿಗಳನ್ನು ಅಳವಡಿಸಲಾಗುತ್ತಿದೆ ಹಾಗೂ ಆನೆ ಕಾರ್ಯಪಡೆ, ಚಿರತೆ ಕಾರ್ಯಪಡೆ ಹಾಗೂ ಎಸ್‌ಎಂಎಸ್‌ ಮತ್ತು ಇತರೆ ಡಿಜಿಟಲ್‌ ಬೋರ್ಡ್‌ಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ. ಇಷ್ಟಾದರೂ ಪ್ರಾಣಿಗಳು ಸಹ ಈ ಎಲ್ಲಾ ಅಡೆತಡೆಗಳನ್ನು ದಾಟಲು ನಾನಾ ಮಾರ್ಗಗಳನ್ನು ಕಂಡುಕೊಳ್ಳುತ್ತವೆ. ಹೀಗಾಗಿ ಅಧಿಕಾರಿಗಳು ಕೂಡ ಆಗಾಗ್ಗೆ ಇತರೆ ಹೊಸ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಬೇಕು.

ಚರ್ಚೆ ಆದ ಇತರೆ ವಿಚಾರಗಳು:

* ಇಲಾಖೆಯ ಖಾಲಿ ಹುದ್ದೆಗಳ ಭರ್ತಿ ಕುರಿತು ಪರಿಶೀಲನೆ ಮತ್ತು ಚರ್ಚೆ.

* ಪ್ರಾಣಿ ಸಂಪತ್ತಿನ ಮೇಲೆ ನಿಗಾ ಇಡಲು ಥರ್ಮಲ್‌ ಡ್ರೋಣ್‌ ವ್ಯವಸ್ಥೆ.

* ಶರಾವತಿ ಪಂಪ್ ಸ್ಟೋರೇಜ್‌, ಗೋವಾ ತಮ್ನೇರ್‌, ಕಳಸಾ ಬಂಡೂರಿ ಮತ್ತು ಬಿಡಿಎ ಫೆರಿಫೆರಲ್‌ ರಿಂಗ್‌ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಮತ್ತು  ಕೇಂದ್ರ ಅರಣ್ಯ ಇಲಾಖೆಗಳ ವಿವಿಧ ಹಂತಗಳಲ್ಲಿ ಬಾಕಿ ಇರುವ ಅರಣ್ಯ ಅನುಮತಿ ವಿಚಾರಗಳಲ್ಲಿ ತ್ವರಿತ ಗತಿಯಲ್ಲಿ ಕ್ರಮ ವಹಿಸುವುದು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಅಂಜುಮ್ ಪರ್ವೇಜ್, ಕರ್ನಾಟಕ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಸಿಎಂ ಆರ್ಥಿಕ ಸಲಹೆಗಾರರಾದ ಎಲ್.ಕೆ. ಅತೀಕ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ