ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆಯನ್ನು ಮಾಡಿಯೇ ತೀರುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸ್ಪಷ್ಟನೆ ನಡುವೆ ಅವರ ಸಂಪುಟದ ಸಹೋದ್ಯೋಗಿಗಳು ಭಿನ್ನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭೂಮಿ ಬಿಟ್ಟುಕೊಡಲು ರೈತರು ಒಪ್ಪಿದರೆ ಮಾತ್ರ ಯೋಜನೆ ಜಾರಿಗೆ ಸಿದ್ಧವೆಂದು ಡಿಸಿಎಂ ಡಾ.ಜಿ. ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿಕೆ ಬಳಿಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೂಡ ದನಿಗೂಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಭೂ ಸ್ವಾದಿನ ನಿಯಮಗಳು ಬಹಳ ಸ್ಪಷ್ಟವಾಗಿದ್ದು, ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ರೈತರು ಸ್ವ ಇಚ್ಛೆಯಿಂದ ಭೂಮಿಯನ್ನು ಬಿಟ್ಟುಕೊಟ್ಟರೆ ಮಾತ್ರ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ದೇವನಹಳ್ಳಿ ಸಮೀಪ ಚನ್ನರಾಯಪಟ್ಟಣ ಗ್ರಾಮಗಳ ರೈತರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಏರೋ ಸ್ಪೇಸ್ ಪಾರ್ಕ್ ಗಾಗಿ ಭೂ ಸ್ವಾಧೀನವನ್ನು ಸರ್ಕಾರ ಕೈಬಿಟ್ಟಿತು. ಈ ಪ್ರದೇಶವನ್ನು ಶಾಶ್ವತ ಕೃಷಿ ವಲಯ ಎಂದು ಘೋಷಣೆ ಮಾಡಲಾಗಿದೆ. ಈಗ ಕೆಲವು ರೈತರು ಭೂಮಿ ಬಿಟ್ಟುಕೊಡಲು ಆಸಕ್ತಿ ತೋರಿಸಿದ್ದು, ಇದರ ಬಗ್ಗೆ ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಬಿಡದಿ ಟೌನ್ ಶಿಪ್ ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಸತೀಶ್ ಜಾರಕಿಹೊಳಿ, ಭೂಮಿ ಬಿಟ್ಟುಕೊಡಲು ಒಪ್ಪದೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಇದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇವೆ. ಹೈಕಮಾಂಡ್ ನಾಯಕರ ಗಮನಕ್ಕೂ ಬಂದಿದೆ. ಸಂಪುಟದಲ್ಲಿ ಟೌನ್ ಶಿಪ್ ಬಗ್ಗೆ ಚರ್ಚೆಯೇ ನಡೆದಿಲ್ಲ ಎಂದು ಹೇಳಿದ್ದಾರೆ.