LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಿಎಂ ಸಿದ್ದರಾಮಯ್ಯ ಬಳಿ ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್

ಬೆಂಗಳೂರು: ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಾರಿನ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪ್ರದೀಪ್ ಈಶ್ವರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನೋವು ತೋಡಿಕೊಂಡಿದ್ದಾರೆ.

ಇಂದು ಬೆಳಿಗ್ಗೆ ಮುಖ್ಯಮಂತ್ರಿ ಡಿ.ಕಿ.ಶಿವಕುಮಾರ್ ಅವರನ್ನು ಭೇಟಿಯಾಗಿ, ಘಟನೆಗಳ ಬಗ್ಗೆ ವಿವರಿಸಿದ ಪ್ರದೀಪ್ ಈಶ್ವರ್ ಗೆ ಸಿಎಂ ಡಿ.ಕೆ.ಶಿವಕುಮಾರ್ ಧೈರ್ಯ ತುಂಬಿದರು. ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರದೀಪ್ ಈಶ್ವರ್ ಭೇಟಿಯಾಗಿದ್ದಾರೆ.

ಸಿದ್ದರಾಮಯ್ಯ ಅವರನ್ನು ಭೇಟುಯಾದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ತನ್ನ ಕಾರಿನ ಮೇಲೆ ಬಿಜೆಪಿ, ಜೆಡೊಎಸ್ ಕಾರ್ಯಕರ್ತರು ಚಪ್ಪಲಿ ಎಸಿದ್ದಾರೆ. ಅಷ್ಟೇ ಅಲ್ಲನನ್ನ ಕುಟುಂಬವನ್ನು ನಿಂದಿಸಿ ಮಾತನಾಡಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.

ಈ ವೇಳೆ ಸಿದ್ದರಾಮಯ್ಯ, ಪ್ರದೀಪ್ ಈಶ್ವರ್ ಅವರನ್ನು ಸಮಾಧಾನಪಡಿಸಿ, ಧೈರ್ಯ ತುಂಬಿದರು. ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯ. ಇವುಗಳನ್ನೆಲ್ಲ ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ತಿಳಿಸಿದ್ದಾರೆ.

ಬಳಿಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ತಿಳಿಸಿದರು. ಪೊಲೀಸರ ಸಮ್ಮುಖದಲ್ಲಿ ಅದರಲ್ಲಿಯೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿರುವುದರ ಬಗ್ಗೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗೂ ಕರೆ ಮಾಡಿದ ಸಿದ್ದರಾಮಯ್ಯ, ಶಾಸಕರ ಮೇಲೆ ಚಪ್ಪಲಿ ಎಸೆಯುತ್ತುದ್ದರು ಅಧಿಕಾರಿಗಳು ಏನು ಮಾಡುತ್ತಿದ್ದಿ? ಪೊಲೀಸ್ ವರಿಷ್ಠಾಧಿಕಾರಿ ಯಾರು? ಇಂತಹ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ. ಪ್ರಕರಣದ ತನಿಖೆಗೆ ಸಮಿತಿ ರಚಿಸುವಂತೆಯೂ ಸೂಚಿಸಿದ್ದಾರೆ.

ಈ ವೇಳೆ ಡಿಸಿಎಂ ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಮಧು ಬಂಗಾರಪ್ಪ ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ