LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಶ್ವತ ನಿವಾಸ ಪ್ರಮಾಣಪತ್ರ ವಿತರಣೆಗೆ ಕಂದಾಯ ಇಲಾಖೆ ಮಾರ್ಗಸೂಚಿ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದಾದ್ಯಂತ ಶಾಶ್ವತ ನಿವಾಸ ಪ್ರಮಾಣಪತ್ರ (PRC)ಗಳ ಸುಗಮ ಹಾಗೂ ಕಾಲಮಿತಿಯ ವಿತರಣೆಗೆ ಹೊಸ ಕಾರ್ಯಾಚರಣಾ ಚೌಕಟ್ಟನ್ನು ಜಾರಿಗೆ ತಂದಿದೆ. ಈ ಆದೇಶವನ್ನು 29 ಜೂನ್ 2026 ರಂದು ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರ ಡಿಜಿಟಲ್ ಸಹಿಯೊಂದಿಗೆ ಪ್ರಕಟಿಸಲಾಗಿದೆ. ಸರ್ಕಾರದ ಆದೇಶದನ್ವಯ ಅರ್ಹ ವ್ಯಕ್ತಿಗಳಿಗೆ ಶಾಶ್ವತ ನಿವಾಸ ಪ್ರಮಾಣಪತ್ರಗಳನ್ನು ನೀಡುವ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಇತರೆ ಸರ್ಕಾರಿ ಪ್ರಮಾಣಪತ್ರಗಳು ಹಾಗೂ ನಾಗರಿಕ ಸೇವೆಗಳನ್ನೂ ಪ್ರಚಲಿತ ಆದೇಶಗಳು ಮತ್ತು ಸುತ್ತೋಲೆಗಳನ್ವಯ ಒದಗಿಸಲಾಗುತ್ತಿದೆ. ಶಾಶ್ವತ ನಿವಾಸ ಪ್ರಮಾಣಪತ್ರವು ಪ್ರವೇಶ, ನೇಮಕಾತಿ, ವಿದ್ಯಾರ್ಥಿವೇತನ, ಕಲ್ಯಾಣ ಯೋಜನೆಗಳು ಹಾಗೂ ಸರ್ಕಾರದ ನೀತಿಗಳ ಅಡಿಯಲ್ಲಿ ಮಹತ್ವದ ದಾಖಲೆ ಆಗಿರುವುದರಿಂದ, ಈ ಸೇವೆಯನ್ನು ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011ರ ಅಡಿಯಲ್ಲಿ ಅಧಿಸೂಚಿಸಲು ಸರ್ಕಾರ ನಿರ್ಧರಿಸಿದೆ.

ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಂಪ್ಯೂಟರ್, ಇಂಟರ್ನೆಟ್, ಮುದ್ರಣ, ಸ್ಕ್ಯಾನಿಂಗ್ ಸೌಲಭ್ಯಗಳೊಂದಿಗೆ ಸಹಾಯ ಮತ್ತು ಸೌಲಭ್ಯ ಕೌಂಟರ್‌ಗಳನ್ನು ಸ್ಥಾಪಿಸಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು, ಅಟಲ್ ಜನಸ್ನೇಹಿ ಕೇಂದ್ರ (AJSK) ಪೋರ್ಟಲ್ ಅಥವಾ ಸರ್ಕಾರ ಸೂಚಿಸುವ ಇತರೆ ಪೋರ್ಟಲ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನಗರಸಭೆಗಳ ಮುಖ್ಯಾಧಿಕಾರಿಗಳು ನಗರ ಪ್ರದೇಶಗಳಲ್ಲಿ ಕೌಂಟರ್‌ಗಳನ್ನು ಸ್ಥಾಪಿಸಬೇಕು. ಆದೇಶ ಹೊರಡಿಸಿದ ಏಳು ದಿನಗಳೊಳಗೆ ಕಾರ್ಯಾರಂಭ ಮಾಡಬೇಕೆಂದು ಸೂಚಿಸಲಾಗಿದೆ.

ಸರ್ಕಾರಿ ದತ್ತಾಂಶಗಳನ್ನು ಪರಿಶೀಲನೆಗೆ ಬಳಸುವ ಮೂಲಕ ದಾಖಲೆ ಸಲ್ಲಿಸುವ ಅಗತ್ಯವನ್ನು ಕಡಿಮೆ ಮಾಡುವ ವ್ಯವಸ್ಥೆ ಜಾರಿಗೆ ಬರಲಿದೆ. ಕುಟುಂಬ, ಶಿಕ್ಷಣ, ನಿವಾಸ, ಮತದಾರರ ಪಟ್ಟಿಗಳು ಮುಂತಾದ ದತ್ತಾಂಶಗಳನ್ನು ಬಳಸಬಹುದಾದರೂ ಪ್ರಮಾಣಪತ್ರ ನೀಡುವ ಮೊದಲು ಅರ್ಹತೆಯನ್ನು ಸ್ವತಂತ್ರವಾಗಿ ದೃಢೀಕರಿಸಬೇಕಾಗಿದೆ. ಡಿಜಿಟಲ್ ವೇದಿಕೆಯನ್ನು NIC ಬೆಂಗಳೂರು ಹಾಗೂ DPAR (e-Governance) ಇಲಾಖೆಯ ಸಹಕಾರದೊಂದಿಗೆ ಕಾರ್ಯಗತಗೊಳಿಸಲಾಗುತ್ತದೆ.

ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ ಯೋಜನೆಯ ಅನುಷ್ಠಾನವನ್ನು ಪರಿಶೀಲಿಸಲಿದ್ದು, ಜಿಲ್ಲಾಧಿಕಾರಿಗಳು ಕಾಲಕಾಲಕ್ಕೆ ವರದಿಗಳನ್ನು ಸಲ್ಲಿಸಬೇಕಾಗಿದೆ. SOPಗಳು, ತಾಂತ್ರಿಕ ಮಾರ್ಗಸೂಚಿಗಳು, ಅರ್ಜಿ ನಮೂನೆಗಳು, ಬಳಕೆದಾರ ಕೈಪಿಡಿಗಳು ಮುಂತಾದ ಕಾರ್ಯಾಚರಣಾ ಸೂಚನೆಗಳನ್ನು ಕಂದಾಯ ಇಲಾಖೆ ಹೊರಡಿಸಲಿದೆ. ಅನುಷ್ಠಾನ ಸಂಬಂಧಿಸಿದ ಯಾವುದೇ ಸಂದೇಹ ಉಂಟಾದಲ್ಲಿ ಕಂದಾಯ ಇಲಾಖೆಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಈ ಆದೇಶವು ಜನಸಾಮಾನ್ಯರಿಗೆ ಪಾರದರ್ಶಕ, ಸುಲಭ ಹಾಗೂ ಕಾಲಮಿತಿಯೊಳಗಿನ ಸೇವೆಗಳನ್ನು ಒದಗಿಸುವತ್ತ ಸರ್ಕಾರದ ಬದ್ಧತೆಯನ್ನು ತೋರಿಸುತ್ತಿದ್ದು, ಜನಕೇಂದ್ರೀಕೃತ ಆಡಳಿತದತ್ತ ಮಹತ್ವದ ಹೆಜ್ಜೆ ಎಂದು ಪರಿಗಣಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ