LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎನ್ಯುಮರೇಶನ್ ಫಾರಂ ಭರ್ತಿ ಮಾಡುವ ಮೂಲಕ ಎಸ್‌ಐಆರ್ ಪ್ರಕ್ರಿಯೆಗೆ ಸಿಎಂ ಡಿಕೆಶಿಯಿಂದ ಚಾಲನೆ

ಬೆಂಗಳೂರು: ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು.

ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಶಿವಕುಮಾರ್ ಅವರು ಗಣತಿ ನಮೂನೆ ತುಂಬಿದರು. ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಆರಂಭವಾಗಿದ್ದು, ನನ್ನ ಮನೆಯಿಂದಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ನನ್ನ ಎನ್ಯುಮರೇಷನ್ ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಸಲ್ಲಿಕೆ ಮಾಡಿರುವೆ. ನೀವು ನಿಮ್ಮ ಹೆಸರಿನ ಜೊತೆಗೆ ಈ ಹಿಂದೆ ಮತದಾರ ಪಟ್ಟಿ ಸಮಯದಲ್ಲಿ ನೀಡಲಾಗಿದ್ದ ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಇಲ್ಲವಾದರೆ ಹೊಸ ಮೊಬೈಲ್ ಸಂಖ್ಯೆಯನ್ನು ಅಧಿಕಾರಿಗಳ ಮೂಲಕ ಸೇರ್ಪಡೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಯಾವ ಸಂಖ್ಯೆ ನೀಡಿರುತ್ತಿರೋ ಅದೇ ಸಂಖ್ಯೆಗೆ ಒಟಿಪಿ ಬರಲಿದೆ” ಎಂದು ಮಾಹಿತಿ ನೀಡಿದರು.

ಕುಟುಂಬದವರ ಪರವಾಗಿ ಒಬ್ಬರು ಸಹಿ ಮಾಡಿದರೂ ಅರ್ಜಿ ಸ್ವೀಕಾರ

“ನೀವು ನಿಮ್ಮ ಹೆಸರಿನಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ. ಬಿಎಲ್ಎ, ಬಿಎಲ್ಓ ಹಾಗೂ ಮೇಲ್ವಿಚಾರಕರು ಈಗಾಗಲೇ ವಾಟ್ಸಪ್ ಗ್ರೂಪ್ ಮಾಡಿಕೊಂಡಿದ್ದಾರೆ. ಕುಟುಂಬದ ಸದಸ್ಯರ ಪೈಕಿ ಒಬ್ಬರು ಸಹಿ ಮಾಡಿದರೂ ಸಾಕು. ಕುಟುಂಬದವರ ಪರವಾಗಿ ಒಬ್ಬರೇ ಎಲ್ಲರ ಅರ್ಜಿ ತುಂಬಬಹುದು. ಅದನ್ನು ಸ್ವೀಕಾರ ಮಾಡಿಕೊಳ್ಳಲಾಗುವುದು. ನಿಮ್ಮ ಫೋಟೋ ಬದಲಾಯಿಸಿಕೊಳ್ಳಬೇಕಾದರೆ ಅರ್ಜಿಯಲ್ಲಿ ಹೊಸ ಫೋಟೋ ನೀಡಬಹುದು. ಹೊಸ ಮತದಾರರು ನಿವಾಸ ದೃಢೀಕರಣ ಪತ್ರ ನೀಡಬೇಕು. ಕರ್ನಾಟಕ ಸರ್ಕಾರ ರಾಜ್ಯದ ಜನರಿಗೆ ಅಗತ್ಯ ಪ್ರಮಾಣಪತ್ರ ನೀಡಲು ಮುಂದಾಗಿದೆ. ಎಲ್ಲರೂ ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಬೇಕು. ಉಳಿಸಿಕೊಳ್ಳದಿದ್ದರೆ ಸರ್ಕಾರ ಸೌಲಭ್ಯ, ಕಾರ್ಯಕ್ರಮಗಳನ್ನು ಪಡೆಯುವುದು ಕಷ್ಟವಾಗಲಿದೆ” ಎಂದು ಮಾಹಿತಿ ನೀಡಿದರು.

ಕೆಲವು ಅನಕ್ಷರಸ್ಥರಿಗೆ ‍ಆಪ್ ಬಳಸುವುದರ ಬಗ್ಗೆ ಮಾಹಿತಿ ಇರುವುದಿಲ್ಲ ಎಂದು ಕೇಳಿದಾಗ, “ಆಪ್‌ ಬಳಸುವ ವಿಚಾರದಲ್ಲಿ ನನಗೂ ಮಾಹಿತಿ ಇಲ್ಲ. ನಾನು ಬೇರೆಯವರ ಸಹಾಯ ಪಡೆದೆ. ಈ ಕಾರಣಕ್ಕೆ ಬಿಎಲ್ಓಗಳ ಮೂಲಕ ಅರ್ಜಿ ಪಡೆದು ಆಫ್‌ ಲೈನ್ ಮೂಲಕವೇ ಅರ್ಜಿ ತುಂಬಬಹುದು” ಎಂದು ತಿಳಿಸಿದರು.

ಕರ್ನಾಟಕದ ವಿಚಾರದಲ್ಲಿ ಈ ಪ್ರಕ್ರಿಯೆ ಬಹಳ ಪ್ರಮುಖವಾಗಿದೆ ಎಂದು ಕೇಳಿದಾಗ, “ಬೇರೆ ರಾಜ್ಯಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಕೇವಲ ಮತದಾರರಿಗೆ ಮಾತ್ರ ನೀಡುತ್ತಿದ್ದು, ಮತದಾನ ಹಕ್ಕು ಇಲ್ಲದವರಿಗೆ ಸೌಲಭ್ಯ ಹಿಂಪಡೆಯಲಾಗುತ್ತಿದೆ. ಅದೇ ವ್ಯವಸ್ಥೆ ರಾಜ್ಯದಲ್ಲೂ ಬರಬಹುದು” ಎಂದು ತಿಳಿಸಿದರು.

“ಇಲ್ಲಿನ ಮತದಾರರಿಗೆ ನಾವು ಗ್ಯಾರಂಟಿ ನೀಡಬಹುದು. ಬೇರೆ ರಾಜ್ಯದ ಮತದಾರರಿಗೆ ನಾವು ಯಾಕೆ ಗ್ಯಾರಂಟಿ ನೀಡಬೇಕು? ನಮ್ಮ ರಾಜ್ಯದವರಿಗೆ ಮಾತ್ರ ಗ್ಯಾರಂಟಿ ನೀಡಬೇಕು ಎಂಬುದು ನಮ್ಮ ಆಲೋಚನೆ” ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ