LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಜಾತಿ, ಪಂಗಡ ಮೀಸಲಾತಿ ಹೆಚ್ಚಳ ಪರಿಣಾಮಕಾರಿ ಜಾರಿ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ಇಂದು ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಸಮುದಾಯದ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಅಧಿನಿಯಮ–2022ರಡಿ ಹೆಚ್ಚಿಸಲಾದ ಶೇ.17 ಹಾಗೂ ಶೇ.7ರ ಮೀಸಲಾತಿಯನ್ನು ಶೀಘ್ರ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ಮುಂದಿನ ರೂಪುರೇಷೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.

ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ನ್ಯಾಯಾಲಯದಲ್ಲಿರುವ ತಡೆಯಾಜ್ಞೆಯನ್ನು ತೆರವುಗೊಳಿಸಿ ಹೆಚ್ಚಿಸಲಾದ ಮೀಸಲಾತಿಯ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿತ್ತು. ನಮ್ಮ ಮನವಿ ಹಾಗೂ ಶ್ರೀಗಳ ಮಾರ್ಗದರ್ಶನಕ್ಕೆ ಸ್ಪಂದಿಸಿ, ರಾಜ್ಯ ಸರ್ಕಾರವು ಹಿರಿಯ ಕಾನೂನು ತಜ್ಞ ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಿಸಿರುವುದು ಸ್ವಾಗತಾರ್ಹ ಮತ್ತು ಸಮುದಾಯದ ಹಿತದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ.

ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸಾಮಾಜಿಕ ನ್ಯಾಯ, ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ ಹಾಗೂ ಪರಿಶಿಷ್ಟ ಸಮುದಾಯಗಳ ಸಬಲೀಕರಣಕ್ಕಾಗಿ ನಮ್ಮ ಬದ್ಧತೆ ಮತ್ತು ಹೋರಾಟ ನಿರಂತರವಾಗಿರಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಈ‌ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ, ಎಜಿ ಶಶಿಕುಮಾರ್ ಶೆಟ್ಟಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BIG NEWS: ಸುರಕ್ಷತಾ ಕ್ರಮಗಳೊಂದಿಗೆ ಬಂಡಿಪುರ–ನಾಗರಹೊಳೆ ಸಫಾರಿ ಆರಂಭಿಸಲು ಸಿಎಂ ಡಿ.ಕೆ. ಶಿವಕುಮಾರ್ ಸೂಚನೆತಕ್ಷಣವೇ ಬಂಡೀಪುರ, ನಾಗರಹೊಳೆ ಸಫಾರಿ ಪುನಾರಂಭಿಸಿ; ಅಧಿಕಾರಿಗಳಿಗೆ ಡಿಕೆಶಿ ನಿರ್ದೇಶನಪರಿಶಿಷ್ಟ ಜಾತಿ, ಪಂಗಡ ಮೀಸಲಾತಿ ಹೆಚ್ಚಳ ಪರಿಣಾಮಕಾರಿ ಜಾರಿ ಬಗ್ಗೆ ಮಹತ್ವದ ಚರ್ಚೆಎತ್ತಿನಹೊಳೆ ಯೋಜನೆ ವೆಚ್ಚಕ್ಕೆ ಜಲಜೀವನ್ ಮಿಷನ್ ಅಡಿಯಲ್ಲಿ ಹಣ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ: ಈಶ್ವರ್ ಖಂಡ್ರೆಮಾದಕವಸ್ತು ಸೇವಿಸುವವರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ: ಡಿಕೆಶಿ2028ರ ವೇಳೆಗೆ ಮಾದಕ ವಸ್ತು ಮುಕ್ತ-ನಶೆ ಮುಕ್ತ ಕರ್ನಾಟಕ ನಮ್ಮ ಗುರಿ: ಡ್ರಗ್ಸ್ ಜಾಲ; ಸೇವನೆ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ: ಸಿಎಂ ಘೋಷಣೆBREAKING: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲೇ ಫಲಿತಾಂಶ ಪ್ರಕಟಿಸಿದ ವಿಟಿಯು ದಾಖಲೆSIR ಪ್ರಕ್ರಿಯೆಯಲ್ಲಿ ಲೋಪದೋಷ ಆರೋಪ; ನ್ಯಾಯಾಂಗ ಮಧ್ಯಪ್ರವೇಶಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ವಿರೋಧ ಪಕ್ಷಗಳುಕುಡಿದು ಬಂದು ಹಲ್ಲೆ ಮಾಡಿದ ಗಂಡನ ಮೇಲೆ ಬಿಸಿ ನೀರು ಸುರಿದ ಪತ್ನಿ…!ಚಲಿಸುತ್ತಿದ್ದ ಕಾರ್ ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ವಶಕ್ಕೆ