LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸೌಧದ ಮುಂಭಾಗದಲ್ಲೇ ನೇಪಾಳಿ ಯುವಕರ ಮಾರಾಮಾರಿ? ವೈರಲ್ ವಿಡಿಯೋ ನೋಡಿ ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯ ಅತ್ಯಂತ ಸುರಕ್ಷಿತ ವಲಯ ಹಾಗೂ ರಾಜ್ಯದ ಶಕ್ತಿ ಕೇಂದ್ರ ಎಂದೇ ಪರಿಗಣಿಸಲಾಗುವ ವಿಧಾನಸೌಧದ ಮುಂಭಾಗದಲ್ಲೇ ಭಾರಿ ಹೈಡ್ರಾಮಾ ನಡೆದಿದೆ. ನೇಪಾಳದಿಂದ ಬೆಂಗಳೂರಿಗೆ ವಲಸೆ ಬಂದಿರುವ ಯುವಕರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

ಜೂನ್ 28 ರ ಭಾನುವಾರ ಸಂಜೆ ಸುಮಾರಿಗೆ ವಿಧಾನಸೌಧದ ಎದುರಿನ ಪಾದಚಾರಿ ಮಾರ್ಗದಲ್ಲಿ (Footpath) ಈ ಘಟನೆ ನಡೆದಿದೆ. ಪ್ರವಾಸ ಹಾಗೂ ವೈಯಕ್ತಿಕ ಕಾರಣಗಳಿಗಾಗಿ ವಿಧಾನಸೌಧಕ್ಕೆ ಬಂದಿದ್ದ ನೇಪಾಳಿ ಯುವಕರ ನಡುವೆ, ಮೊಬೈಲ್‌ನಲ್ಲಿ ಫೋಟೋ ತೆಗೆದುಕೊಳ್ಳುವ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ವಿಕೋಪಕ್ಕೆ ತಿರುಗಿದೆ.

ರಸ್ತೆಯಲ್ಲೇ ಗುಂಪು ಘರ್ಷಣೆ: ವೈರಲ್ ಆಯ್ತು ವಿಡಿಯೋ

ಮಾತಿನ ಜಗಳ ತಾರಕಕ್ಕೇರುತ್ತಿದ್ದಂತೆ ಸಿಟ್ಟಿಗೆದ್ದ ಯುವಕರು ಪರಸ್ಪರ ಕೆಟ್ಟ ಪದಗಳಿಂದ ನಿಂದಿಸಿಕೊಳ್ಳುತ್ತಾ, ಸಾರ್ವಜನಿಕ ರಸ್ತೆಯಲ್ಲೇ ಕೈಕೈ ಮಿಲಾಯಿಸಲು ಆರಂಭಿಸಿದ್ದಾರೆ. ರಸ್ತೆಯಲ್ಲೇ ಪರಸ್ಪರ ಕಾಲಿನಿಂದ ಒದೆಯುವುದು, ಮುಷ್ಟಿಯಿಂದ ಗುದ್ದುವುದು ಹಾಗೂ ಒಬ್ಬರ ಮೇಲೊಬ್ಬರು ಮುಗಿಬಿದ್ದು ಮನಸೋಇಚ್ಛೆ ಥಳಿಸಿಕೊಳ್ಳುವ ದೃಶ್ಯಗಳು ಅಲ್ಲಿ ನೆರೆದಿದ್ದ ಸಾರ್ವಜನಿಕರ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

ಹಗಲು ಹೊತ್ತಿನಲ್ಲೇ, ಅದೂ ಪೊಲೀಸರ ಕಣ್ಣೆದುರಲ್ಲೇ ಇಂತಹ ಘಟನೆ ನಡೆದಿದ್ದರಿಂದ ಸ್ಥಳದಲ್ಲಿದ್ದ ಸಾರ್ವಜನಿಕರು ಮತ್ತು ಪ್ರವಾಸಿಗರು ಕೆಲಕಾಲ ದಿಕ್ಕೆಟ್ಟು ಓಡಿದ್ದಾರೆ. ಈ ರಸ್ತೆ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನಗರದ ಸುರಕ್ಷತೆಯ ಬಗ್ಗೆ ಸಾರ್ವಜನಿಕರು ತೀವ್ರ ಪ್ರಶ್ನೆ ಎತ್ತುವಂತೆ ಮಾಡಿದೆ.

ನೆಟ್ಟಿಗರ ಆಕ್ರೋಶ:

ನೇಪಾಳಿ ಯುವಕರ ರಂಪಾಟದ ವಿಡಿಯೋ ಹರಿದಾಡುತ್ತಿದ್ದಂತೆ ಇಂಟರ್ನೆಟ್‌ನಲ್ಲಿ ಸಾರ್ವಜನಿಕರ ಆಕ್ರೋಶ ಸ್ಫೋಟಗೊಂಡಿದೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಮತ್ತು ವಲಸಿಗರ ಅತಿರೇಕದ ವರ್ತನೆಯ ವಿರುದ್ಧ ಕನ್ನಡಿಗರು ಕಠಿಣ ಪದಗಳಲ್ಲಿ ಕ್ಲಾಸ್ ತಗೊಂಡಿದ್ದಾರೆ.

ವಲಸೆ ನಿಯಂತ್ರಣಕ್ಕೆ ಒತ್ತಾಯ: ಬದುಕು ಕಟ್ಟಿಕೊಳ್ಳಲು ಬೇರೆ ದೇಶ, ರಾಜ್ಯಗಳಿಂದ ನಮ್ಮೂರಿಗೆ ಬಂದು ಇಂತಹ ಕೃತ್ಯ ಎಸಗುವುದು ಇಡೀ ವ್ಯವಸ್ಥೆಗೆ ಕಪ್ಪುಚುಕ್ಕೆ. ಮಿತಿಮೀರಿದ ವಲಸೆಯನ್ನು ತಕ್ಷಣವೇ ನಿಯಂತ್ರಿಸಬೇಕಾಗಿದೆ ಎಂದು ನಾಗರಿಕರೊಬ್ಬರು ಕಳವಳ ವ್ಯಕ್ತಪಡಿಸಿದ್ದಾರೆ.

ಭದ್ರತಾ ಲೋಪದ ಪ್ರಶ್ನೆ: ಅದೂ ವಿಧಾನಸೌಧದ ಮುಂಭಾಗದಲ್ಲೇ ಈ ತರಹ ಆಗಬೇಕಾ? ಅಲ್ಲಿ ಕಾವಲು ಕಾಯುವ ಪೊಲೀಸರು ಏನು ಮಾಡುತ್ತಿದ್ದಾರೆ? ಎಂದು ಆಡಳಿತ ವ್ಯವಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಕಲಿ ಡ್ರಾಮಾದ ಶಂಕೆ: ವಿಧಾನಸೌಧದಂತಹ ಪ್ರಮುಖ ಫೋಟೋ ಪಾಯಿಂಟ್‌ಗಳಲ್ಲಿ ಕಾಯಂ ಆಗಿ ಕಠಿಣ ಪೊಲೀಸ್ ಗಸ್ತು ಇರಬೇಕು. ಈ ಕಾಲದ ಪುಂಡರು ಕೇವಲ ಸೋಶಿಯಲ್ ಮೀಡಿಯಾ ಲೈಕ್ಸ್ ಮತ್ತು ರೀಚ್‌ಗಾಗಿಯೇ ಇಂತಹ ನಕಲಿ ಡ್ರಾಮಾಗಳನ್ನು ಸೃಷ್ಟಿಸಿದರೂ ಆಶ್ಚರ್ಯವಿಲ್ಲ ಎಂದು ಕೆಲವರು ಎಚ್ಚರಿಸಿದ್ದಾರೆ.

ವಿಧಾನಸೌಧದಂತಹ ಹೈ-ಸೆಕ್ಯುರಿಟಿ ವಲಯದಲ್ಲಿ ಈ ರೀತಿಯ ಘಟನೆ ನಡೆದಿರುವುದು ತಿಳಿಯುತ್ತಿದ್ದಂತೆ ಅಲರ್ಟ್ ಆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ದಾಂಧಲೆ ನಡೆಸಿ ಗಲಾಟೆ ಸೃಷ್ಟಿಸಿದ್ದ ನಾಲ್ವರು ನೇಪಾಳಿ ಮೂಲದ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಕಡ್ಡಾಯ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಸದ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ