LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಮೆಟ್ರೋ ಸಮಸ್ಯೆಗಳಿಗೆ ಕೇಂದ್ರದ ಎಂಟ್ರಿ ತೇಜಸ್ವಿ ಸೂರ್ಯ ದೂರು ಬಳಿಕ ತನಿಖೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಸಿಲಿಕಾನ್ ಸಿಟಿಯ ಜೀವನಾಡಿಯಾಗಿರುವ ನಮ್ಮ ಮೆಟ್ರೋ ರೈಲು ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ಸಮಗ್ರ ತನಿಖೆ ನಡೆಸಿ, ಕೈಗೊಂಡಿರುವ ಪರಿಹಾರ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು (CCRS) ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (BMRCL) ಕಡಕ್ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕಳೆದ ಮೂರು ವರ್ಷಗಳಲ್ಲಿ ನಡೆದಿದ್ದ ಸರಣಿ ತಾಂತ್ರಿಕ ದೋಷಗಳು ಹಾಗೂ 20 ಕ್ಕೂ ಹೆಚ್ಚು ಸೇವಾ ವ್ಯತ್ಯಯಗಳ ಬಗ್ಗೆ ದಾಖಲೆ ಸಮೇತ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಬಿದ್ದಿದ್ದು, ಈ ಬಗ್ಗೆ ಸೂರ್ಯ ತಮ್ಮ X (ಟ್ವಿಟರ್) ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿದ್ದಾರೆ.

3 ವರ್ಷಗಳ ಮೆಟ್ರೋ ಎಡವಟ್ಟುಗಳ ಆಡಿಟಿಂಗ್‌ಗೆ ಆದೇಶ

ಇತ್ತೀಚೆಗೆ ಜೂನ್ 23 ರಂದು ನಮ್ಮ ಮೆಟ್ರೋದ ಪರ್ಪಲ್ ಲೈನ್‌ನಲ್ಲಿ (ನೇರಳೆ ಮಾರ್ಗ) ಉಂಟಾಗಿದ್ದ ತಾಂತ್ರಿಕ ದೋಷ ಹಾಗೂ ಸೇವಾ ವ್ಯತ್ಯಯದಿಂದಾಗಿ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಜೂನ್ 25 ರಂದು ರೈಲ್ವೆ ಸುರಕ್ಷತಾ ಆಯುಕ್ತರಿಗೆ ಪತ್ರ ಬರೆದು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದರು.

ಈ ದೂರಿಗೆ ಅಧಿಕೃತವಾಗಿ ಉತ್ತರಿಸಿರುವ ಮುಖ್ಯ ರೈಲ್ವೆ ಸುರಕ್ಷತಾ ಆಯುಕ್ತರಾದ ಜನಕ್ ಕುಮಾರ್ ಗರ್ಗ್ ಅವರು, ಜೂನ್ 23ರ ಘಟನೆ ಮಾತ್ರವಲ್ಲದೆ, ಕಳೆದ ಮೂರು ವರ್ಷಗಳಲ್ಲಿ ನಮ್ಮ ಮೆಟ್ರೋ ನೆಟ್‌ವರ್ಕ್‌ನಲ್ಲಿ ಸಂಭವಿಸಿರುವ ಎಲ್ಲಾ ರೈಲು ಸೇವೆಗಳ ಅಡ್ಡಿ ಆತಂಕಗಳ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ (MD) ಸೂಚಿಸಿದ್ದಾರೆ. ಇದರೊಂದಿಗೆ ಮೆಟ್ರೋ ರೈಲ್ವೆ ವ್ಯವಸ್ಥೆಯ ಕಾರ್ಯಾಚರಣೆ ಮತ್ತು ನಿರ್ವಹಣಾ ದಕ್ಷತೆಯ ಬಗ್ಗೆ ಸಂಪೂರ್ಣ ಆಡಿಟಿಂಗ್ ನಡೆಸಲು ಆದೇಶಿಸಲಾಗಿದೆ.

ಸಚಿವ ಕೃಷ್ಣಭೈರೇಗೌಡ ಅವರಿಗೆ ಟ್ಯಾಗ್: ಸರ್ಕಾರದ ಹೊಣೆಗಾರಿಕೆ ಪ್ರಶ್ನಿಸಿದ ಸಂಸದ

ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರ ಅಧಿಕೃತ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ, ಈ ಪತ್ರವನ್ನು ಬಿಎಂಆರ್ಸಿಎಲ್ ಆಡಳಿತ ಮಂಡಳಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಟ್ಯಾಗ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

“2024 ರ ವರ್ಷದಿಂದೀಚೆಗೆ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 20 ಕ್ಕೂ ಹೆಚ್ಚು ಬಾರಿ ಸೇವಾ ವ್ಯತ್ಯಯಗಳು ವರದಿಯಾಗಿವೆ. ಇದು ಮೆಟ್ರೋ ವ್ಯವಸ್ಥೆಯಲ್ಲಿನ ವ್ಯವಸ್ಥಿತ ವೈಫಲ್ಯಗಳನ್ನು (Systemic Failures) ಎತ್ತಿ ತೋರಿಸುತ್ತಿದ್ದು, ತಕ್ಷಣವೇ ಸರಿಪಡಿಸುವ ಕ್ರಮಗಳು ಅಗತ್ಯವಾಗಿವೆ. ನಿರಂತರ ಎಡವಟ್ಟುಗಳನ್ನು ಸರಿಪಡಿಸಿ ಪ್ರಯಾಣಿಕರ ವಿಶ್ವಾಸವನ್ನು ಪುನಃಸ್ಥಾಪಿಸಬೇಕು” ಎಂದು ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ.

ಪ್ರಯಾಣಿಕರ ಸುರಕ್ಷತೆಯೇ ಬಿಎಂಆರ್‌ಸಿಎಲ್ ಆದ್ಯತೆಯಾಗಲಿ

ಮೆಟ್ರೋದ ಕಾರ್ಯಾಚರಣೆಯಲ್ಲಿ ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿರುವ ಸಂಸದರು, “ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲತೆಯು ಬಿಎಂಆರ್‌ಸಿಎಲ್‌ನ ಅತ್ಯುನ್ನತ ಆದ್ಯತೆಯಾಗಬೇಕೇ ಹೊರತು, ಅದನ್ನು ಕೇವಲ ಕೊನೆಯ ಆಯ್ಕೆಯಾಗಿ ಪರಿಗಣಿಸಬಾರದು. ನಮ್ಮ ಮೆಟ್ರೋದ ಕಾರ್ಯಾಚರಣೆ ಮತ್ತು ಸೂಕ್ತ ನಿರ್ವಹಣೆಗೆ ಜವಾಬ್ದಾರರಾಗಿರುವ ಪ್ರಾಧಿಕಾರವಾಗಿ, ನಾಗರಿಕರಿಗೆ ಸುರಕ್ಷಿತ, ವಿಶ್ವಾಸಾರ್ಹ ಮತ್ತು ತಡೆರಹಿತ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವೇ ಸಂಪೂರ್ಣ ಜವಾಬ್ದಾರಿಯನ್ನು ಹೊಂದಿದೆ. ಹೀಗಾಗಿ ರಾಜ್ಯ ಸರ್ಕಾರವು ಇದನ್ನು ತಕ್ಷಣದ ತುರ್ತುಸ್ಥಿತಿಯೊಂದಿಗೆ ಪರಿಗಣಿಸಬೇಕು” ಎಂದು ಆಗ್ರಹಿಸಿದ್ದಾರೆ.

ಒಟ್ಟಾರೆಯಾಗಿ, ನಿರಂತರ ತಾಂತ್ರಿಕ ದೋಷಗಳಿಂದ ಬೇಸತ್ತಿದ್ದ ಲಕ್ಷಾಂತರ ಮೆಟ್ರೋ ಪ್ರಯಾಣಿಕರಿಗೆ ಸಂಸದರ ದೂರಿನ ಮೇರೆಗೆ ಸದ್ಯ ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರು ನೀಡಿರುವ ಕಡಕ್ ತನಿಖಾ ಆದೇಶವು ಭವಿಷ್ಯದಲ್ಲಿ ವ್ಯವಸ್ಥೆ ಸುಧಾರಿಸುವ ಹೊಸ ಭರವಸೆಯನ್ನು ಮೂಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ