LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇನ್‌ಸ್ಟಾಗ್ರಾಮ್‌ನಲ್ಲಿ ಧಗಧಗಿಸಿದ ವಿವಾದ: ಮತಾಂತರದ ಆರೋಪ ಮಾಡಿದ ಮಹಿಳಾ ಪತ್ರಕರ್ತೆ ವಿರುದ್ಧ ತಿರುಗಿಬಿದ್ದ ಉರ್ಫಿ ಜಾವೇದ್

ಸಾಮಾಜಿಕ ಜಾಲತಾಣಗಳಲ್ಲಿ ಸದಾ ತಮ್ಮ ವಿಭಿನ್ನ ಉಡುಪುಗಳ ಮೂಲಕವೇ ಸದ್ದು ಮಾಡುವ ನಟಿ ಉರ್ಫಿ ಜಾವೇದ್, ತಮ್ಮ ಧರ್ಮ ಬದಲಾವಣೆ ಹಾಗೂ ಉಡುಪಿನ ಶೈಲಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಪತ್ರಕರ್ತೆಯೊಬ್ಬರಿಗೆ ಸಾಮಾಜಿಕ ಜಾಲತಾಣದಲ್ಲೇ ತಕ್ಕ ಶಾಸ್ತಿ ಮಾಡಿದ್ದಾರೆ. ಉರ್ಫಿ ಜಾವೇದ್ ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಮತ್ತು ಅವರು ಸಮಾಜದಲ್ಲಿ ಅರೆನಗ್ನವಾಗಿ ಓಡಾಡುತ್ತಾರೆ ಎಂದು ಪತ್ರಕರ್ತೆಯೊಬ್ಬರು ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಉರ್ಫಿ ತಮ್ಮದೇ ಶೈಲಿಯಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಪತ್ರಕರ್ತೆ ಮೀತಾ ಚೌಧರಿ ಅವರ ಆರೋಪಗಳಿಗೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಉರ್ಫಿ, ಇಂತಹ ಮೂರ್ಖರೆಲ್ಲಾ ತಮ್ಮನ್ನು ಪತ್ರಕರ್ತರು ಎಂದು ಕರೆದುಕೊಳ್ಳುತ್ತಾರೆ. ಮೊದಲು ಸ್ವಲ್ಪ ಮಾಹಿತಿ ತಿಳಿದುಕೊಂಡು ಮಾತನಾಡಿ, ನಾನು ನನ್ನ ಹೆಸರನ್ನಾಗಲಿ ಅಥವಾ ಧರ್ಮವನ್ನಾಗಲಿ ಎಂದಿಗೂ ಬದಲಾಯಿಸಿಲ್ಲ. ಅಷ್ಟೇ ಅಲ್ಲದೆ ನಾನು ಯಾವುದೇ ಧರ್ಮವನ್ನು ನಂಬುವುದಿಲ್ಲ. ಒಮ್ಮೆ ಗೂಗಲ್ ಮಾಡಿ ನೋಡಿ, ನಾನು ಎಷ್ಟು ಶೋಗಳಲ್ಲಿ ಭಾಗವಹಿಸಿದ್ದೇನೆ ಎಂಬುದು ತಿಳಿಯುತ್ತದೆ ಎಂದು ಕಿಡಿಕಾರಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಆ ಪತ್ರಕರ್ತೆಯು ಉರ್ಫಿ ಅವರನ್ನು ಮತ್ತಷ್ಟು ನಿಂದಿಸಿ ಸಂದೇಶ ಕಳುಹಿಸಿದ್ದು, ಸಮಾಜದಲ್ಲಿ ನಿಮ್ಮ ನಡವಳಿಕೆಯನ್ನು ನೋಡಿ, ಬೊಟಾಕ್ಸ್ ಮತ್ತು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡರೆ ಯಾರು ಬೇಕಾದರೂ ಸುಂದರವಾಗಿ ಕಾಣಬಹುದು ಎಂದು ತಿರುಗೇಟು ನೀಡಿದ್ದರು. ಈ ಚಾಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡಿರುವ ಉರ್ಫಿ, ಆಕೆಗೆ ಸತ್ಯ ಏನೆಂದೇ ಗೊತ್ತಿಲ್ಲ. ನಾನು ಯಾವುದೇ ಸರ್ಜರಿ ಮಾಡಿಸಿಕೊಂಡಿಲ್ಲ ಎಂದು ಬರೆಯುವ ಮೂಲಕ ಪತ್ರಕರ್ತೆಯ ಧೋರಣೆಯನ್ನು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ಉರ್ಫಿ ಜಾವೇದ್ ಅವರ ಈ ಆಕ್ರೋಶದ ಪೋಸ್ಟ್‌ಗಳು ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ