LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ಚಲನಚಿತ್ರ ನೀತಿ, ಸರ್ಕಾರದಿಂದ ಓಟಿಟಿ ವೇದಿಕೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಸಿಎಂಗೆ ಫಿಲಂ ಚೇಂಬರ್ ಮನವಿ

ಬೆಂಗಳೂರು: ಕನ್ನಡ ಚಲನಚಿತ್ರ ರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ, ಸರ್ಕಾರದಿಂದ ಓಟಿಟಿ ವೇದಿಕೆ, ಏಕಪರದೆ ಚಿತ್ರಮಂದಿರಗಳ ನವೀಕರಣ ಸೇರಿ ವಿವಿಧ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಮನವಿ ಸಲ್ಲಿಸಲಾಗಿದೆ.

ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಡಾ. ಜಯಮಾಲಾ ನೇತೃತ್ವದಲ್ಲಿ ನಿಯೋಗ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿಯಾಗಿ ವಿವಿಧ ಬೇಡಿಕೆ ಒಳಗೊಂಡ ಮನವಿ ಸಲ್ಲಿಸಿದ್ದು, ಮನವಿ ಸ್ವೀಕರಿಸಿದ ಸಿಎಂ ಡಿ.ಕೆ. ಶಿವಕುಮಾರ್ ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎನ್ನುವುದನ್ನು ಆಲೋಚಿಸಲಾಗುವುದು. ಹೊಸ ಚಲನಚಿತ್ರ ನೀತಿ ತರಲು ಚರ್ಚೆ, ಸಹಾಯಧನ ಹೆಚ್ಚಳ, ಚಿತ್ರನಗರಿ ನಿರ್ಮಾಣ ನಿರ್ಮಾಣಕ್ಕೆ ಘೋಷಣೆ ಮಾಡಿದ ಅನುದಾನ ಬಿಡುಗಡೆ ಬಗ್ಗೆ ಹಣಕಾಸು ಇಲಾಖೆ ಎಸಿಎಸ್ ಗೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

ಸರ್ಕಾರದಿಂದಲೇ ಓಟಿಟಿ ವೇದಿಕೆ ಪ್ರಾರಂಭಿಸಬೇಕು. ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ ಮೂಲಕ ಚಿತ್ರಮಂದಿರಗಳ ಲೈಸೆನ್ಸ್ ನವೀಕರಣಕ್ಕೆ ಏಕಗವಾಕ್ಷಿ ಯೋಜನೆ ತರಬೇಕು. ಹೊಸ ಚಿತ್ರಮಂದಿರ ನಿರ್ಮಾಣಕ್ಕೆ ವಿಶೇಷ ಪ್ರೋತ್ಸಾಹ ತೆರಿಗೆ ಮೂಲ ಸೌಕರ್ಯ ವ್ಯವಸ್ಥೆ ಮಾಡಬೇಕು. ಹಳೆಯ ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನಿಕರಣಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲದ ವ್ಯವಸ್ಥೆ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿದೆ.

ನಿಯೋಗದೊಂದಿಗೆ ಕನ್ನಡ ಚಿತ್ರರಂಗದ ವಿವಿಧ ವಿಷಯಗಳ ಕುರಿತು ಚರ್ಚಿಸಿದ ಸಿಎಂ, ನಾಡಿನ ಕಲೆ ಮತ್ತು ಚಲನಚಿತ್ರ ರಂಗದ ಬೆಳವಣಿಗೆಗೆ ನಮ್ಮ ಸರ್ಕಾರ ಸದಾ ಪೂರಕವಾಗಿ ಸ್ಪಂದಿಸಲಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಡಳಿಯ ಮಾಜಿ ಅಧ್ಯಕ್ಷರಾದ ಗಂಗರಾಜು, ಸಾ. ರಾ. ಗೋವಿಂದ್, ಗೌರವ ಕಾರ್ಯದರ್ಶಿ ರಮೇಶ್ ಬಾಬು, ಹಿರಿಯ ನಟ ಸುಂದರ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ